Homeಮುಖಪುಟಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಪಾಕ್ ಗೆಲುವು ಸಂಭ್ರಮಿಸಿದ್ದ ಆರೋಪದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಲಾಗಿದೆ

- Advertisement -
- Advertisement -

ಅಕ್ಟೋಬರ್ 24 ರಂದು ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ದಾಖಲಿಸಿದೆ. ಈ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬುಧವಾರ ಹಿಂದಿ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯ ತಿಳಿಸಿದ್ದಾರೆ.

ಆ ಸಂದರ್ಶನದ ಪ್ರತಿಯನ್ನು ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಶೇರ್‌ ಮಾಡಲಾಗಿದ್ದು, ಪಾಕಿಸ್ತಾನದ ವಿಜಯವನ್ನು ಆಚರಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಕುರಿತು ಹಿಂದಿಯಲ್ಲಿ ಒಂದು ಸಾಲು ಹಾಕಲಾಗಿದೆ.

ಇದನ್ನೂ ಓದಿ: ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

 

ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕ್ ಪಂದ್ಯದ ನಂತರ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ, ಪಾಕ್ ಗೆಲುವು ಸಂಭ್ರಮಿಸಿದ್ದ ಆರೋಪದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಲಾಗಿದೆ. ಬಿಜೆಪಿ ಯುವ ಮೋರ್ಚಾ ನಾಯಕ ಗೌರವ್ ರಾಜಾವತ್ ಅವರ ದೂರಿನ ಮೇರೆಗೆ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು ಬಳಿಕ ಮೂವರನ್ನು ಬಂಧಿಸಲಾಗಿದೆ.

“153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಐಪಿಸಿ ಸೆಕ್ಷನ್ 505 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆಗೆ ಶಿಕ್ಷೆ)  ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಆಗ್ರಾದ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

UP Says Sedition For Celebrating Pak Win; 3 J&K Students Arrested In Agra
(PC: NDTV) ಬಂಧಿಸಲ್ಪಟ್ಟ ವಿದ್ಯಾರ್ಥಿಗಳು

ಆಗ್ರಾದ ಆರ್‌ಬಿಎಸ್ ಎಂಜಿನಿಯರಿಂಗ್ ಕಾಲೇಜು ಸೋಮವಾರ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲ್‌ನಿಂದ ಅಮಾನತುಗೊಳಿಸಿದೆ.

T20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಿದ ಅಥವಾ ಭಾರತದ ವಿರುದ್ಧ ಪಾಕಿಸ್ತಾನದ ಜಯವನ್ನು ಸಂಭ್ರಮಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಒಟ್ಟು ಐದು ಜಿಲ್ಲೆಗಳಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇತ್ತ ಸಂಭ್ರಮಾಚರಣೆಯ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವು ದಾಖಲಿಸಿತ್ತು.


ಇದನ್ನೂ ಓದಿ: ಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು, ಪಂಜಾಬ್‌ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...