Homeಮುಖಪುಟಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

- Advertisement -
- Advertisement -

ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿ)ಯ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯು ಮತಧರ್ಮೀಯವಾದ ಸಂದೇಶಗಳನ್ನು ಬಿತ್ತರಿಸಿ ತುಂಬ ತಪ್ಪು ಮಾಡುತ್ತಿದೆ ಎಂದು ಆಕ್ಷೇಪಿಸಿ 272 ಕಲಾವಿದರು ಎನ್‌ಎಸ್‌ಡಿಯ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರೀಯ ನಾಟಕಶಾಲೆಯ ಅಧಿಕೃತ ಇನ್‍ಸ್ಟಾಗ್ರಾಮ್ ಖಾತೆಯು ಮತಧರ್ಮೀಯವಾದ ಹಬ್ಬಗಳನ್ನು ಎತ್ತಿಹಿಡಿಯುತ್ತಿದೆ. ಮತಧರ್ಮೀಯವಾದ ಚಿತ್ರಗಳು ಹಾಗೂ ಪ್ರತಿಮಾ ಸಂಕೇತಗಳನ್ನು ಪ್ರದರ್ಶಿಸಲು ತೊಡಗಿದೆ ಎಂದು 272 ಮಂದಿ ಕಲಾವಿದ-ಕಲಾವಿದೆಯರು, ಸಾಹಿತಿಗಳು, ಅಧ್ಯಾಪಕ-ಅಧ್ಯಾಪಿಕೆಯರು, ಸಂಸ್ಕೃತಿ ಕ್ಷೇತ್ರದ ಕಾಯಕದವರು, ಮತ್ತು ಆ ಶಾಲೆಯ ಪದವೀಧರರು, ಪದವೀಧರೆಯರು ಹಾಗೂ ಈ ಶಾಲೆಯಲ್ಲಿ ಈ ಹಿಂದೆ ಪಾಠ ಮಾಡಿದವರು ಬಹಿರಂಗ ಪತ್ರಬರೆದಿದ್ದು, “ಇದನ್ನು ಬಹಳ ಆತಂಕದಿಂದ ಗಮನಿಸಿದ್ದೇವೆ” ಎಂದಿದ್ದಾರೆ.

“ಯಾವುದೇ ಮತಧರ್ಮಕ್ಕೆ ಸೇರಿದ ಯಾವುದೇ ಬಗೆಯ ಸಂದೇಶ ಚಿತ್ರ ಹಾಗೂ ಪ್ರತಿಮಾ ಸಂಕೇತಗಳನ್ನು ಸರ್ಕಾರವು ನಡೆಸುವ ಸಾರ್ವಜನಿಕ ಸಂಸ್ಥೆಗಳು ಬಿತ್ತರಿಸುವುದು ಆ ಸಂಸ್ಥೆಗಳ ಕರ್ತವ್ಯಧರ್ಮಕ್ಕೆ ಹೊರತಾದುದು. ಈ ವಿಷಯವನ್ನು ನಾವು, ಈ ಮೂಲಕ, ರಾಷ್ಟ್ರೀಯ ನಾಟಕಶಾಲೆಯ ಅಧಿಕಾರಿಗಳಾದ ತಮ್ಮ ಗಮನಕ್ಕೆ ತಂದು, ಇಂಥ ಕೆಲಸವು ಈಗಿಂದೀಗ ನಿಲ್ಲುವಂತೆ ನೋಡಿಕೊಳ್ಳಬೇಕು” ಎಂದು ಜೀವಪರ ಮನಸ್ಸುಗಳು ಆಗ್ರಹಿಸಿವೆ.

