Homeಮುಖಪುಟಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಕಡ್ಡಾಯ ಸೇವೆಗೆ ವೈದ್ಯರ ನೇಮಕಾತಿಯಲ್ಲಿ ಸೀಟ್ ಬ್ಲಾಕಿಂಗ್ ಆರೋಪ: ತೀವ್ರ ಆಕ್ರೋಶ

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ವೈದ್ಯರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೋವಿಡ್ ಇದ್ದ ಕಾರಣ ಎರಡು ವರ್ಷ ದುಡಿದಿದ್ದೇವೆ. ಮೇ ತಿಂಗಳಿನಲ್ಲಿಯೇ ಕಡ್ಡಾಯ ಸೇವೆಗೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಅದು ಆಗಲಿಲ್ಲ, ಹೋಗಲಿ ಈಗಲಾದರೂ ನೇಮಕಾತಿ ಮಾಡಿಕೊಳ್ಳಿ ಎಂದರೆ ನಾವು ಪಡೆದ ಮೆರಿಟ್‌ಗೂ ಖಾಲಿ ಇರುವ ಹುದ್ದೆಗಳಿಗೂ ತಾಳೆಯೇ ಆಗುತ್ತಿಲ್ಲ. ನಾನು ಎಂಡಿ ಎಮರ್ಜೆನ್ಸಿ ಮೆಡಿಸನ್ ಮಾಡಿದ್ದೀನಿ. ಬಿಎಂಸಿಯಲ್ಲಿ ಎರಡು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ಖಾಲಿ ಹುದ್ದೆ ಇವೆ ಎಂದು ನಮಗೆ ಗೊತ್ತು. ಆದರೆ ಅಲ್ಲಿ ಆಯ್ಕೆ ಮಾಡಿಕೊಳ್ಳಲು ಹೋದರೆ ತೋರಿಸುತ್ತಿಲ್ಲ.. ಇದು ವೈದ್ಯ ಹುದ್ದೆಗೆ ಅರ್ಜಿ ಸಲ್ಲಿಸಿರುವ ತಜ್ಞ ವೈದ್ಯೆಯೊಬ್ಬರ ಅಳಲಾಗಿದೆ..

ಸ್ನಾತಕೋತ್ತರ ವೈದ್ಯಕೀಯ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಲ್ಲಿ ಪದವಿ ಪಡೆದಿರುವ ತಜ್ಞ ವೈದ್ಯರನ್ನು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜಿಸುವ ಪ್ರಕ್ರಿಯೆ ನಾಲ್ಕು ತಿಂಗಳು ವಿಳಂಬವಾಗಿದೆ. ಮೆರಿಟ್ ಲಿಸ್ಟ್‌ಗೆ ಅನುಗುಣವಾಗಿ ಸೀಟು ಆಯ್ಕೆ ಮಾಡಿಕೊಳ್ಳಲು ಹೋದರೆ ಖಾಲಿ ಹುದ್ದೆಗಳೇ ತೋರಿಸುತ್ತಿಲ್ಲ. ಒಂದು ಕಾಲೇಜಿನಲ್ಲಿ 30 ಖಾಲಿ ಹುದ್ದೆಗಳಿದ್ದರೂ ಕೇವಲ 05 ಹುದ್ದೆಗಳು ಮಾತ್ರ ತೋರಿಸುತ್ತಿದೆ. ಇದರ ಹಿಂದೆ ಸೀಟ್ ಬ್ಲಾಕಿಂಗ್ ದಂಧೆ ನಡೆದಿರಬಹುದು ಎಂದು ವೈದ್ಯರು ಆರೋಪಿಸಿದ್ದಾರೆ.

