Homeಚಳವಳಿದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ ಗ್ರಾಮದ ದಲಿತ ಮುಖಂಡರು ಮತ್ತು ಸಮಾಜ ಪರಿವರ್ತನೆ ಸಂಘಟನೆಯ ಮುಖಂಡರಾದ ಚೆಲುವರಾಜುರವರ ಪ್ರಶ್ನಿಸಿ ಪ್ರತಿಭಟಿಸಿದ ನಂತರವಷ್ಟೇ ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದರಿಂದ ದಲಿತರಿಗೆ ಕ್ಷೌರ ಮಾಡಲಾಗಿದೆ.

ದಲಿತ ಮುಖಂಡರಾದ ಚೆಲುವರಾಜುರವರು ಕಣಿವೆಕೊಪ್ಪಲು ಗ್ರಾಮದಲ್ಲಿ ಆರಂಭವಾಗಿರುವ ಸ್ನೇಹಜೀವಿ ಮೆನ್ಸ್ ಬ್ಯೂಟಿ ಪಾರ್ಲರ್‌ನಲ್ಲಿ ಏಕೆ ದಲಿತರಿಗೆ ಕಟಿಂಗ್, ಸೇವಿಂಗ್ ಮಾಡುವುದಿಲ್ಲ, ನಿಮಗೆ ಸಮಸ್ಯೆಯೇನು? ಅವರು ದುಡ್ಡು ಕೊಡುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಿಂದೆಯಿಂದಲೂ ಮಾಡಿಲ್ಲ. ಹಾಗಾಗಿ ಈಗಲೂ ಮಾಡುವುದಿಲ್ಲ ಎಂದು ಕ್ಷೌರದ ಅಂಗಡಿಯ ಮಾಲೀಕ ಕುಮಾರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಸಂವಿಧಾನದ ಅಡಿಯಲ್ಲಿ ಈ ದೇಶ ನಡೆಯುತ್ತಿದೆ ಮತ್ತು ಸಂವಿಧಾನವು ಎಲ್ಲಾ ರೀತಿಯ ಅಸ್ಪೃಶ್ಯತೆಯನ್ನು ನಿಷೇಧಿಸಿದೆ. ನಾವೆಲ್ಲರೂ ಸರ್ವ ಸಮಾನರಾಗಿದ್ದು ನೀವು ಸಾರ್ವಜನಿಕ ಸೇವೆ ನೀಡುವಾಗ ತಾರತಮ್ಯ ಮಾಡುವಂತಿಲ್ಲ ಎಂದು ಚೆಲುವರಾಜುರವರು ತಾಕೀತು ಮಾಡಿದ್ದಾರೆ.

ಇಂದು ಬೆಳಿಗ್ಗೆಯಿಂದ ಇಬ್ಬರು ದಲಿತರಿಗೆ ನೀವು ಕ್ಷೌರ ಮಾಡಲು ನಿರಾಕರಿಸಿದ್ದೀರಿ. ಇದು ಕಾನೂನಿನ ಪ್ರಕಾರ ಅಪರಾಧವಾಗಿದೆ ಎಂದು ಚೆಲುವರಾಜುರವರು ಹೇಳಿದಾಗ ಅಲ್ಲೆ ಕ್ಷೌರ ಮಾಡಿಸಿಕೊಳ್ಳುತ್ತಿದ್ದ ಸವರ್ಣಿಯ ಜಾತಿಗೆ ಸೇರಿದವನೊಬ್ಬ ಹಿಂದೆ ಮಾಡಿಲ್ಲ, ಹೀಗಲೂ ಮಾಡುವುದಿಲ್ಲ ಎಂದು ಜೋರು ಮಾಡಿದ್ದಾರೆ. ತದನಂತರ ಚೆಲುವರಾಜುರವರು ದಲಿತ ಯುವಕರ ಜೊತೆ ಸೇರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಅಂಗಡಿ ಮಾಲೀಕನಿಗೆ ಬುದ್ದಿ ಹೇಳಿ ಅಲ್ಲಿಯೇ ದಲಿತ ಯುವಕರಿಗೆ ಕಟಿಂಗ್ ಸೇವಿಂಗ್ ಮಾಡಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿದ ಚೆಲುವರಾಜುರವರು “ಇಷ್ಟು ದಿನಗಳಾದರೂ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ಜಾತಿಪದ್ದತಿ ಜಾರಿಯಲ್ಲಿರುವುದು ದುರಂತ. ಜನ ಎಷ್ಟೇ ವಿದ್ಯಾವಂತರಾದರೂ ಜನ ಸಂವಿಧಾನವನ್ನು ಅರ್ಥ ಮಾಡಿಕೊಂಡಿಲ್ಲ, ಅಸ್ಪೃಶ್ಯತೆ ಆಚರಣೆ ನಿಲ್ಲಿಸಿಲ್ಲ. ಈ ದೇಶದ ಶೇ.95 ರಷ್ಟು ಹಳ್ಳಿಗಳ ಪರಿಸ್ಥಿತಿ ಇದೇ ರೀತಿಯಲ್ಲಿದೆ. ಹಾಗಾಗಿ ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ” ಎಂದರು.

ನಮ್ಮ ಹೋರಾಟದ ನಂತರ ಕೊನೆಗೂ ಸಣ್ಣ ಜಯ ಸಿಕ್ಕಿದೆ. ನಮ್ಮೂರಿನ ದಲಿತರಿಗೆ ಕ್ಷೌರ ಮಾಡಲಾಗಿದೆ. ಹಂತ ಹಂತವಾಗಿ ಎಲ್ಲಾ ರೀತಿಯ ಅಸ್ಪೃಶ್ಯತೆ ನಿರ್ಮೂಲನೆಗೆ ಹೋರಾಡುತ್ತೇವೆ ಎಂದಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲೆರೆ ಎಂಬ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಿದ ಏಕೈಕ ಕಾರಣಕ್ಕೆ ಸವಿತಾ ಸಮಾಜದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜರುಗಿತ್ತು. ಇದಕ್ಕೆ ವ್ಯಾಪಕ ವಿರೋಧ ಕೇಳಿಬಂದ ನಂತರ ತಹಶೀಲ್ದಾರ್‌ರವರು ಗ್ರಾಮಕ್ಕೆ ತೆರಳಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡಿದ್ದರು.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.


ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...