Homeಮುಖಪುಟ2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

- Advertisement -
- Advertisement -

2ಜಿ ತರಂಗಾಂತರ (2G Spectrum) ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಸಂಜಯ್ ನಿರುಪಮ್ ಅವರು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಏಳು ವರ್ಷಗಳ ನಂತರ, ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರಾಯ್ ಅವರು ಸಂಜಯ್ ನಿರುಪಮ್ ಅವರಿಗೆ “ಬೇಷರತ್ ಕ್ಷಮೆಯಾಚನೆ” ಯನ್ನು ಮಾಡಿದ್ದಾರೆ.

2014 ರಲ್ಲಿ, ವಿನೋದ್ ರಾಯ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 2G ತರಂಗಾಂತರ ಹಂಚಿಕೆ ಪ್ರಕರಣದ ವರದಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಹೊರಗಿಡುವಂತೆ ಒತ್ತಡ ಹೇರಿದ ಸಂಸದರಲ್ಲಿ ಸಂಜಯ್‌ ನಿರುಪಮ್ ಕೂಡಾ ಒಬ್ಬರು ಎಂದು  ಹೇಳಿದ್ದರು. ವಿನೋದ್‌ ರೈ ಅವರ 2014 ರ ಪುಸ್ತಕ, Not Just an Accountant: The Diary of the Nation’s Conscience Keeper ಬಿಡುಗಡೆಯ ಸಮಯದಲ್ಲಿ ಈ ಸಂದರ್ಶನವನ್ನು ಪ್ರಸಾರ ಮಾಡಲಾಯಿತು ಮತ್ತು ಮಾಧ್ಯಮಗಳಲ್ಲಿ ಅವರ ಹೇಳಿಕೆಯನ್ನು ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ವಿನೋದ್ ರಾಯ್ ಅವರ ಬೇಷರತ್ತಾದ ಕ್ಷಮೆಯಾಚನೆಯ ಕುರಿತು ಪ್ರತಿಕ್ರಿಯಿಸಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಸಂಜಯ್‌ ನಿರುಪಮ್, ಇದನ್ನು “ಸುವರ್ಣ ದಿನ” ಎಂದು ಬಣ್ಣಿಸಿದ್ದಾರೆ.

“ಆ ಸಮಯದಲ್ಲಿ ಅವರ ತಪ್ಪು ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ನಾನು ಮಾಜಿ ಸಿಎಜಿಯನ್ನು ಒತ್ತಾಯಿಸಿದ್ದೆ. ಆದರೆ ಅವರು ಹಾಗೆ ಮಾಡಲು ನಿರಾಕರಿಸಿದರು. ಹಾಗಾಗಿ ನಾನು ಹೊಸದಿಲ್ಲಿಯ ಪಟಿಯಾಲ ಹೌಸ್‌ನಲ್ಲಿರುವ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ವಿನೋದ್‌ ರೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಹೇಳಿದ ಅವರು ಕಲ್ಲಿದ್ದಲು ಬ್ಲಾಕ್ ಮತ್ತು 2ಜಿ ತರಂಗಾಂತರ ಹಂಚಿಕೆ ಪ್ರಕರಣಗಳ ಕುರಿತ ವಿನೋದ್ ರಾಯ್ ಅವರ ವರದಿಯು ‘ಸಂಪೂರ್ಣ ನಕಲಿ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

“ಇದನ್ನು ನ್ಯಾಯಾಲಯ ಹೇಳಿಲ್ಲ. ಆದರೆ, 2ಜಿ ತರಂಗಾಂತರ ಹಂಚಿಕೆ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಅವರು ಸಿದ್ಧಪಡಿಸಿದ ವರದಿಯು ಅಸಂಬದ್ಧವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ… 2ಜಿ ವರದಿಯ ಪ್ರಕರಣದ, ಏಳು ವರ್ಷಗಳ ವಿಚಾರಣೆಯ ನಂತರ ಕೂಡಾ, ಆಪಾದಿತ ಹಗರಣದ ಬಗ್ಗೆ ಸಿಬಿಐ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ವರದಿ ನಕಲಿಯಾಗಿತ್ತು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ವರದಿಯೂ ನಕಲಿ. ಈ ನಕಲಿ ವರದಿಗಳಿಗೂ ವಿನೋದ್ ರಾಯ್ ಇಡೀ ದೇಶಕ್ಕೆ ಕ್ಷಮೆ ಯಾಚಿಸಬೇಕು” ಎಂದು ಸಂಜಯ್ ನಿರುಪಮ್‌ ಹೇಳಿದ್ದಾರೆ.