ಈ ಕುರಿತು ದಯಾನಂದ್ ಸಾಗರ್ ಎಂಬುವವರು 18 ನಿಮಿಷದ ವಿಡಿಯೋ ಒಂದನ್ನು ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ, ಮೆರಿಟ್ ಪಡೆದವರಿಗೆ ತಮಗೆ ಬೇಕಾದ ಕಡೆ ಆಯ್ಕೆ ಸಿಗುತ್ತಿಲ್ಲ, ಪ್ರಮುಖ ನಗರ ಮತ್ತು ಪ್ರಮುಖ ಕಾಲೇಜುಗಳಲ್ಲಿ ಖಾಲಿ ಹುದ್ದೆ ಮುಚ್ಚಿಡುವ ಮೂಲಕ ಅನ್ಯಾಯವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ 40 ಹುದ್ದೆಗಳಿ ಖಾಲಿ ಇವೆ. ಆದರೆ ಸ್ಥಳ ಆಯ್ಕೆಗೆ ಲಾಗಿನ್ ಆದರೆ ಕೇವಲ 10 ಹುದ್ದೆಗಳನ್ನು ಮಾತ್ರ ತೋರಿಸಲಾಗುತ್ತಿದೆ. ಉಳಿದ 30 ಹುದ್ದೆಗಳನ್ನು ಏಕೆ ಮುಚ್ಚಿಡಲಾಗಿದೆ? ಅದೇ ರೀತಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ವಿಭಾಗದಲ್ಲಿ 19 ಖಾಲಿ ಹುದ್ದೆಗಳಿವೆ. ಆದರೆ ಒಂದೇ ಒಂದನ್ನು ಮಾತ್ರ ತೋರಿಸುತ್ತಿದೆ. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಎರಡು ಹುದ್ದೆ ಇದ್ದರೂ ಒಂದು ಮಾತ್ರ ತೋರಿಸುತ್ತಿದೆ. ಈ ರೀತಿಯಾಗಿ ಕರ್ನಾಟಕದಲ್ಲಿರುವ ಒಟ್ಟು 14 ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಷ್ಟು ಸೀಟುಗಳನ್ನು ಮುಚ್ಚಿಟ್ಟಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅಲ್ಲಿಗೆ ನೇಮಕಾತಿ ಮಾಡುತ್ತಿಲ್ಲ, ಬದಲಿಗೆ ಪ್ರವೇಟ್, ಮ್ಯಾನೇಜ್ ಮೆಂಟ್ ಸೇರಿ ದುಡ್ಡು ಕೊಟ್ಟವರಿಗೆ ಈ ಹುದ್ದೆಗಳನ್ನು ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವೈದ್ಯೆಯೊಬ್ಬರು, “2022ರ ಮೇ ಒಳಗೆ ನಮ್ಮ ಕಡ್ಡಾಯ ಸೇವೆ ಸೇರಿ ಕೋರ್ಸ್ ಮುಗಿದಿರಬೇಕು. ಆದರೆ ಈ ರೀತಿ ವಿಳಂಬವಾಗುತ್ತಿರುವುದು ಹಲವರ ವೃತ್ತಿ ಬದುಕಿನಲ್ಲಿ ಕೆಟ್ಟ ಪರಿಣಾಮ ಬೀರಲಿದೆ. ನಾವು ರಾಜ್ಯದ ಯಾವುದೇ ಭಾಗಕ್ಕೆ ಹೋಗಿ ಸೇವೆ ಮಾಡಲು ಸಿದ್ದರಿದ್ದೇವೆ. ಆದರೆ ಮೆರಿಟ್ ಪಡೆದವರು ಸೌಲಭ್ಯ ಇಲ್ಲದೆ ಕಡೆ ಹೋಗಬೇಕು ಮತ್ತು ಲಂಚ ಕೊಟ್ಟವರು ಬೆಂಗಳೂರಿನಲ್ಲಿಯೇ ಕೆಲಸ ಮಾಡಬಹುದು ಎಂಬುದು ಯಾವ ನ್ಯಾಯ? ಅದಕ್ಕಾಗಿ ವಕೀಲರ ಮೂಲಕ ಹೈಕೋರ್ಟ್‌ನಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುತ್ತೇವೆ” ಎಂದಿದ್ದಾರೆ.

ಅನಸ್ತೇಷಿಯ ತಜ್ಞರನ್ನು, ಸರ್ಜರಿ ತಜ್ಞರನ್ನು ಶಸ್ತ್ರಚಿಕಿತ್ಸಾ ಘಟಕ ಇಲ್ಲದೆ ಇರೋ ಕಡೆ ನೇಮಿಸಿದರೆ ಏನು ಪ್ರಯೋಜನ? ನಾವು ಓದಿದ್ದನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ನೀಟ್‌ ಪರೀಕ್ಷಾ ಫಲಿತಾಂಶ ಘೋಷಿಸಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...