Homeಮುಖಪುಟ2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

- Advertisement -
- Advertisement -

2ಜಿ ತರಂಗಾಂತರ (2G Spectrum) ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಸಂಜಯ್ ನಿರುಪಮ್ ಅವರು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ ಏಳು ವರ್ಷಗಳ ನಂತರ, ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವಿನೋದ್ ರಾಯ್ ಅವರು ಸಂಜಯ್ ನಿರುಪಮ್ ಅವರಿಗೆ “ಬೇಷರತ್ ಕ್ಷಮೆಯಾಚನೆ” ಯನ್ನು ಮಾಡಿದ್ದಾರೆ.

2014 ರಲ್ಲಿ, ವಿನೋದ್ ರಾಯ್ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, 2G ತರಂಗಾಂತರ ಹಂಚಿಕೆ ಪ್ರಕರಣದ ವರದಿಯಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಹೊರಗಿಡುವಂತೆ ಒತ್ತಡ ಹೇರಿದ ಸಂಸದರಲ್ಲಿ ಸಂಜಯ್‌ ನಿರುಪಮ್ ಕೂಡಾ ಒಬ್ಬರು ಎಂದು  ಹೇಳಿದ್ದರು. ವಿನೋದ್‌ ರೈ ಅವರ 2014 ರ ಪುಸ್ತಕ, Not Just an Accountant: The Diary of the Nation’s Conscience Keeper ಬಿಡುಗಡೆಯ ಸಮಯದಲ್ಲಿ ಈ ಸಂದರ್ಶನವನ್ನು ಪ್ರಸಾರ ಮಾಡಲಾಯಿತು ಮತ್ತು ಮಾಧ್ಯಮಗಳಲ್ಲಿ ಅವರ ಹೇಳಿಕೆಯನ್ನು ಪ್ರಕಟಿಸಲಾಗಿತ್ತು.

ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ವಿನೋದ್ ರಾಯ್ ಅವರ ಬೇಷರತ್ತಾದ ಕ್ಷಮೆಯಾಚನೆಯ ಕುರಿತು ಪ್ರತಿಕ್ರಿಯಿಸಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಸಂಜಯ್‌ ನಿರುಪಮ್, ಇದನ್ನು “ಸುವರ್ಣ ದಿನ” ಎಂದು ಬಣ್ಣಿಸಿದ್ದಾರೆ.

“ಆ ಸಮಯದಲ್ಲಿ ಅವರ ತಪ್ಪು ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ನಾನು ಮಾಜಿ ಸಿಎಜಿಯನ್ನು ಒತ್ತಾಯಿಸಿದ್ದೆ. ಆದರೆ ಅವರು ಹಾಗೆ ಮಾಡಲು ನಿರಾಕರಿಸಿದರು. ಹಾಗಾಗಿ ನಾನು ಹೊಸದಿಲ್ಲಿಯ ಪಟಿಯಾಲ ಹೌಸ್‌ನಲ್ಲಿರುವ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ವಿನೋದ್‌ ರೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಹೇಳಿದ ಅವರು ಕಲ್ಲಿದ್ದಲು ಬ್ಲಾಕ್ ಮತ್ತು 2ಜಿ ತರಂಗಾಂತರ ಹಂಚಿಕೆ ಪ್ರಕರಣಗಳ ಕುರಿತ ವಿನೋದ್ ರಾಯ್ ಅವರ ವರದಿಯು ‘ಸಂಪೂರ್ಣ ನಕಲಿ’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

“ಇದನ್ನು ನ್ಯಾಯಾಲಯ ಹೇಳಿಲ್ಲ. ಆದರೆ, 2ಜಿ ತರಂಗಾಂತರ ಹಂಚಿಕೆ ಮತ್ತು ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಅವರು ಸಿದ್ಧಪಡಿಸಿದ ವರದಿಯು ಅಸಂಬದ್ಧವಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ… 2ಜಿ ವರದಿಯ ಪ್ರಕರಣದ, ಏಳು ವರ್ಷಗಳ ವಿಚಾರಣೆಯ ನಂತರ ಕೂಡಾ, ಆಪಾದಿತ ಹಗರಣದ ಬಗ್ಗೆ ಸಿಬಿಐ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ವರದಿ ನಕಲಿಯಾಗಿತ್ತು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ವರದಿಯೂ ನಕಲಿ. ಈ ನಕಲಿ ವರದಿಗಳಿಗೂ ವಿನೋದ್ ರಾಯ್ ಇಡೀ ದೇಶಕ್ಕೆ ಕ್ಷಮೆ ಯಾಚಿಸಬೇಕು” ಎಂದು ಸಂಜಯ್ ನಿರುಪಮ್‌ ಹೇಳಿದ್ದಾರೆ.

