Homeಮುಖಪುಟ‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’ - ಯುಪಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಛೀಮಾರಿ

‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’ – ಯುಪಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಛೀಮಾರಿ

- Advertisement -
- Advertisement -

ಯುವತಿಯ ಕುಟುಂಬದ ಇಚ್ಛೆಗೆ ವಿರುದ್ದವಾಗಿ ಮದುವೆಯಾಗಿರುವ ಹುಡುಗನ ಕುಟಂಬದ ಇಬ್ಬರನ್ನು ಬಂಧಿಸಿದ್ದಕ್ಕೆ, ಉತ್ತರ ಪ್ರದೇಶದ ಪೊಲೀಸರ ವಿರುದ್ದ ದೆಹಲಿ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’(ಯುಪಿ ಮೇ ಚಲ್ತಾ ಹೋಗಾ ಯಹಾ ನಹೀಂ) ಎಂದು ಹೈಕೋರ್ಟ್ ಯುಪಿ ಪೊಲೀಸರಿಗೆ ಗುರುವಾರ ಛೀಮಾರಿ ಹಾಕಿದೆ. ದಂಪತಿಗಳು ವಯಸ್ಕರಾಗಿದ್ದು, ಜುಲೈನಲ್ಲಿ ತಮ್ಮ ಸ್ವಂತ ಇಚ್ಛೆಯಿಂದ ವಿವಾಹವಾಗಿದ್ದರು. ಆದರೆ ಅವರಿಗೆ ಯುವತಿಯ ಕುಟುಂಬವು ಪದೇ ಪದೇ ಬೆದರಿಕೆ ಹಾಕುತ್ತಿತ್ತು.

“ಹುಡುಗಿ ಅಪ್ರಾಪ್ತರಾಗಿರಲಿ ಅಥವಾ ಪ್ರಾಪ್ತ ವಯಸ್ಕರಾಗಿಲಿ, ಯಾರೋ ನಿಮ್ಮ ಬಳಿ ಬಂದರೆಂದು ನೀವು ಹುಡುಗಿಯ ವಯಸ್ಸನ್ನು ದೃಢೀಕರಿಸದೆ ಜನರನ್ನು ಬಂಧಿಸುತ್ತೀರಾ?” ಎಂದು ನ್ಯಾಯಾಲಯ ಯುಪಿ ಪೊಲೀಸರನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

ಈ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡದೆ ಯುಪಿಯ ಶಾಮ್ಲಿ ಪೊಲೀಸರು ಹುಡುಗನ ತಂದೆ ಮತ್ತು ಸಹೋದರನನ್ನು ಬಂಧಿಸಿ ದೆಹಲಿಯಿಂದ ಕರೆದೊಯ್ದಿದ್ದರು. ಬಂಧನವಾಗಿ ಒಂದು ತಿಂಗಳವರೆಗೆ ಅವರು ಎಲ್ಲಿದ್ದಾರೆ ಎಂದು ಅವರ ಕುಟುಂಬಿಕರಿಗೆ ಪೊಲೀಸರು ತಿಳಿಸಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಹುಡುಗನ ತಂದೆ ಮತ್ತು ಸಹೋದರನನ್ನು ಯುಪಿ ಪೊಲೀಸರು ಬಂಧಿಸುವಂತಿಲ್ಲ. ಅಲ್ಲದೆ ದೆಹಲಿ ಪೊಲೀಸರಿಗೆ ತಿಳಿಸದೆ ದೆಹಲಿಯಿಂದ ಕರೆದೊಯ್ಯುವಂತಿಲ್ಲ” ಎಂದು ನ್ಯಾಯಾಲಯವು ಹೇಳಿದೆ.

ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 8 ರಂದು ಅವರನ್ನು ಬಂಧಿಸಲಾಯಿತು ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿ: ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

“ಯುವತಿಯು ಪ್ರಾಪ್ತ ವಯಸ್ಕರಾಗಿದ್ದು, ತನ್ನ ಸ್ವಂತ ಇಚ್ಛೆಯಿಂದ ತನ್ನ ಪೋಷಕರ ಮನೆಯನ್ನು ತೊರೆದು ಹುಡುಗನನ್ನು ವಿವಾಹವಾಗಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪೊಲೀಸರು ವಿಫಲರಾಗಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.

ದಂಪತಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ, ನ್ಯಾಯಾಲಯವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ದೆಹಲಿಯಿಂದ ವ್ಯಕ್ತಿಯ ಕುಟುಂಬ ಸದಸ್ಯರನ್ನು ಬಂಧಿಸಿದ್ದರೆ ಯುಪಿ ಪೊಲೀಸ್ ಸಿಬ್ಬಂದಿ ವಿರುದ್ಧ ಇಲಾಖಾ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರಕರಣದ ದಾಖಲಾತಿಯೊಂದಿಗೆ ಅಕ್ಟೋಬರ್ 28 ರಂದು ಖುದ್ದು ಹಾಜರಾಗುವಂತೆ ಶಾಮ್ಲಿ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ನ್ಯಾಯಾಲಯ ನೋಟಿಸ್ ನೀಡಿದೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....