Homeಕರ್ನಾಟಕಕಲಬುರಗಿ: ತಂಗಿಯನ್ನು ಪ್ರೀತಿಸಿದ್ದ ಎಂಬ ಕಾರಣಕ್ಕೆ ಸ್ನೇಹಿತನನ್ನೆ ಕೊಂದ ಯುವಕ

ಕಲಬುರಗಿ: ತಂಗಿಯನ್ನು ಪ್ರೀತಿಸಿದ್ದ ಎಂಬ ಕಾರಣಕ್ಕೆ ಸ್ನೇಹಿತನನ್ನೆ ಕೊಂದ ಯುವಕ

- Advertisement -
- Advertisement -

ಕಲಬುರಗಿಯಲ್ಲಿ ಯುವಕರ ಗುಂಪೊಂದು ಸಹೋದರರಿಬ್ಬರ ಮೇಲೆ ದಾಳಿ ಮಾಡಿ ಅದರಲ್ಲಿ ಮಹೇಶ್‌ ಶಿವಕುಮಾರ ಬೆಣ್ಣೂರಕರ್‌ ಎಂಬುವವರನ್ನು ಕೊಲೆ ಮಾಡಿದ್ದ ಪ್ರಕರಣ ಎಲ್ಲಾ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಈ ಘಟನೆ ಮಾಸುವ ಮೊದಲೇ ತನ್ನ ತಂಗಿಯನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಯುವತಿಯ ಯುವಕನೊಬ್ಬ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ.

ನಗರದ ಓಂನಗರದಲ್ಲಿನ ಗ್ಯಾರೇಜ್‌ ಒಂದರಲ್ಲಿ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದ ಆಕಾಶ್‌ (22) ಮೃತಪಟ್ಟ ಯುವಕ. ಈತ ತನ್ನ ಸ್ನೇಹಿತ ಶ್ರೀನಿಧಿಯ ಸಹೋದರಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಹಲವು ಬಾರಿ ಆಕಾಶ್‌ ಮತ್ತು ಶ್ರೀನಿಧಿ ನಡುವೆ ಗಲಾಟೆ ಕೂಡ ಆಗಿತ್ತು. ಕೆಲ ದಿನಗಳ ಹಿಂದೆ ಶ್ರೀನಿಧಿ ಅವರ ಸಹೋದರಿ ಆಕಾಶ್‌ ಅವರೊಂದಿಗೆ ಮನೆ ಬಿಟ್ಟು ಹೋಗಿದ್ದರು. ಈ ಘಟನೆಯ ನಂತರ ಆಕ್ರೋಶಗೊಂಡಿದ್ದ ಶ್ರೀನಿಧಿ, ಆಕಾಶ್‌ ಹತ್ಯೆಗೆ ಸಂಚು ರೂಪಿಸಿದ್ದ. ನಿನ್ನೆ ರಾತ್ರಿ ಆಕಾಶ್ ನನ್ನು ಕರೆದುಕೊಂಡು ಹೋಗಿ, ಚಾಕುವಿನಿಂದ ಇರಿದು ಹತ್ಯೆ ಮಾಡಲಿದ್ದಾನೆ ಎನ್ನಲಾಗುತ್ತಿದೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂತಹ ಘಟನೆಗಳು ಇದೇ ಮೊದಲೇನಲ್ಲ. ಪರಸ್ಪರ ಜೊತೆಯಾಗಿದ್ದ ಸ್ನೇಹಿತರು ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಿಗೆ ದ್ವೇಷ ಹುಟ್ಟಿಸಿಕೊಳ್ಳುವುದು, ತಂದೆ, ತಾಯಂದಿರನ್ನು ಮಕ್ಕಳು, ಮಕ್ಕಳನ್ನು ತಂದೆ ತಾಯಂದಿರೇ ಕೊಲ್ಲುವಂತಹ ಘಟನೆಗಳು ಸಿನಿಮಾಗಳಲ್ಲಷ್ಟೆ ನೋಡುತ್ತಿದ್ದೆವು. ಆದರೆ ಇವೆಲ್ಲವೂ ಇಂದಿನ ಸಮಾಜದಲ್ಲಿ ನಡೆಯುತ್ತಿರುವ ನೈಜ ಘಟನೆಗಳಾಗಿ ಬದಲಾಗಿವೆ.

ಪ್ರೀತಿಯ ವಿಷಯದಲ್ಲಂತೂ ಜಾತಿ ಕಾರಣಕ್ಕೆ ಹೆತ್ತ ಮಕ್ಕಳು, ಒಡಹುಟ್ಟಿದವರು ಎಂಬುದನ್ನು ನೋಡದೇ ಕೊಲೆಗೈಯ್ಯುವ ಹೆಚ್ಚಾಗಿದೆ. ಜನರ ಆಲೋಚನೆ ಹೀಗೆ ಸಂಕುಚಿತಗೊಂಡಿದ್ದೇಕೆ? ಪ್ರೀತಿ ಮದುವೆಯ ಕುರಿತು ಜನರಲ್ಲಿ ಪೂರ್ವಗ್ರಹಗಳು ಹೆಚ್ಚಾಗಿರುವುದೇಕೆ? ಜಾತಿ, ಧರ್ಮ ಸೇರಿದಂತೆ ಮತೀಯ ಆಲೋಚನೆಗಳಲ್ಲಿ ಮುಳುಗಿರುವ ಜನರು ಅಮಾನವೀಯತೆಯಿಂದ ನಡೆದುಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತ ನಾಗರಿಕ ಸಮಾಜ ಎಚ್ಚರ ವಹಿಸಬೇಕಿದೆ. ಜನರು ಸಹನೆ, ತಾಳ್ಮೆ ಮಾನವೀಯತೆಯನ್ನು ರೂಡಿಸಿಕೊಳ್ಳುವಂತೆ ಸರ್ಕಾರ, ಪೊಲೀಸ್ ಇಲಾಖೆ ಜವಾಬ್ದಾರಿ ವಹಿಸಬೇಕಿದೆ.


ಇದನ್ನೂ ಓದಿ: ಟಿಕ್ರಿ ಗಡಿ ಬಳಿ ದುರ್ಘಟನೆ: ಲಾರಿ ಹರಿದು ಮೂವರು ರೈತ ಮಹಿಳೆಯರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...