Homeಮುಖಪುಟ‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ - ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ – ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

- Advertisement -
- Advertisement -

ಆಧುನಿಕ ಭಾರತೀಯ ಚಿಂತಕರ ಆಯ್ದ ಬರಹಗಳ ಮೂಲಕ ಅವರ ಚಿಂತನೆ ಪರಿಚಯ ಮಾಡುವ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ‘ಬೆಳಕಿನ ಬೆಳೆ’  ಎಂಬ ಮಾಲಿಕೆಯಡಿ ಪ್ರಕಟಿಸಿದ 7 ಪುಸ್ತಕಗಳು ಗಮನ ಸೆಳೆದಿದ್ದವು. ಈ ಮಾಲಿಕೆಯ ಪ್ರಕಟಣೆಯನ್ನು ಡಾ.ಎಂ.ಜಿ. ಹೆಗಡೆ ಅವರ ಸಂಪಾದಕತ್ವದಲ್ಲಿ ಮುಂದುವರೆಸಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಕ್ರಿಯಾ ಮಾಧ್ಯಮ ವಹಿಸಿಕೊಂಡಿದೆ.  ‘ಬೆಳಕಿನ ಬೆಳೆ’ ಮಾಲಿಕೆಯ ಎಂಟನೆಯ ಪುಸ್ತಕವಾಗಿ ಮತ್ತು ಈ ಮಾಲಿಕೆಯಲ್ಲಿ ಕ್ರಿಯಾ ಮಾಧ್ಯಮದ ಪ್ರಕಟಣೆಗಳಲ್ಲಿ ಮೊದಲನೆಯದಾಗಿ, ಪ್ರಸಿದ್ಧ ಚಿಂತಕ ”ಜಿ.ಎನ್. ದೇವಿ ಅವರ ಆಯ್ದ ಬರಹಗಳು’ ಕೃತಿಯು ಅಕ್ಟೋಬರ್ 29 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಯಾಗುತ್ತಿದೆ.

ಕೃತಿ ವಾಚನದ ಮೂಲಕ ಡಾ.ಶ್ರೀಪಾದ ಭಟ್ ರವರು ಕೃತಿ ಬಿಡುಗಡೆ ಮಾಡಲಿದ್ದು,  ಡಾ.ಸಿರಾಜ್ ಅಹ್ಮದ್ ಮತ್ತು ಡಾ.ರಾಜೇಂದ್ರ ಚೆನ್ನಿಯವರು ಡಾ.ಜಿ.ಎನ್ ದೇವಿಯವರ ಬರಹಗಳ ಕುರಿತು ಮಾತನಾಡಲಿದ್ದಾರೆ. ಡಾ.ದೇವಿದಾಸ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಒರ್ಫಿಯಸ್‌ನ ಹಾಡು, ಅಪೂರ್ಣ ರಕ್ತ ಕಣ, ಕಳ್ಳನೆನಿಸಿಕೊಂಡ ಅಲೆಮಾರಿ, ಹಿಂಸೆಯ ಪೂರ್ವಾಪರ, ಭಾಷೆಯ ಇರವು: ಜ್ಞಾನ, ಸಮಾಜ ಮತ್ತು ವಾಚೋಹೀನತೆ, ವಾಚೋಹೀನತೆ, ಸ್ಮೃತಿಯ ಭವಿಷ್ಯ – ದೇವಿ ಅವರ ಈ ಐದು ಪ್ರಸಿದ್ಧ ಲೇಖನಗಳು ಪುಸ್ತಕದಲ್ಲಿ ಇವೆ. ಈ ಪುಸ್ತಕದ ಆಯ್ದ ಭಾಗ ನಿಮ್ಮ ಓದಿಗಾಗಿ….

ಪರ್ಯಾಯದ ಹುಡುಕಾಟ

ಪ್ರಸ್ತುತ ಕೃತಿಯಲ್ಲಿ ಮೂರು ಬಹುಮುಖ್ಯ ವಿಷಯಗಳನ್ನು ಕುರಿತು ದೇವಿಯವರು ಧ್ಯಾನಿಸಿ ಬರೆದ ಬರಹಗಳ ಅನುವಾದಗಳಿವೆ. ಪಶ್ಚಿಮ ಹಾಗೂ ಪೂರ್ವಗಳ ವಿದ್ವತ್ತು, ಜಗತ್ತಿನ ಮಹಾನ್ ಕೃತಿಗಳ ಆಳವಾದ ಓದು, ಚರಿತ್ರೆಯ ದಾರ್ಶನಿಕವಾದ ತಿಳವಳಿಕೆ ಹಾಗೂ ಸಾಮಾಜಿಕ ಬದ್ಧತೆಗಳು ಮುಪ್ಪುರಿಗೊಂಡು ಸೃಷ್ಟಿಸಿದ ಜ್ಞಾನವು ಈ ಬರಹಗಳಲ್ಲಿದೆ. ಅಪ್ರಾಮಾಣಿಕವಾದ ಭಾಷಾಡಂಬರದ “ಜಾಗತಿಕ” ಚಿಂತನೆಯ ಹಗಲುವೇಷದ ಬದಲಾಗಿ ಇಪ್ಪತ್ತನೆಯ ಶತಮಾನದಿಂದ ಇತ್ತೀಚೆಗೆ ಮನುಷ್ಯ ಕುಲವು ಎದುರಿಸಿದ ಆತ್ಮ ಘಾತುಕವಾದ ಹಿಂಸೆಗಳು, ಅತಾರ್ಕಿಕವಾದ ಸ್ವವಿನಾಶ, ಸಿನಿಕತನವುಳ್ಳ ಹತಾಶೆ ಇವುಗಳ ಜೊತೆಗೆ ಇವೆಲ್ಲವನ್ನು ಬದಲಾಯಿಸಬೇಕು ಎನ್ನುವ, ‘ಇನ್ನೊಂದುಜಗತ್ತು ಸಾಧ್ಯವಿದೆ ಎನ್ನುವ ನೈತಿಕವಾದ ನಂಬಿಕೆ ಈ ಬರಹಗಳಲ್ಲಿದೆ. ಎಂ.ಜಿ. ಹೆಗಡೆಯವರ ಮಾಂತ್ರಿಕ ಅನುವಾದವು ದಟ್ಟವಾದ, ಸಂಕೀರ್ಣವಾದ ಅನುಭವಗಳನ್ನು ಕನ್ನಡದಲ್ಲಿಅದ್ಭುತವಾಗಿ ಹಿಡಿದುಕೊಡುತ್ತದೆ. ನನಗಂತೂ ಈ ಕೃತಿಯನ್ನುಓದಿದ್ದು ಇಳಿವಯಸ್ಸಿನಲ್ಲಿ ದೊರೆತ ಶಿಕ್ಷಣವಾಗಿದೆ.

