Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

- Advertisement -
- Advertisement -

ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ ಎಂದಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಆ ಪೋಸ್ಟ್‌ನಲ್ಲಿ ಹೇಳೀರುವುದು ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗಡೆ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸೆ.13 ರಂದು ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ನಿಧನರಾದರು. ಅಂದು ತಮ್ಮ ವಾಲ್‌ನಲ್ಲಿ, “ಮಾಜಿ ಕೇಂದ್ರ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರು ಇಹಲೋಕ ತ್ಯಜಿಸಿದ್ದಾರೆ. ಕಾಂಗ್ರೆಸ್ ನಾಯಕನಾಗಿದ್ದರೂ ಗೋಮೂತ್ರದಲ್ಲಿ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಇದೆ. ದೇಸಿ ಗೋವುಗಳನ್ನು ಸಂರಕ್ಷಿಸಬೇಕೆಂದು ಸಂಸತ್ ನಲ್ಲಿ ಗಟ್ಟಿ ಧ್ವನಿಯಿಂದ ಪ್ರತಿಪಾದಿಸಿದ, ಯೋಗ, ಭಾರತೀಯ ವೈದ್ಯ ಪದ್ದತಿಗಳ ಬಗ್ಗೆ ಅಪಾರ ಗೌರವ ಹೊಂದಿದ್ದ ಹಿರಿಯ ನಾಯಕನಿಗೆ ನಮನಗಳು” ಎಂದು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

 

ಪೋಸ್ಟ್‌ನಲ್ಲಿ ಹೇಳಲಾಗಿರುವ ವಿಷಯಗಳ ಮಾಹಿತಿಗಾಗಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದಾಗ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು 18 ಮಾರ್ಚ್ 2020 ರಂದು ‘ಪ್ರಿಂಟ್’ ಪ್ರಕಟಿಸಿದ ಲೇಖನದಲ್ಲಿ ‘ಗೋಮೂತ್ರ’ದಿಂದ ಕ್ಯಾನ್ಸರ್‌ರನ್ನು ಜಯಿಸಿದ ವ್ಯಕ್ತಿಯ ಕಥೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ’ ಎಂದು ತಿಳಿದುಬಂದಿದೆ.

ಹೋಮಿಯೋಪತಿ ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಆಯೋಗಗಳ ಸ್ಥಾಪನೆಯ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮಗೆ ತಿಳಿದಿರುವ ವ್ಯಕ್ತಿಯೊಬ್ಬರು ‘ಗೋಮೂತ್ರ’ದ ಮೂಲಕ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಜಯಿಸಿದ್ದಾರೆ ಎಂದು ಲೇಖನ ವರದಿ ಮಾಡಿದೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮ್ಮ ಸಂಪೂರ್ಣ ಭಾಷಣವನ್ನು ಮಾಡುತ್ತಿರುವ ವೀಡಿಯೊವನ್ನು ‘ಸಂಸದ್ ಟಿವಿ’ ಸುದ್ದಿ ವಾಹಿನಿ ಪ್ರಕಟಿಸಿದೆ. ವಿಡಿಯೋದ ಸುಮಾರು 2:10 ನಿಮಿಷಗಳ ಸಮಯದಲ್ಲಿ ಆಸ್ಕರ್ ಫೆರ್ನಾಂಡಿಸ್ ಹೀಗೆ ಹೇಳಿದ್ದಾರೆ. “ನಾನು ಮೀರತ್‌ನಲ್ಲಿರುವ ಆಶ್ರಮಕ್ಕೆ ಹೋಗಿದ್ದೆ. ವಾಪಸಾಗುವುದು ತಡವಾದ ಕಾರಣ ಆಶ್ರಮ ಸ್ವಾಮೀಜಿಯವರು ತಮ್ಮ ಚಾಲಕನನ್ನು ನನ್ನ ಜೊತೆಯಲ್ಲಿ ಕಳುಹಿಸಿದರು. ಆ ಚಾಲಕನನ್ನು ಆಶ್ರಮದಲ್ಲಿ ನೀನೇಕೆ ಉಳಿದಿದ್ದಿಯಾ? ಎಂದು ಕೇಳಿದೆ, ‘ಸರ್, ನಾನು ಯಾವುದೇ ಚಿಕಿತ್ಸೆಯಿಂದ ಗುಣವಾಗದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಗ ಈ ಆಶ್ರಮಕ್ಕೆ ಸೇರಿಕೊಂಡೆ. ಈ ಆಶ್ರಮ ನೀಡಿದ ಗೋಮೂತ್ರದಿಂದ ನನ್ನ ಕ್ಯಾನ್ಸರ್ ಸಂಪೂರ್ಣವಾಗಿ ವಾಸಿಯಾಯಿತು. ಅದಕ್ಕಾಗಿಯೇ ನನಗೆ ಹೊಸ ಜೀವನವನ್ನು ನೀಡಿದ ಈ ಆಶ್ರಮದ ಸೇವೆಯನ್ನು ನನ್ನ ಜೀವನದುದ್ದಕ್ಕೂ ಮಾಡಲು ನಿರ್ಧರಿಸಿದ್ದೇನೆ, ”ಎಂದು ಚಾಲಕ ಹೇಳಿಕೊಂಡರು ಎಂದು ಹೇಳಿದ್ದಾರೆ.

