Homeಮುಖಪುಟಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ

- Advertisement -
- Advertisement -

ಆರ್‌ಎಸ್‌ಎಸ್‌ ಮತ್ತು ಗೋವಾ ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ಮತ್ತು ಗೋವಾದ ಮಾಜಿ ರಾಜ್ಯಪಾಲ ಹಾಗೂ ಮೇಘಾಲಯದ ಹಾಲಿ ರಾಜ್ಯಪಾಲರಾದ ಸತ್ಯ ಪಾಲ್ ಮಲ್ಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೆಜ್ಜೆ ಹೆಜ್ಜೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಮೊದಲ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರ ವಿತರಿಸುವ ವೇಳೆ ಕೋಟ್ಯಾಂತರ ರೂ ಗುಳುಂ ಮಾಡಿದ್ದಾರೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸತ್ಯ ಪಾಲ್ ಮಲ್ಲಿಕ್ ಆರೋಪಿಸಿದ್ದಾರೆ.

ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲನಾಗಿದ್ದ ವೇಳೆ ಎರಡು ಕಡತಗಳು ನನ್ನ ಮುಂದೆ ಬಂದಿದ್ದವು. ಒಂದು ಮುಖೇಶ್ ಅಂಬಾನಿಗೆ ಸೇರಿದ್ದರೆ ಮತ್ತೊಂದು ಆರ್‌ಎಸ್‌ಎಸ್‌ ನಾಯಕನಿಗೆ ಸೇರಿತ್ತು. ಅದಕ್ಕೆ ಸಹಿ ಹಾಕಿದರೆ 300 ಕೋಟಿ ಲಂಚ ಕೊಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಆ ಕೆಲಸ ಮಾಡಲಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ತಿಳಿಸಿದ್ದೆ ಎಂದು ಮಲ್ಲಿಕ್ ಹೇಳಿದ್ದಾರೆ.

ಬಿಜೆಪಿ ಭ್ರಷ್ಟಾಚಾರದ ರಾಜ್ಯಪಾಲರ ಹೇಳಿಕೆ ಬಂದ ನಂತರ ಗೋವಾ ಕಾಂಗ್ರೆಸ್ ಮತ್ತು ಟಿಎಂಸಿ ಪಕ್ಷಗಳು ಸಿಎಂ ಪ್ರಮೋದ್ ಸಾವಂತ್ ರಾಜೀನಾಮೆಗೆ ಪಟ್ಟು ಹಿಡಿದಿವೆ. ಸಿಎಂ ಸಾವಂತ್ ಅವರನ್ನು ಪದಚ್ಯುತಗೊಳಿಸಬೇಕು ಮತ್ತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಟಿಎಂಸಿ ಮುಖಂಡರು ಗೋವಾ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಒಬ್ಬ ರಾಜ್ಯಪಾಲರೆ ಪ್ರಧಾನಿಯವರ ಸ್ನೇಹಿತ ಅಂಬಾನಿ ಮತ್ತು ಆರ್‌ಎಸ್‌ಎಸ್‌ ಮುಖಂಡನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಇಷ್ಟು ದೊಡ್ಡ ಭ್ರಷ್ಟಾಚಾರದ ಪ್ರಕರಣವನ್ನು ಬಿಜೆಪಿ ಹತ್ತಿಕ್ಕಲು ಸಾಧ್ಯವಿಲ್ಲ, ಈ ಬಗ್ಗೆ ಉತ್ತರ ನೀಡಲೇಬೇಕು ಎಂದು ಕಾಂಗ್ರೆಸ್ ಹೇಳಿದೆ.

ರಾಜ್ಯಪಾಲರ ಹೇಳಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಇದುವರೆಗೂ ಪ್ರತಿಕ್ರಿಯಿಸಿಲ್ಲ. ಆದರೆ ಉಪ ಮುಖ್ಯಮಂತ್ರಿ ಮನೋಹರ್ ಅಜಗಾಂವ್ಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರು ರಾಜ್ಯಪಾಲರಾಗಿ ಆರಾಮ ಕುರ್ಚಿಯಲ್ಲಿ ಕೂತು ಆರೋಪ ಮಾಡುವುದು ಬಿಟ್ಟು ರಾಜೀನಾಮೆ ನೀಡಿ ಗೋವಾದಲ್ಲಿ ಚುನಾವಣೆಗೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.

ಚುನಾವಣೆಗೆ ಕೆಲವೇ ತಿಂಗಳು ಇರುವಾಗ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿರುವ ಪ್ರಮೋದ್ ಸಾವಂತ್ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ. ಬನ್ನಿ ಸಕ್ರಿಯ ರಾಜಕಾರಣ ಮಾಡಿ ಎಂದು ಕರೆ ನೀಡಿದ್ದಾರೆ.

ಮೂಲತಃ ಉತ್ತರ ಪ್ರದೇಶದವರಾದ ಸತ್ಯಪಾಲ್ ಮಲ್ಲಿಕ್ ರೈತ ಹೋರಾಟವನ್ನು ಸಹ ಬೆಂಬಲಿಸಿದ್ದರು. ಉತ್ತರ ಪ್ರದೇಶದಲ್ಲಿ ರೈತರ ಸಿಟ್ಟು ಮಡುಗಟ್ಟಿದೆ. ಹಾಗಾಗಿ ಕೆಲ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರು ಓಡಾಡಬೇಡಿ ಎಂದು ಸಲಹೆ ನೀಡಿದ್ದರು. ಅಲ್ಲದೆ ರೈತ ಹೋರಾಟವನ್ನು ನರೇಂದ್ರ ಮೋದಿಯವರು ನಿರ್ವಹಿಸುತ್ತಿರುವ ರೀತಿಗೆ ಬೇಸರ ವ್ಯಕ್ತಪಡಿಸಿದ್ದ ಅವರು, ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆದು ಎಂಎಸ್‌ಪಿ ಖಾತ್ರಿಗೊಳಿಸಬೇಕು ಎಂದು ಒತ್ತಾಯಿಸಿದ್ದರು.

ಅವರು ರಾಜ್ಯಪಾಲರಿಗೆ ಯಾವ ಅಧಿಕಾರಿಗಳು ಇಲ್ಲ ಎಂದು ಸಹ ಆರೋಪಿಸಿದ್ದರು. ’ದೇಶದ ರಾಜ್ಯಪಾಲರುಗಳು ಅತ್ಯಂತ ದುರ್ಬಲರಾಗಿದ್ದಾರೆ. ಅವರಿಗೆ ಒಂದು ಪತ್ರಿಕಾಗೋಷ್ಠಿ ಕರೆಯುವಷ್ಟೂ ಅಧಿಕಾರ ಇಲ್ಲದಂತಾಗಿದೆ. ನನ್ನ ಮನಸ್ಸಿನಲ್ಲಿರುವ ಸತ್ಯವನ್ನು ಹೇಳಿಕೊಳ್ಳಲೂ ಸಹ ಸಾಧ್ಯವಾಗದ ಸ್ಥಿತಿ ಉಂಟಾಗಿದೆ’ ಎಂದು ಹೇಳಿದ್ದರು.


ಇದನ್ನೂ ಓದಿ: ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...