Homeಕರ್ನಾಟಕಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರು

ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರು

ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಇಂತಹ ಆಧಾರರಹಿತ ವರದಿಗಳನ್ನು ಓದುವ ಮೂಲಕ ಭಯಪಡಬಾರದು. -ಟಿಎಸಿ

- Advertisement -
- Advertisement -

ಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಮುಖ ನಗರಗಳು ಲಾಕ್‌ಡೌನ್‌ ಘೋಷಿಸಿವೆ.

ಇದೇ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್‌-19 ವೈರಸ್‌ನಿಂದ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್‌ನಿಂದ ಸೋಂಕಿಗೆ ಒಳಗಾಗಿರುವ ಎರಡು ಪ್ರಕರಣಗಳು ಪತ್ತೆಯಾದ ಕಾರಣ ಕರ್ನಾಟಕದಲ್ಲಿ ಅನೇಕರು ಭಯಭೀತರಾಗಿದ್ದು, ಮತ್ತೊಮ್ಮೆ ಲಾಕ್‌ಡೌನ್‌ ಆಗಬಹುದು ಎಂಬ ವದಂತಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲೆ, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮತ್ತೊಂದು ಲಾಕ್‌ಡೌನ್‌ ಆಗಬಹುದು ಎಂಬ ವದಂತಿಗಳನ್ನು ತಳ್ಳಿ ಹಾಕಿದೆ.

ಟಿಎಸಿಯ ಅಧ್ಯಕ್ಷರಾದ ಡಾ.ಎಂ.ಕೆ. ಸುದರ್ಶನ್‌ ಈ ವದಂತಿಯನ್ನು ತಳ್ಳಿಹಾಕಿದ್ದು, ’ಡೆಲ್ಟಾ ಪ್ಲಸ್‌ (ಎವೈ 4.2) ರೂಪಾಂತರ ಸೋಂಕಿತರ ಪ್ರಕರಣಗಳ ಆವಿಷ್ಕಾರದಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್‌ ಮಾಡಬೇಕು ಎಂಬುವ ಟಿಎಸಿ ವರದಿಗಳು ಆಧಾರರಹಿತ ಮತ್ತು ಅವಾಸ್ತವಿಕವಾಗಿವೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಕೋವಿಡ್‌ ಪ್ರಕರಣಗಳ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಶಿಫಾರಸ್ಸು ಮಾಡಲಾಗಿತ್ತು ಎಂಬುದನ್ನು ಜ್ಞಾಪಿಸಿಕೊಳ್ಳಬಹುದು. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯು 350ಕ್ಕಿಂತಲೂ ಕಡಿಮೆಯಾಗಿದೆ’ ಎಂದು ಹೇಳಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಡೆಲ್ಟಾ ಪ್ಲಸ್‌ ರೂಪಾಂತರದ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ದೃಢಪಟ್ಟಿವೆ ಎಂದು ತಿಳಿಸಿದ ಅವರು, ’ಭಾರತದಾದ್ಯಂತ ಜೀನೋಮಿಕ್‌ ಅನುಕ್ರಮದ ಮೂಲಕ 17 ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ದೃಢಪಟ್ಟಿವೆ. ಸೋಂಕಿತರು ಚಿಕಿತ್ಸೆ ಪಡೆದಿದ್ದು, ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ದಾಖಲೆಯಲ್ಲಿ ಜುಲೈನಲ್ಲಿ 23 ಮತ್ತು 43 ವರ್ಷ ವಯೋಮಾನದ ಇಬ್ಬರಲ್ಲಿ ಈ ಸೋಂಕನ್ನು ಗುರುತಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

‘ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಇಂತಹ ಆಧಾರರಹಿತ ವರದಿಗಳನ್ನು ಓದುವ ಮೂಲಕ ಭಯಪಡಬಾರದು. ನಾವು (ಟಿಎಸಿ) ರಾಜ್ಯದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ’ ಎಂದು ಸುದರ್ಶನ್‌ ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ ಈವರೆಗೆ, ಕರ್ನಾಟಕದಲ್ಲಿ 29.86 ಲಕ್ಷ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 29.40 ಲಕ್ಷ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬುಧವಾರ (ಅಕ್ಟೋಬರ್ 27) 8,430 ಸಕ್ರಿಯ ಪ್ರಕರಣಗಳಿದ್ದು, ಕಳೆದ ವರ್ಷ ಮಾರ್ಚ್ 10 ರಿಂದ 38,037 ಜನರು ಸೋಂಕಿಗೆ ಬಲಿಯಾಗಿದ್ದಾರೆ.


ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...