Homeಮುಖಪುಟಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

- Advertisement -
- Advertisement -

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಆಡಳಿತರೂಢ ಬಿಜೆಪಿ ಬೂತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವುದು ಮಹತ್ವದ ಕೆಲಸ ಎಂದಿದೆ. ಹೀಗಾಗಿ ದೀಪಾವಳಿ ನೆಪದಲ್ಲಿ ತನ್ನ 30 ಲಕ್ಷ ಬೂತ್ ಮಟ್ಟದ ಕಾರ್ಯಕರ್ತರಿಗೆ ಬಿಜೆಪಿ ದೀಪಾವಳಿ ಉಡುಗೊರೆಯನ್ನು ಕಳುಹಿಸಿದೆ.

ಉತ್ತರ ಪ್ರದೇಶ ರಾಜ್ಯದಲ್ಲಿ 1.63 ಲಕ್ಷ ಬೂತ್‌ಗಳಿದ್ದು, 1.5 ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಬಿಜೆಪಿ 20-20 ಸದಸ್ಯರ ಸಮಿತಿಗಳನ್ನು ರಚಿಸಿದೆ.

“ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವ ಬಿಜೆಪಿ ಕುಟುಂಬದಲ್ಲಿ  ಬೂತ್ ಮಟ್ಟದ ಕಾರ್ಯಕರ್ತರು ಪ್ರಮುಖ ಕೊಂಡಿಯಾಗಿದ್ದಾರೆ.  ದೀಪಾವಳಿಯಂದು ಎಲ್ಲರಿಗೂ ಉಡುಗೊರೆಗಳನ್ನು ನೀಡುವ ಸಂಪ್ರದಾಯವಿದೆ. ಹೀಗಾಗಿ ಪಕ್ಷವು ಈ ಬಾರಿ 30 ಲಕ್ಷಕ್ಕೂ ಹೆಚ್ಚು ಬೂತ್ ಕಾರ್ಯಕರ್ತರಿಗೆ ಉಡುಗೊರೆಗಳನ್ನು ಕಳುಹಿಸಿದೆ” ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಬಹದ್ದೂರ್ ಪಾಠಕ್ ಹೇಳಿದ್ದಾರೆ.

ಇದನ್ನೂ ಓದಿ: ಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಈ ಬಾರಿ ಬಾಗಿಲಿಗೆ ಹಾಕುವ ತೋರಣಗಳು ಮತ್ತು ಕಮಲದ ಆಕಾರದ ಮಣ್ಣಿನ ದೀಪವನ್ನು ಒಳಗೊಂಡಿರುವ ಉಡುಗೊರೆ ಪೆಟ್ಟಿಗೆಗಳನ್ನು ಎಲ್ಲಾ ಬೂತ್ ಸಮಿತಿಗಳ ಸದಸ್ಯರಿಗೆ ಕಳುಹಿಸಲಾಗಿದೆ.

ಈ ಉಡುಗೊರೆಗಳು ಚುನಾವಣಾ ಪ್ರಚಾರದ ಭಾಗವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಪಾಠಕ್, “ಸದ್ಯಕ್ಕೆ ಪಕ್ಷದ ಪ್ರಮುಖ ಗಮನವೇ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಾಗಿದೆ. ಹೀಗಾಗಿ ಜನರ ಬಳಿಗೆ ಚುನಾವಣಾ ಚಿಹ್ನೆಯನ್ನು ತೆಗೆದುಕೊಂಡು ಹೋಗುವುದು ಸಹಜ ಪ್ರಕ್ರಿಯೆ” ಎಂದು ಹೇಳಿದ್ದಾರೆ.

“ಜನರು ಕಮಲದ ದೀಪವನ್ನು ಬೆಳಗಿಸಿದಾಗ, ಕತ್ತಲೆ ಮಾತ್ರ ಮಾಯವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾರಂಭಿಸಿದ ಅಭಿವೃದ್ಧಿ ಯೋಜನೆಗಳಲ್ಲಿ ನಂಬಿಕೆ ಬಲಗೊಳ್ಳುತ್ತದೆ” ಎಂದು ಪಾಠಕ್ ಹೇಳಿದರು.

2017ರ ವಿಧಾನಸಭಾ ಚುನಾವಣೆಯಲ್ಲಿ ಆಗಿನ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೂತ್ ನಿರ್ವಹಣಾ ಸೂತ್ರವನ್ನು ಜಾರಿಗೆ ತಂದರು. ಜೊತೆಗೆ ಬೂತ್ ಮಟ್ಟದ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದರು.


ಇದನ್ನೂ ಓದಿ: ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿ ಉಡುಗೊರೆ ಹಂಚುತ್ತಿರುವುದು ಅವರ ಅಪ್ಪನ ಆಸ್ತಿಯಿಂದಲ್ಲ.
    ಸರಕಾರದ ಬೊಕ್ಕಸದಿಂದ….
    ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದು ಬಿಜೆಪಿ ಮಾತ್ರವಲ್ಲ.
    ಸರ್ವ ಜನರೂ ಸರಕಾರಕ್ಕೆ ಹಲವು ರೂಪದಲ್ಲಿ ನಮ್ಮದೇ ಆದ ಕೊಡುಗೆಯನ್ನು ನೀಡುತ್ತಿರುವಾಗ ಸರಕಾರ ಎಲ್ಲರಿಗೂ ಸಮಾನ ರೀತಿಯಲ್ಲಿ ಉಡುಗೊರೆ ನೀಡಬೇಕು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...