ನೋಟರಿ ಮಾಡಿದ ಅಫಿಡವಿತ್

ವಿನೋದ್ ರಾಯ್ ಅವರು ಮಾಡಿರುವ ನೋಟರಿ ಅಫಿಡವಿಟ್‌ನ ಪ್ರತಿಯೊಂದನ್ನು ಟ್ವೀಟ್ ಮಾಡಿರುವ ಸಂಜಯ್ ನಿರುಪಮ್‌, “ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಸರ್ಕಾರವು ಮಾಡಿದ 2ಜಿ ಮತ್ತು ಕಲ್ಲಿದ್ದಲು ನಿಕ್ಷೇಪಗಳ ಬಗ್ಗೆ ಎಲ್ಲಾ ಖೋಟಾ ವರದಿಗಳಿಗಾಗಿ ವಿನೋದ್‌ ರೈ ಅವರು ಈಗ ರಾಷ್ಟ್ರದ ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯ ಸಮಸ್ಯೆಯೇನೆಂದರೆ…!’: ಪ್ರಶಾಂತ್ ಕಿಶೋರ್ ಖಾಸಗಿ ಮಾತು ವೈರಲ್

ಅಕ್ಟೋಬರ್ 23 ರಂದು ವಿನೋದ್ ರಾಯ್ ಈ ಅಫಿಡವಿತ್‌ ಅನ್ನು ನೋಟರಿ ಮಾಡಿದ್ದರು. ಅದರಲ್ಲಿ, “ಸೆಪ್ಟೆಂಬರ್‌ 14 ರ ತನ್ನ ಪುಸ್ತಕ ಬಿಡುಗಡೆಯ ಸಮಯದಲ್ಲಿ ಸಂಜಯ್ ನಿರುಪಮ್ ವಿರುದ್ದ ಹಲವು ಹೇಳಿಕೆಗಳನ್ನು ನೀಡಿದ್ದಾರೆ. ಟೈಮ್ಸ್ ನೌ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಮಾಧ್ಯಮ ಸಂದರ್ಶನಗಳಲ್ಲಿ ಪ್ರಸಾರವಾಗಿದೆ ಮತ್ತು ಟೈಮ್ಸ್ ಆಫ್ ಇಂಡಿಯಾ ಹಾಗೂ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಸೇರಿದಂತೆ ಮಾಧ್ಯಮ ಪ್ರಕಟಣೆಗಳಲ್ಲಿ ಪ್ರಕಟಿಸಿದ್ದಾರೆ” ಎಂದು ಒಪ್ಪಿಕೊಂಡಿದ್ದಾರೆ.

“ಸಂದರ್ಶಕರು ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಪ್ರಮಾದಪೂರ್ವಕವಾಗಿ ಮತ್ತು ತಪ್ಪಾಗಿ ಸಂಜಯ್ ನಿರುಪಮ್ ಅವರ ಹೆಸರನ್ನು ಸಂಸದರಲ್ಲಿ ಒಬ್ಬರು ಎಂದು ಉಲ್ಲೇಖಿಸಿದ್ದೇನೆ. ಅದು ದೂರದರ್ಶನದಲ್ಲಿ ಪ್ರಸಾರವಾದ ಮತ್ತು ಪ್ರಕಟಿಸಿದ ಹೇಳಿಕೆಗಳು ವಾಸ್ತವವಾಗಿ ತಪ್ಪು” ಎಂದು ವಿನೋದ್ ರಾಯ್ ಹೇಳಿದ್ದಾರೆ.

“ನನ್ನ ಹೇಳಿಕೆಗಳಿಂದಾಗಿ ಸಂಜಯ್ ನಿರುಪಮ್, ಅವರ ಕುಟುಂಬ ಮತ್ತು ಅವರ ಹಿತೈಷಿಗಳಿಗೆ ಉಂಟಾದ ನೋವು ಮತ್ತು ಸಂಕಟವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ, ನನ್ನ ಇಂತಹ ಹೇಳಿಕೆಗಳಿಂದ ಉಂಟಾದ ನೋವಿಗೆ ನನ್ನ ಬೇಷರತ್ ಕ್ಷಮೆಯನ್ನು ಸಂಜಯ್ ನಿರುಪಮ್, ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅವರ ಹಿತೈಷಿಗಳೊಂದಿಗೆ ಕೇಳುತ್ತಿದ್ದೇನೆ….ಸಂಜಯ್ ನಿರುಪಮ್ ಅವರು ನನ್ನ ಬೇಷರತ್ ಕ್ಷಮೆಯನ್ನು ಪರಿಗಣಿಸಿ, ಇದನ್ನು ಇಲ್ಲಿಗೆ ಬಿಟ್ಟುಬಿಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಿನೋದ್ ರಾಯ್ ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಸತಿ’ ಹೋದ ರೂಪ್ ಕನ್ವರ್‌ ದೇಗುಲಕ್ಕೆ ಆರೆಸ್ಸೆಸ್ ಬೆಂಬಲ ಮತ್ತು ನಾನು ಆರೆಸ್ಸೆಸ್ ತೊರೆದದ್ದು ಹೀಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...