Homeಕರ್ನಾಟಕಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಸಿಂಧಗಿಯಲ್ಲಿ ಬಿಜೆಪಿಯವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂ. ನೀಡಿದ್ದಾರೆ- ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆ ಕಣದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರೂ ಪಕ್ಷಗಳ ನಡುವಿನ ಕೆಸರೆರಚಾಟ ಮಾತ್ರ ನಿಂತಿಲ್ಲ. ಬಹಿರಂಗ ಪ್ರಚಾರ ಅಂತ್ಯವಾದ ಮೇಲೆಯೂ ಆಡಳಿತಾರೂಢ ಬಿಜೆಪಿಯು ಸಿಂಧಗಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

“ಸಚಿವರಾದ ವಿ.ಸೋಮಣ್ಣ, ಸಿ.ಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್‌ನಲ್ಲಿ ಬಿಡು ಬಿಟ್ಟಿದ್ದಾರೆ. ಪ್ರತಿ ಹಳ್ಳಿಗೆ 30 ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿಯಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

’ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಒಂದು ಮತಕ್ಕೆ 1,000 ರೂಪಾಯಿ ನಿಗದಿ ಮಾಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಮುಂದುವರಿದು, ’ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾಃ ಅಭಿವೃದ್ಧಿಯಿಂದಲ್ಲ. ನಾವು ಕ್ಷೇತ್ರದ ಜನರಿಗೆ ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ಸಿಂಧಗಿ ಕ್ಷೇತ್ರದಲ್ಲಿ ನಾವೇ ಗೆಲುತ್ತೇವೆ’ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ಹಣ ಹಂಚುತ್ತಿರುವ ಆರೋಪ ಮಾಡಿದ್ದಾರೆ.  “ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂಪಾಯಿ ಹಣ ಕೊಟ್ಟು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿಗೆ ಮತ ಹಾಕಲ್ಲ ಎಂದು ಗೊತ್ತು, ನಮಗೆ ಮತ ನೀಡದಿದ್ದರೂ ಪರವಾಗಿಲ್ಲ, ಜೆಡಿಎಸ್‌ಗೆ ಹಾಕಿ ಎಂದು ಹೇಳಿದ್ದಾರೆ” ಎಂದಿದ್ದಾರೆ.

’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

’ರಾಜ್ಯದ ಬಿಜೆಪಿಯಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ. ಅಧಿಕಾರದಲ್ಲಿ ಇದ್ದಾಗ ಐದು ವರ್ಷ ನಿಮಗಾಗಿ ದುಡಿದಿದ್ದೇವೆ, ನಮ್ಮ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೊಡಿ ಎಂದು ಕೇಳುತ್ತಿದ್ದೇವೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಲ್ವಾ..?’ ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ.


ಇದನ್ನೂ ಓದಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ರೋಗಿಗಳು ಆಕ್ಸಿಜನ್ ಇಲ್ಲದೆ ಸತ್ತು ಹೋಗಿ ಮಕ್ಕಳು ದಾರಿಯಲ್ಲಿ ಇದ್ದಾಗ, ಲಾಕ್ ಡೌನ್ ಆಗಿ ಕೆಲಸ ಇಲ್ಲದೆ. ಒಪ್ಪೊತ್ತಿನ ಊಟಕ್ಕೂ ಗತಿ ಇಲ್ಲದಾಗ, ತನ್ನ ಊರಿಗೆ ಹೋಗಲು ದಾರಿಯೇ ಕಾಣದಾಗ, ಯಾವ ರಾಜಕಾರಣಿಗಳಲ್ಲಿಯೂ ಹಣ ಇರಲಿಲ್ಲ. ಈಗ ಓಟಿಗಾಗಿ ಹಣದ ಹೊಳೆ ಹರಿಯುತ್ತಿದೆ ಅಂದರೆ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...