ನೋಟರಿ ಮಾಡಿದ ಅಫಿಡವಿತ್

ವಿನೋದ್ ರಾಯ್ ಅವರು ಮಾಡಿರುವ ನೋಟರಿ ಅಫಿಡವಿಟ್‌ನ ಪ್ರತಿಯೊಂದನ್ನು ಟ್ವೀಟ್ ಮಾಡಿರುವ ಸಂಜಯ್ ನಿರುಪಮ್‌, “ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಸರ್ಕಾರವು ಮಾಡಿದ 2ಜಿ ಮತ್ತು ಕಲ್ಲಿದ್ದಲು ನಿಕ್ಷೇಪಗಳ ಬಗ್ಗೆ ಎಲ್ಲಾ ಖೋಟಾ ವರದಿಗಳಿಗಾಗಿ ವಿನೋದ್‌ ರೈ ಅವರು ಈಗ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

ಅಕ್ಟೋಬರ್ 23 ರಂದು ವಿನೋದ್ ರಾಯ್ ಈ ಅಫಿಡವಿತ್‌ ಅನ್ನು ನೋಟರಿ ಮಾಡಿದ್ದರು. ಅದರಲ್ಲಿ, “ಸೆಪ್ಟೆಂಬರ್‌ 14 ರ ತನ್ನ ಪುಸ್ತಕ ಬಿಡುಗಡೆಯ ಸಮಯದಲ್ಲಿ ಸಂಜಯ್ ನಿರುಪಮ್ ವಿರುದ್ದ ಹಲವು ಹೇಳಿಕೆಗಳನ್ನು ನೀಡಿದ್ದಾರೆ. ಟೈಮ್ಸ್ ನೌ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಮಾಧ್ಯಮ ಸಂದರ್ಶನಗಳಲ್ಲಿ ಪ್ರಸಾರವಾಗಿದೆ ಮತ್ತು ಟೈಮ್ಸ್ ಆಫ್ ಇಂಡಿಯಾ ಹಾಗೂ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಸೇರಿದಂತೆ ಮಾಧ್ಯಮ ಪ್ರಕಟಣೆಗಳಲ್ಲಿ ಪ್ರಕಟಿಸಿದ್ದಾರೆ” ಎಂದು ಒಪ್ಪಿಕೊಂಡಿದ್ದಾರೆ.

“ಸಂದರ್ಶಕರು ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಪ್ರಮಾದಪೂರ್ವಕವಾಗಿ ಮತ್ತು ತಪ್ಪಾಗಿ ಸಂಜಯ್ ನಿರುಪಮ್ ಅವರ ಹೆಸರನ್ನು ಸಂಸದರಲ್ಲಿ ಒಬ್ಬರು ಎಂದು ಉಲ್ಲೇಖಿಸಿದ್ದೇನೆ. ಅದು ದೂರದರ್ಶನದಲ್ಲಿ ಪ್ರಸಾರವಾದ ಮತ್ತು ಪ್ರಕಟಿಸಿದ ಹೇಳಿಕೆಗಳು ವಾಸ್ತವವಾಗಿ ತಪ್ಪು” ಎಂದು ವಿನೋದ್ ರಾಯ್ ಹೇಳಿದ್ದಾರೆ.

“ನನ್ನ ಹೇಳಿಕೆಗಳಿಂದಾಗಿ ಸಂಜಯ್ ನಿರುಪಮ್, ಅವರ ಕುಟುಂಬ ಮತ್ತು ಅವರ ಹಿತೈಷಿಗಳಿಗೆ ಉಂಟಾದ ನೋವು ಮತ್ತು ಸಂಕಟವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ, ನನ್ನ ಇಂತಹ ಹೇಳಿಕೆಗಳಿಂದ ಉಂಟಾದ ನೋವಿಗೆ ನನ್ನ ಬೇಷರತ್ ಕ್ಷಮೆಯನ್ನು ಸಂಜಯ್ ನಿರುಪಮ್, ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅವರ ಹಿತೈಷಿಗಳೊಂದಿಗೆ ಕೇಳುತ್ತಿದ್ದೇನೆ….ಸಂಜಯ್ ನಿರುಪಮ್ ಅವರು ನನ್ನ ಬೇಷರತ್ ಕ್ಷಮೆಯನ್ನು ಪರಿಗಣಿಸಿ, ಇದನ್ನು ಇಲ್ಲಿಗೆ ಬಿಟ್ಟುಬಿಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಿನೋದ್ ರಾಯ್ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಸತಿ’ ಹೋದ ರೂಪ್ ಕನ್ವರ್‌ ದೇಗುಲಕ್ಕೆ ಆರೆಸ್ಸೆಸ್ ಬೆಂಬಲ ಮತ್ತು ನಾನು ಆರೆಸ್ಸೆಸ್ ತೊರೆದದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...