Homeಮುಖಪುಟ‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ - ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ – ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

- Advertisement -
- Advertisement -

ಆಧುನಿಕ ಭಾರತೀಯ ಚಿಂತಕರ ಆಯ್ದ ಬರಹಗಳ ಮೂಲಕ ಅವರ ಚಿಂತನೆ ಪರಿಚಯ ಮಾಡುವ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ‘ಬೆಳಕಿನ ಬೆಳೆ’  ಎಂಬ ಮಾಲಿಕೆಯಡಿ ಪ್ರಕಟಿಸಿದ 7 ಪುಸ್ತಕಗಳು ಗಮನ ಸೆಳೆದಿದ್ದವು. ಈ ಮಾಲಿಕೆಯ ಪ್ರಕಟಣೆಯನ್ನು ಡಾ.ಎಂ.ಜಿ. ಹೆಗಡೆ ಅವರ ಸಂಪಾದಕತ್ವದಲ್ಲಿ ಮುಂದುವರೆಸಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಕ್ರಿಯಾ ಮಾಧ್ಯಮ ವಹಿಸಿಕೊಂಡಿದೆ.  ‘ಬೆಳಕಿನ ಬೆಳೆ’ ಮಾಲಿಕೆಯ ಎಂಟನೆಯ ಪುಸ್ತಕವಾಗಿ ಮತ್ತು ಈ ಮಾಲಿಕೆಯಲ್ಲಿ ಕ್ರಿಯಾ ಮಾಧ್ಯಮದ ಪ್ರಕಟಣೆಗಳಲ್ಲಿ ಮೊದಲನೆಯದಾಗಿ, ಪ್ರಸಿದ್ಧ ಚಿಂತಕ ”ಜಿ.ಎನ್. ದೇವಿ ಅವರ ಆಯ್ದ ಬರಹಗಳು’ ಕೃತಿಯು ಅಕ್ಟೋಬರ್ 29 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಯಾಗುತ್ತಿದೆ.

ಕೃತಿ ವಾಚನದ ಮೂಲಕ ಡಾ.ಶ್ರೀಪಾದ ಭಟ್ ರವರು ಕೃತಿ ಬಿಡುಗಡೆ ಮಾಡಲಿದ್ದು,  ಡಾ.ಸಿರಾಜ್ ಅಹ್ಮದ್ ಮತ್ತು ಡಾ.ರಾಜೇಂದ್ರ ಚೆನ್ನಿಯವರು ಡಾ.ಜಿ.ಎನ್ ದೇವಿಯವರ ಬರಹಗಳ ಕುರಿತು ಮಾತನಾಡಲಿದ್ದಾರೆ. ಡಾ.ದೇವಿದಾಸ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಒರ್ಫಿಯಸ್‌ನ ಹಾಡು, ಅಪೂರ್ಣ ರಕ್ತ ಕಣ, ಕಳ್ಳನೆನಿಸಿಕೊಂಡ ಅಲೆಮಾರಿ, ಹಿಂಸೆಯ ಪೂರ್ವಾಪರ, ಭಾಷೆಯ ಇರವು: ಜ್ಞಾನ, ಸಮಾಜ ಮತ್ತು ವಾಚೋಹೀನತೆ, ವಾಚೋಹೀನತೆ, ಸ್ಮೃತಿಯ ಭವಿಷ್ಯ – ದೇವಿ ಅವರ ಈ ಐದು ಪ್ರಸಿದ್ಧ ಲೇಖನಗಳು ಪುಸ್ತಕದಲ್ಲಿ ಇವೆ. ಈ ಪುಸ್ತಕದ ಆಯ್ದ ಭಾಗ ನಿಮ್ಮ ಓದಿಗಾಗಿ….

ಪರ್ಯಾಯದ ಹುಡುಕಾಟ

ಪ್ರಸ್ತುತ ಕೃತಿಯಲ್ಲಿ ಮೂರು ಬಹುಮುಖ್ಯ ವಿಷಯಗಳನ್ನು ಕುರಿತು ದೇವಿಯವರು ಧ್ಯಾನಿಸಿ ಬರೆದ ಬರಹಗಳ ಅನುವಾದಗಳಿವೆ. ಪಶ್ಚಿಮ ಹಾಗೂ ಪೂರ್ವಗಳ ವಿದ್ವತ್ತು, ಜಗತ್ತಿನ ಮಹಾನ್ ಕೃತಿಗಳ ಆಳವಾದ ಓದು, ಚರಿತ್ರೆಯ ದಾರ್ಶನಿಕವಾದ ತಿಳವಳಿಕೆ ಹಾಗೂ ಸಾಮಾಜಿಕ ಬದ್ಧತೆಗಳು ಮುಪ್ಪುರಿಗೊಂಡು ಸೃಷ್ಟಿಸಿದ ಜ್ಞಾನವು ಈ ಬರಹಗಳಲ್ಲಿದೆ. ಅಪ್ರಾಮಾಣಿಕವಾದ ಭಾಷಾಡಂಬರದ “ಜಾಗತಿಕ” ಚಿಂತನೆಯ ಹಗಲುವೇಷದ ಬದಲಾಗಿ ಇಪ್ಪತ್ತನೆಯ ಶತಮಾನದಿಂದ ಇತ್ತೀಚೆಗೆ ಮನುಷ್ಯ ಕುಲವು ಎದುರಿಸಿದ ಆತ್ಮ ಘಾತುಕವಾದ ಹಿಂಸೆಗಳು, ಅತಾರ್ಕಿಕವಾದ ಸ್ವವಿನಾಶ, ಸಿನಿಕತನವುಳ್ಳ ಹತಾಶೆ ಇವುಗಳ ಜೊತೆಗೆ ಇವೆಲ್ಲವನ್ನು ಬದಲಾಯಿಸಬೇಕು ಎನ್ನುವ, ‘ಇನ್ನೊಂದುಜಗತ್ತು ಸಾಧ್ಯವಿದೆ ಎನ್ನುವ ನೈತಿಕವಾದ ನಂಬಿಕೆ ಈ ಬರಹಗಳಲ್ಲಿದೆ. ಎಂ.ಜಿ. ಹೆಗಡೆಯವರ ಮಾಂತ್ರಿಕ ಅನುವಾದವು ದಟ್ಟವಾದ, ಸಂಕೀರ್ಣವಾದ ಅನುಭವಗಳನ್ನು ಕನ್ನಡದಲ್ಲಿಅದ್ಭುತವಾಗಿ ಹಿಡಿದುಕೊಡುತ್ತದೆ. ನನಗಂತೂ ಈ ಕೃತಿಯನ್ನುಓದಿದ್ದು ಇಳಿವಯಸ್ಸಿನಲ್ಲಿ ದೊರೆತ ಶಿಕ್ಷಣವಾಗಿದೆ.

