Homeಕರ್ನಾಟಕಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಸಿಂಧಗಿಯಲ್ಲಿ ಬಿಜೆಪಿಯವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂ. ನೀಡಿದ್ದಾರೆ- ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆ ಕಣದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರೂ ಪಕ್ಷಗಳ ನಡುವಿನ ಕೆಸರೆರಚಾಟ ಮಾತ್ರ ನಿಂತಿಲ್ಲ. ಬಹಿರಂಗ ಪ್ರಚಾರ ಅಂತ್ಯವಾದ ಮೇಲೆಯೂ ಆಡಳಿತಾರೂಢ ಬಿಜೆಪಿಯು ಸಿಂಧಗಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

“ಸಚಿವರಾದ ವಿ.ಸೋಮಣ್ಣ, ಸಿ.ಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್‌ನಲ್ಲಿ ಬಿಡು ಬಿಟ್ಟಿದ್ದಾರೆ. ಪ್ರತಿ ಹಳ್ಳಿಗೆ 30 ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿಯಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

’ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಒಂದು ಮತಕ್ಕೆ 1,000 ರೂಪಾಯಿ ನಿಗದಿ ಮಾಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಮುಂದುವರಿದು, ’ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾಃ ಅಭಿವೃದ್ಧಿಯಿಂದಲ್ಲ. ನಾವು ಕ್ಷೇತ್ರದ ಜನರಿಗೆ ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ಸಿಂಧಗಿ ಕ್ಷೇತ್ರದಲ್ಲಿ ನಾವೇ ಗೆಲುತ್ತೇವೆ’ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ಹಣ ಹಂಚುತ್ತಿರುವ ಆರೋಪ ಮಾಡಿದ್ದಾರೆ.  “ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂಪಾಯಿ ಹಣ ಕೊಟ್ಟು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿಗೆ ಮತ ಹಾಕಲ್ಲ ಎಂದು ಗೊತ್ತು, ನಮಗೆ ಮತ ನೀಡದಿದ್ದರೂ ಪರವಾಗಿಲ್ಲ, ಜೆಡಿಎಸ್‌ಗೆ ಹಾಕಿ ಎಂದು ಹೇಳಿದ್ದಾರೆ” ಎಂದಿದ್ದಾರೆ.

’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

’ರಾಜ್ಯದ ಬಿಜೆಪಿಯಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ. ಅಧಿಕಾರದಲ್ಲಿ ಇದ್ದಾಗ ಐದು ವರ್ಷ ನಿಮಗಾಗಿ ದುಡಿದಿದ್ದೇವೆ, ನಮ್ಮ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೊಡಿ ಎಂದು ಕೇಳುತ್ತಿದ್ದೇವೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಲ್ವಾ..?’ ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ.


ಇದನ್ನೂ ಓದಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ರೋಗಿಗಳು ಆಕ್ಸಿಜನ್ ಇಲ್ಲದೆ ಸತ್ತು ಹೋಗಿ ಮಕ್ಕಳು ದಾರಿಯಲ್ಲಿ ಇದ್ದಾಗ, ಲಾಕ್ ಡೌನ್ ಆಗಿ ಕೆಲಸ ಇಲ್ಲದೆ. ಒಪ್ಪೊತ್ತಿನ ಊಟಕ್ಕೂ ಗತಿ ಇಲ್ಲದಾಗ, ತನ್ನ ಊರಿಗೆ ಹೋಗಲು ದಾರಿಯೇ ಕಾಣದಾಗ, ಯಾವ ರಾಜಕಾರಣಿಗಳಲ್ಲಿಯೂ ಹಣ ಇರಲಿಲ್ಲ. ಈಗ ಓಟಿಗಾಗಿ ಹಣದ ಹೊಳೆ ಹರಿಯುತ್ತಿದೆ ಅಂದರೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...