ಚಾಲಕನ ಬಗ್ಗೆ ಹೇಳೀರುವ ಮಾತುಗಳನ್ನು ಅರ್ಧಕ್ಕೆ ಕಟ್ ಮಾಡಿ ಆಸ್ಕರ್ ಫೆರ್ನಾಂಡಿಸ್ ಗೋಮೂತ್ರವನ್ನು ಬಳಸಿ ತಮ್ಮ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡಿಸ್ ಮಾಡಿದ ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಇದರಲ್ಲಿ ಆಸ್ಕರ್ ಫರ್ನಾಂಡಿಸ್ ರಾಜ್ಯಸಭೆಯಲ್ಲಿ ಚಾಲಕ ತನ್ನೊಂದಿಗೆ ಹಂಚಿಕೊಂಡ ಅನುಭವವನ್ನು ಸರಳವಾಗಿ ವಿವರಿಸಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಅವರು ತಮಗೆ ರೋಗವಿದೆ ಅಥವಾ ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಎಂದು ಖಚಿತವಾಗಿ ಹೇಳಬಹುದು.

ಒಟ್ಟಾರೆ ಕಾಂಗ್ರೆಸ್ ಸಂಸದ ದಿವಂಗತ ಆಸ್ಕರ್ ಫರ್ನಾಂಡೀಸ್ ಅವರು ಗೋಮೂತ್ರ ಬಳಸಿ ಕ್ಯಾನ್ಸರ್‌ನಿಂದ ಗುಣವಾಗಿರುವುದನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿಲ್ಲ.

ಪ್ರತಿಪಾದನೆ: ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ದೃಶ್ಯಗಳು.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡೀಸ್ ಅವರು 2020 ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡುತ್ತಾ, ಕ್ಯಾನ್ಸರ್ ಅನ್ನು ಜಯಿಸಿದ ವ್ಯಕ್ತಿಯೊಂದಿಗೆ ಹಂಚಿಕೊಂಡ ಅನುಭವವನ್ನು ವಿವರಿಸಿದ್ದರು. ಮೀರತ್‌ನ ಆಶ್ರಮವೊಂದರಲ್ಲಿ ಕೆಲಸ ಮಾಡುತ್ತಿರುವ ಚಾಲಕರೊಬ್ಬರು ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಅನ್ನು ಜಯಿಸಿದ್ದಾರೆ ಎಂದು ಆಸ್ಕರ್ ಫರ್ನಾಂಡೀಸ್ ಹೇಳಿದ್ದರು. ಆದರೆ, ಆಸ್ಕರ್ ಫರ್ನಾಂಡೀಸ್ ಅವರಿಗೆ ಕ್ಯಾನ್ಸರ್ ಇದೆ ಅಥವಾ ಗೋಮೂತ್ರದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪುದಾರಿಗೆಳೆಯುವಂತಿದೆ.


ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...