– ಡಾ. ರಾಜೇಂದ್ರಚೆನ್ನಿ

ಒರ್ಫಿಯಸ್‌ನ ಹಾಡು

ಬಹಳ ಹಿಂದೆ–ಎಷ್ಟೆಂದರೆ ಐತಿಹಾಸಿಕ ಯುಗಗಳಲ್ಲಿಅಲ್ಲ, ಪೌರಾಣಿಕ ಕಲ್ಪಗಳಲ್ಲಿ- ಒರ್ಫಿಯಸ್‌ತನ್ನ ಪ್ರೀತಿಯ ಯುರಿಡಿಸಿಯನ್ನು ಮೃತ್ಯುಲೋಕದಿಂದ ಮರಳಿ ತರಲು ಹೋರಾಟ ನಡೆಸಿದ. ಮೃತ್ಯು ದೇವತೆಯು ಒರ್ಫಿಯಸ್‌ಗೆ ಯುರಿಡಿಸಿಯನ್ನು ಹಿಂತಿರುಗಿಸಲು ಒಪ್ಪಿದ. ಆದರೆ ಅವಳು ಅವನನ್ನು ಅನುಸರಿಸಿಕೊಂಡು ಹೋಗುತ್ತಿರುವಾಗ ನಿಜಕ್ಕೂ ಅವಳು ತನ್ನನ್ನು ಹಿಂಬಾಲಿಸುತ್ತಿರುವಳೆ ಎಂದು ಅವನು ಹಿಂತಿರುಗಿ ನೋಡುವಂತಿಲ್ಲಎಂದು ಷರತ್ತು ವಿಧಿಸಿದ. ಒರ್ಫಿಯಸ್‌ ಕತ್ತಲೆಯಚಿಂನ ಜಗತ್ತಿನಿಂದ ಹೊರಬಂದಾಗ ಯುರಿಡಿಸಿ ದಿಟವಾಗಿಯೂ ತನ್ನನ್ನು ಹಿಂಬಾಲಿಸಿ ಬರುತ್ತಿದ್ದಾಳೆ ಎಂಬ ನಂಬಿಕೆಯ ಬಲದ ಮೇಲೇ ಕವನಗಳನ್ನು ರಚಿಸಿ ಪಟ್ಟಿಯಾಗಿ ಹಾಡುತ್ತಿದ್ದ– ಯುರಿಡಿಸಿಗೆ ತನ್ನೆದೆಯ ತವಕ ತಲ್ಲಣಗಳ ನಿವೇದನೆ; ಪ್ರಿಯತಮೆಯನ್ನು ಮೃತ್ಯುಮುಖದಿಂದ ರಕ್ಷಿಸಿ ತಂದಯ ಶೋಕಗೀತೆಯಾಗಿ; ಅದೆಲ್ಲಕ್ಕಿಂತ, ಯುರಿಡಿಸಿ ವಾಸ್ತವವಾಗಿಯೂ ತನ್ನನ್ನು ಹಿಂಬಾಲಿಸುತ್ತಿರುವುದು ಹೌದೇ ಎಂಬ ಆಂತಕವನ್ನು ಗೆಲ್ಲುವ ಉಪಾಚಿಂತವಾಗಿ. ಅವನ ದೈವಿಕ ಸಂಗೀತಕ್ಕೆ ಮರುಳಾಗಿ ಲಕ್ಷಂತರ ಹಕ್ಕಿಗಳು ಯುರಿಡಿಸಿಯನ್ನು ಹಿಂಬಾಲಿಸಿದವೆಂದು ಹೇಳುತ್ತಾರೆ. ಅವುಗಳ ಕಿವಿಯಿಂಪದು ಸಂಗೀತ; ಅದರೆ ಒರ್ಫಿಯಸ್‌ಗೆ ಅದು ಯಾತನೆಗೀತೆ; ಹಾಗೆಯೇ ನಂಬಿಕೆಯಘೋಷಣೆ! ಒರ್ಫಿಯಸ್‌ನ ಆ ಹಾಡು ಪ್ರತಿಯೊಬ್ಬ ಪ್ರವರ್ತಕನ ಕ್ರಿಯೆಯಲ್ಲೂ ಪ್ರತಿಧ್ವನಿಸುತ್ತ…

– ಗಣೇಶ್‌ದೇವಿ (ಒರ್ಫಿಯಸ್‌ನ ಹಾಡು)


ಇದನ್ನೂ ಓದಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬರೋಡ: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...