Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

- Advertisement -
- Advertisement -

‘ಉತ್ತರ ಪ್ರದೇಶದ ದುರ್ಗಾಪೂಜಾ ಪೆಂಡಾಲ್ ಮೇಲೆ ದಾಳಿ ಮಾಡಿದ ಮುಸ್ಲಿಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಹಿಂದೂಗಳು’ ಎಂದು ಪ್ರತಿಪಾದಿಸಿ ಗಲಭೆ ನಡೆಸುತ್ತಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರತಾಪ್‌ಗಢ್ ಜಿಲ್ಲೆಯ ಲಾಲ್‌ಗಂಜ್ ಪಟ್ಟಣದ ಸಮೀಪವಿರುವ ದುರ್ಗಾ ಮಂಟಪದ ಮೇಲೆ ಮುಸ್ಲಿಂ ಗುಂಪು ಇತ್ತೀಚೆಗೆ ದಾಳಿ ಮಾಡಿದೆ ಎಂದು ಈ ವಿಡಿಯೊ ಜೊತೆಗಿನ ಪೋಸ್ಟ್ ಪ್ರತಿಪಾದಿಸುತ್ತದೆ.

ಮುಸ್ಲಿಮರ ದಾಳಿಗೆ ಪ್ರತೀಕಾರವಾಗಿ ಹಿಂದೂಗಳು ಮುಸ್ಲಿಮರ ವಾಹನಗಳನ್ನು ಧ್ವಂಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಹೇಳಲಾಗಿದೆ. ಪೋಸ್ಟ್‌ನ ಆರ್ಕೈವ್‌ ಇಲ್ಲಿ ನೋಡಬಹುದು.

ಇದನ್ನೂ ಓದಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ವೀಡಿಯೋವನ್ನು ಕೂಲಂಕುಷವಾಗಿ ಗಮನಿಸಿದಾಗ, ಛತ್ತೀಸ್‌ಗಢ ವಾಹನದ ನೋಂದಣಿ ಸಂಖ್ಯೆಯನ್ನು ಜನಸಮೂಹವು ಧ್ವಂಸಗೊಳಿಸುತ್ತಿರುವ ವಾಹನಗಳಲ್ಲಿ ಕಾಣಬಹುದಾಗಿದೆ. ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಹುಡುಕಿದಾಗ, ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಇತ್ತೀಚಿನ ಕೋಮು ಹಿಂಸಾಚಾರದ ದೃಶ್ಯಗಳು ಎಂದು ವಿವರಿಸುವ ಹಲವಾರು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ನೋಡಬಹುದಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವೀಡಿಯೊಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹುಡುಕಾಡಿದಾಗ, ‘ದೈನಿಕ್ ಭಾಸ್ಕರ್’ ಪ್ರಕಟಿಸಿದ ಸುದ್ದಿಯೊಂದು ಲಭಿಸಿದ್ದು, ಅದರಲ್ಲಿ ಧ್ವಂಸಗೊಳಿಸಿದ ವಾಹನಗಳ ದೃಶ್ಯಗಳನ್ನು ನೋಡಬಹುದು. ಈ ವರದಿಯು, 05 ಅಕ್ಟೋಬರ್ 2021 ರಂದು ಛತ್ತೀಸ್‌ಗಢದ ಕಭಿರ್‌ಧಾಮ್ ಜಿಲ್ಲೆಯ ಕವರ್ಧಾ ಪಟ್ಟಣದಲ್ಲಿ ದೊಣ್ಣೆಗಳೊಂದಿಗೆ ಬಂದಿದ್ದ ದೊಡ್ಡ ಗುಂಪು ರಸ್ತೆಯಲ್ಲಿದ್ದ ವಾಹನಗಳನ್ನು ಧ್ವಂಸಗೊಳಿಸಿದೆ ಎಂದು ವರದಿ ಮಾಡಿದೆ.

ಈ ಘಟನೆಯ ಸಂಪೂರ್ಣ ವಿವರಗಳ ಹಲವಾರು ವರದಿಗಳು, ವಿಡಿಯೊ ವರದಿಗಳು ಪ್ರಕಟವಾಗಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವರದಿಗಳು, “ಲೋಹರಾ ಚೌಕ್ ಪ್ರದೇಶದಿಂದ ಧಾರ್ಮಿಕ ಧ್ವಜಗಳನ್ನು ತೆಗೆದುಹಾಕುವ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದವು. ಈ ಸಂಘರ್ಷದ ನಂತರ 03 ಅಕ್ಟೋಬರ್ 2021 ರಂದು ಕವರ್ಧಾದಲ್ಲಿ ಕೋಮುಗಲಭೆ ಪ್ರಾರಂಭವಾಯಿತು”. ನಂತರ 05 ಅಕ್ಟೋಬರ್ 2021 ರಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದ ಬಂದ್‌ ವೇಳೆ, ಆ ಗುಂಪು ಮುಸ್ಲಿಮರು ಇರುವ ಪ್ರದೇಶಗಳಿಗೆ ಪ್ರವೇಶಿಸಿ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳನ್ನು ಧ್ವಂಸಗೊಳಿಸಿತು” ಎಂದು ಹೇಳುತ್ತವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ವೈರಲ್‌ ವಿಡಿಯೊ ಉತ್ತರ ಪ್ರದೇಶದ ಪ್ರತಾಪ್‌ಘರ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯ ದೃಶ್ಯಗಳೆಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗ, ಉತ್ತರ ಪ್ರದೇಶ ಪೊಲೀಸ್ ಫ್ಯಾಕ್ಟ್-ಚೆಕ್ ತಂಡವು 13 ಅಕ್ಟೋಬರ್ 2021 ರಂದು ಟ್ವೀಟ್ ಮೂಲಕ ಸ್ಪಷ್ಟೀಕರಣವನ್ನು ನೀಡಿದೆ.

ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಹೊರತು ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯಲ್ಲಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಪ್ರತಾಪ್‌ಗಢದ ಲಾಲ್‌ಗಂಜ್ ಪ್ರದೇಶದ ಬಳಿ ದುರ್ಗಾಪೂಜಾ ಪೆಂಡಾಲ್‌ ಮೇಲೆ ಮುಸ್ಲಿಂ ಗುಂಪು ಯಾವುದೆ ದಾಳಿ ನಡೆಸಿಲ್ಲ” ಎಂದು ಪ್ರತಾಪ್‌ಗಢ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಛತ್ತೀಸ್‌ಗಢದ ಕವರ್ಧಾ ಕೋಮು ಹಿಂಸಾಚಾರದ ವೀಡಿಯೊವನ್ನು ಉತ್ತರ ಪ್ರದೇಶದ ದುರ್ಗಾ ಪೆಂಡಾಲ್‌ ಮೇಲೆ ದಾಳಿ ಮಾಡಿದ ಮುಸ್ಲಿಂಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಹಿಂದೂಗಳ ಗುಂಪಿನ ದೃಶ್ಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...