– ಡಾ. ರಾಜೇಂದ್ರಚೆನ್ನಿ

ಒರ್ಫಿಯಸ್‌ನ ಹಾಡು

ಬಹಳ ಹಿಂದೆ–ಎಷ್ಟೆಂದರೆ ಐತಿಹಾಸಿಕ ಯುಗಗಳಲ್ಲಿಅಲ್ಲ, ಪೌರಾಣಿಕ ಕಲ್ಪಗಳಲ್ಲಿ- ಒರ್ಫಿಯಸ್‌ತನ್ನ ಪ್ರೀತಿಯ ಯುರಿಡಿಸಿಯನ್ನು ಮೃತ್ಯುಲೋಕದಿಂದ ಮರಳಿ ತರಲು ಹೋರಾಟ ನಡೆಸಿದ. ಮೃತ್ಯು ದೇವತೆಯು ಒರ್ಫಿಯಸ್‌ಗೆ ಯುರಿಡಿಸಿಯನ್ನು ಹಿಂತಿರುಗಿಸಲು ಒಪ್ಪಿದ. ಆದರೆ ಅವಳು ಅವನನ್ನು ಅನುಸರಿಸಿಕೊಂಡು ಹೋಗುತ್ತಿರುವಾಗ ನಿಜಕ್ಕೂ ಅವಳು ತನ್ನನ್ನು ಹಿಂಬಾಲಿಸುತ್ತಿರುವಳೆ ಎಂದು ಅವನು ಹಿಂತಿರುಗಿ ನೋಡುವಂತಿಲ್ಲಎಂದು ಷರತ್ತು ವಿಧಿಸಿದ. ಒರ್ಫಿಯಸ್‌ ಕತ್ತಲೆಯಚಿಂನ ಜಗತ್ತಿನಿಂದ ಹೊರಬಂದಾಗ ಯುರಿಡಿಸಿ ದಿಟವಾಗಿಯೂ ತನ್ನನ್ನು ಹಿಂಬಾಲಿಸಿ ಬರುತ್ತಿದ್ದಾಳೆ ಎಂಬ ನಂಬಿಕೆಯ ಬಲದ ಮೇಲೇ ಕವನಗಳನ್ನು ರಚಿಸಿ ಪಟ್ಟಿಯಾಗಿ ಹಾಡುತ್ತಿದ್ದ– ಯುರಿಡಿಸಿಗೆ ತನ್ನೆದೆಯ ತವಕ ತಲ್ಲಣಗಳ ನಿವೇದನೆ; ಪ್ರಿಯತಮೆಯನ್ನು ಮೃತ್ಯುಮುಖದಿಂದ ರಕ್ಷಿಸಿ ತಂದಯ ಶೋಕಗೀತೆಯಾಗಿ; ಅದೆಲ್ಲಕ್ಕಿಂತ, ಯುರಿಡಿಸಿ ವಾಸ್ತವವಾಗಿಯೂ ತನ್ನನ್ನು ಹಿಂಬಾಲಿಸುತ್ತಿರುವುದು ಹೌದೇ ಎಂಬ ಆಂತಕವನ್ನು ಗೆಲ್ಲುವ ಉಪಾಚಿಂತವಾಗಿ. ಅವನ ದೈವಿಕ ಸಂಗೀತಕ್ಕೆ ಮರುಳಾಗಿ ಲಕ್ಷಂತರ ಹಕ್ಕಿಗಳು ಯುರಿಡಿಸಿಯನ್ನು ಹಿಂಬಾಲಿಸಿದವೆಂದು ಹೇಳುತ್ತಾರೆ. ಅವುಗಳ ಕಿವಿಯಿಂಪದು ಸಂಗೀತ; ಅದರೆ ಒರ್ಫಿಯಸ್‌ಗೆ ಅದು ಯಾತನೆಗೀತೆ; ಹಾಗೆಯೇ ನಂಬಿಕೆಯಘೋಷಣೆ! ಒರ್ಫಿಯಸ್‌ನ ಆ ಹಾಡು ಪ್ರತಿಯೊಬ್ಬ ಪ್ರವರ್ತಕನ ಕ್ರಿಯೆಯಲ್ಲೂ ಪ್ರತಿಧ್ವನಿಸುತ್ತ…

– ಗಣೇಶ್‌ದೇವಿ (ಒರ್ಫಿಯಸ್‌ನ ಹಾಡು)


ಇದನ್ನೂ ಓದಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬರೋಡ: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...