ಇದನ್ನೂ ಓದಿರಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

ರಾಷ್ಟ್ರೀಯ ನಾಟಕ ಶಾಲೆಯು ಮತಧರ್ಮೀಯವಾದ ಹಬ್ಬಗಳ ಆಚರಣೆಯನ್ನು ಎತ್ತಿಹಿಡಿಯುವ ಸಂದೇಶಗಳನ್ನು ಬಿತ್ತರಿಸುವುದರಿಂದಾಗಿ, ಕಲಾಬೋಧನೆಯ ತನ್ನ ಅಸಲು ಕರ್ತವ್ಯವನ್ನು ಕಡೆಗಣಿಸಿ, ತನ್ನ ಘನತೆಗೌರವಗಳಿಗೆ ಧಕ್ಕೆ ಉಂಟುಮಾಡಿಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಸಾರ್ವಜನಿಕ ಸಂಪರ್ಕತೆಗೆ ಬೇಕಾದ ಕುಶಲತೆಯ ವಿಷಯದಲ್ಲಿ ನಿಮಗೆ, ಒಂದು ವೇಳೆ, ನೆರವು ಬೇಕಾದಲ್ಲಿ, ದಯವಿಟ್ಟು, ಶಾಲೆಯಲ್ಲಿ ಈ ಹಿಂದೆ ಪಾಠ ಮಾಡುತ್ತಿದ್ದ ಅಧ್ಯಾಪಕರನ್ನು, ಅಧ್ಯಾಪಿಕೆಯರನ್ನು ಕೇಳಿ; ಕಲೆ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರನ್ನು ಕೇಳಿ; ಅಧ್ಯಾಪನ ಕ್ಷೇತ್ರದ ಧೀಮಂತರನ್ನು ಕೇಳಿ; ಈ ನಮ್ಮ ಶಾಲೆಯ ಪದವೀಧರರಲ್ಲಿ ಸಮರ್ಥರಾದವರನ್ನು ಕೇಳಿ. ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾದ ಈ ಸಂಸ್ಥೆಯು ತನ್ನ ಚಹರೆ ಗುರುತುಗಳನ್ನು ಉಳಿಸಿ, ಬೆಳೆಸಿಕೊಳ್ಳಲು ಅವರು ನಿಮಗೆ ಸಂತಸದಿಂದ ನೆರವಾಗುತ್ತಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎನ್‌ಎಸ್‌ಡಿಯ ಅಧಿಕಾರಿವರ್ಗದ ಮುಂದೆ ಇಡಲಾಗಿರುವ ಬೇಡಿಕೆಗಳು

“ರಾಷ್ಟ್ರೀಯ ನಾಟಕಶಾಲೆಯ ಸಾಮಾಜಿಕ ಸಂಪರ್ಕದ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕ ಸಂಪರ್ಕದ ಅದರ ಮತ್ತೆಲ್ಲ ವಹಿವಾಟಿನಲ್ಲಿ ಈಗ ಕಾಣಿಸಿಕೊಂಡಿರುವ ಮತ್ತು ಕಾಣಿಸಿಕೊಳ್ಳುತ್ತಿರುವ ಮತಧರ್ಮೀಯವಾದ ಎಲ್ಲ ಸಂದೇಶ, ಒಕ್ಕಣೆ ಹಾಗೂ ಚಿತ್ರಗಳನ್ನು ತಾವು ಈಗಿಂದೀಗ ಹಿಂದಕ್ಕೆ ಪಡೆದು, ಅಳಿಸಿಹಾಕಬೇಕು” ಎಂದು ಸಹಿ ಮಾಡಿರುವ ಎಲ್ಲ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

“ರಾಷ್ಟ್ರೀಯ ನಾಟಕ ಶಾಲೆಯ ಸಾಮಾಜಿಕ ಸಂಪರ್ಕದ ಜಾಲತಾಣಗಳಲ್ಲಿ ಕಾಣಿಸಿಕೊಳ್ಳಬೇಕಾದದ್ದು ರಂಗಭೂಮಿ, ಕಲೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂದೇಶ ಮತ್ತು ಒಕ್ಕಣೆಗಳು ಮಾತ್ರ. ನಮ್ಮ ಈ ಸಂಸ್ಥೆಯ ಘನತೆ ಗೌರವಗಳನ್ನು, ಇದರ ಉನ್ನತ ಮಾನದಂಡಗಳನ್ನು ಉಳಿಸಿ, ಬೆಳೆಸುವಲ್ಲಿ ಹೆಚ್ಚಿನ ಮುತುವರ್ಜಿ ಕಾಣಿಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಎನ್‌ಎಸ್‌ಡಿಗೆ ಪತ್ರ ಬರೆದಿರುವವರು (ಪ್ರಾತಿನಿಧಿಕ ಹೆಸರುಗಳು)
ಎನ್‌ಎಸ್‌ಡಿಗೆ ಪತ್ರ ಬರೆದಿರುವವರು (ಪ್ರಾತಿನಿಧಿಕ ಹೆಸರುಗಳು)

ಖ್ಯಾತ ಕವಿ-ನಾಟಕಕಾರ-ರಂಗನಿರ್ದೇಶಕ ರಘುನಂದನ ಅವರು ದೆಹಲಿಯ ರಾಷ್ಟ್ರೀಯ ನಾಟಕಶಾಲೆ (ಎನ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿ)ಯಲ್ಲಿ ಓದಿದವರು. ರಂಗಾಯಣ, ನೀನಾಸಮ್, ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಹಲವು ದಶಕಗಳಿಂದ ಕೆಲಸಮಾಡುವುದರ ಜೊತೆಗೆ ಅನೇಕ ವರ್ಷಗಳ ಕಾಲ ದೆಹಲಿಯ ಆ ನಾಟಕಶಾಲೆಗೆ ಅತಿಥಿ ಪ್ರಾಧ್ಯಾಪಕ ಹಾಗೂ ರಂಗನಿರ್ದೇಶಕರಾಗಿ ಹೋಗಿಬರುತ್ತಿದ್ದವರು. ಅಲ್ಲಿನ ಶೈಕ್ಷಣಿಕ ಮಂಡಳಿಯ ಸದಸ್ಯರಾಗಿದ್ದವರು.

ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಎನ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿ ಶುರುವಾದದ್ದು 1957-58ರಲ್ಲಿ. ಈ ಶಾಲೆಗೆ ಬುನಾದಿ ಹಾಕಿ ಕಟ್ಟಿದವರಲ್ಲಿ ಇಬ್ರಾಹಿಂ ಅಲ್ಕಾಜಿ಼ ಮತ್ತು ಬಿ. ವಿ. ಕಾರಂತ ಥರದ ಮಹಾನ್‌ ವ್ಯಕ್ತಿತ್ವಗಳಿವೆ. ನಿತ್ಯವೂ ಅವರನ್ನು ನೆನೆಯಬೇಕು. ನಿಜವಾದ ಅರ್ಥದಲ್ಲಿ ಅಲ್ಕಾಜಿ಼ ಅವರು ದೇಶಪ್ರೇಮಿಯಾಗಿದ್ದರು, ದೇಶ ಕಟ್ಟುವ ಕೆಲಸ ಮಾಡಿದರು. ಪ್ರಧಾನಿ ನೆಹರೂ ಅವರಿಗೆ ಅಲ್ಕಾಜಿ಼ ಅವರ ಮೇಲೆ ಅಪಾರ ನಂಬಿಕೆ ಇತ್ತು. ಎನ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿಯಲ್ಲಿನ ತಮ್ಮ ಕೆಲಸದ ಮೂಲಕ ನಮ್ಮ ದೇಶವು ಸೆಕ್ಯೂಲರಿಸಮ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ ಕಡೆಗೆ ಸಾಗುವುದರತ್ತ ತಮ್ಮ ಪಾಲು ನೀಡಿದವರು. ನಂತರದಲ್ಲಿ ಬಂದ ಕಾರಂತರು ಈ ಆಶಯವನ್ನು ಮತ್ತಷ್ಟು ವಿಸ್ತರಿಸಿದರು, ಆಳಗೊಳಿಸಿದರು. ಶಾಲೆಯ ಇತಿಹಾಸದಲ್ಲಿ ಏಳುಬೀಳುಗಳಿದ್ದರೂ ಎಲ್ಲರನ್ನೂ ಒಳಗೊಳ್ಳುವ ಬಂಧುತ್ವವನ್ನು ಕಾಪಾಡಿಕೊಂಡು ಬರುತ್ತಿತ್ತು. ಆದರೆ ಈಗ ಉಲ್ಟಾ ಆಗಿದೆ” ಎಂದು ವಿಷಾದಿಸಿದರು.

ಎನ್‌ಎಸ್‌ಡಿ ಮತೀಯ ವಿಚಾರಗಳಿಗೆ ಎಂದಿಗೂ ತಲೆ ಹಾಕಿರಲಿಲ್ಲ. ಈಗ ಹಾಕುತ್ತಿದೆ. ಈಗ ಆಯಾಕಟ್ಟಿನ ಜಾಗದಲ್ಲಿ ಕುಳಿತಿರುವವರು ಕಲಾವಿದರಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, “ಕಡವಾ ಚೌತ್‌ ಆಚರಣೆಯ ಪೋಸ್ಟ್‌ ಹಾಕಲಾಗಿದೆ. ಅದು ಪತಿ ಪೂಜೆಯನ್ನು ಪ್ರತಿಪಾದಿಸುತ್ತದೆ. ಹೆಂಡತಿ ದಿನಪೂರ್ತಿ ಉಪವಾಸ ಇರಬೇಕು, ಗಂಡನಿಗೆ ಬಾಯಿತುತ್ತು ತಿನಿಸಬೇಕು, ಜರಡಿ ಹಿಡಿದು ಗಂಡನ ಮುಖ ನೋಡಬೇಕು. ಇದು ಉತ್ತರಭಾರತದಲ್ಲಿ ಆಚರಣೆಯಲ್ಲಿದೆ. ಅಷ್ಟೇ ಅಲ್ಲದೆ ಗಂಡಾಳ್ವಿಕೆಯನ್ನು ಪ್ರತಿನಿಧಿಸುವ ಆಚರಣೆ ಕಡವಾ ಚೌತ್‌. ಇದನ್ನು ಆಚರಿಸಿ ಎಂದು ಪ್ರಚಾರ ಮಾಡುವುದು ಸರಿಯೇ? ಹೆಣ್ಣು ಮಕ್ಕಳು ಗಂಡನ ಪಾದ ಪೂಜೆ ಮಾಡಿ ಆತನಿಗೆ ಅಧೀನವಾಗಿ ಇರಬೇಕಾ? ರಾಷ್ಟ್ರೀಯ ನಾಟಕ ಶಾಲೆ ಏನನ್ನು ಹೇಳಲು ಹೊರಟಿದೆ” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....