Homeಸಿನಿಮಾಕ್ರೀಡೆಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು.

- Advertisement -
- Advertisement -

ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯ ನಡೆಯುತ್ತಿದೆ. ಯಾವುದಾದರೂ ಒಂದು ತಂಡ ಗೆಲ್ಲಲು ಕೊನೆ ಎಸೆತಕ್ಕೆ ಎರಡು ರನ್ ಬೇಕಿದೆ… ಬ್ಯಾಟಿಂಗ್ ಮಾಡಲು ನಿಂತವನಿಗೆ “ಶತಕ” ಗಳಿಸಲು ನಾಲ್ಕು ರನ್ ಬೇಕಿದೆ. ಇನ್ನೇನು ಬೌಂಡರಿ ಹೋಯಿತು ಎನ್ನುವಷ್ಟರಲ್ಲಿ ಅಲ್ಲೊಬ್ಬ ಫೀಲ್ಡರ್ ಇರುತ್ತಾನೆ.. ಎರಡು ರನ್ ಓಡಿ ಗೆಲುವಿನ ನಗೆ ಬೀರಿದ ತಂಡದ ಖುಷಿ ಒಂದು ಕಡೆಯಾದರೆ “ಶತಕ” ಎರಡೇ ರನ್ ಗಳಿಂದ ಶತಕ ತಪ್ಪಿಸುಕೊಳ್ಳುತ್ತಾನೆಂದು ಅಭಿಮಾನಿಗಳು ಕೈಕೈ ಹಿಸುಕಿಕೊಳ್ಳುತ್ತಿರುವ ಸಂದರ್ಭದಲ್ಲಿ…. ಒಂದು ಅಚ್ಚರಿ ನಡೆದೇ ಬಿಡುತ್ತದೆ.

ಆ ಫೀಲ್ಡರ್…. ಈಗಾಗಲೇ ಎರಡು ರನ್ ಓಡಿ ಗೆಲುವಿನ ಸಂಭ್ರಮದಲ್ಲಿ ತೇಲುತ್ತಿದ್ದವರಿಗೆ…. ಒಂದು ಟ್ವಿಸ್ಟ್ ಕೊಟ್ಟು ಇಡೀ ಅಭಿಮಾನಿಗಳ ಮನದಲ್ಲಿ ಮತ್ತೊಂದು ಕೋಲಾಹಲ ಎಬ್ಬಿಸಿ ಬಿಡುತ್ತಾನೆ.

ಸಲೀಸಾಗಿ ತನ್ನ ಕೈ ಸೇರುತ್ತಿದ್ದ ಬಾಲ್ ಅನ್ನು ಬೇಕೆಂತಲೇ ಬೌಂಡರಿಗೆ ಬಿಟ್ಟು ಬಿಡುತ್ತಾನೆ.
“ಶತಕ” ಭಾರಿಸಿದವನಿಗೆ ಅಚ್ಚರಿ ಮೇಲೆ ಅಚ್ಚರಿ. ಆತ “ಮ್ಯಾನ್ ಆಪ್ ದಿ ಮ್ಯಾಚ್” ಪ್ರಶಸ್ತಿ ಪಡೆದು ಅಭಿಪ್ರಾಯ ಹಂಚಿಕೊಳ್ಳುವಾಗ ಹೇಳುತ್ತಾನೆ, “ನಮ್ಮ ಮನೆಯಲ್ಲಿ ನನ್ನ ತಂದೆ ತಿನ್ನಲು ಹಣ್ಣು ಹಂಪಲು ತಂದಾಗ ನನ್ನ ಸಹೋದರ ತನ್ನ ಪಾಲನ್ನೂ ನನಗೆ ಕೊಟ್ಟು ಖುಷಿ ಗೊಳಿಸುತ್ತಿದ್ದ… ಆದರೆ ಇಂದು ನಮ್ಮಣ್ಣ ಮತ್ತು ನಾನು ಕಾರಣಾಂತರಗಳಿಂದ ದೂರವಾಗಿದ್ದೇವೆ. ಹೌದು. ಇಂದಲ್ಲಾ ನಾಳೆ ನಾವು ಒಂದಾಗುತ್ತೇವೆ. ನಮಗೆ ಶಾಂತಿ ಬೇಕಿದೆ. ನೆಮ್ಮದಿ ಬೇಕಿದೆ. ಇವತ್ತು ನನ್ನ ಸಹೋದರನನ್ನು ನೆನಪಿಸಿದ ನಿಮ್ಮ ತಂಡಕ್ಕೆ ನನ್ನ ಅನಂತ ಧನ್ಯವಾದಗಳು”

ನಂತರ.. ಬೌಂಡರಿಗೆ ಬಾಲ್ ಬಿಟ್ಟ ಆಟಗಾರ ತನ್ನ ಅಭಿಪ್ರಾಯ ಹೇಳುತ್ತಾನೆ.
“ನಾನು ಕೈಯಿಂದ ಬಾಲ್ ಬಿಟ್ಟು ಆಟದ ದೃಷ್ಟಿಯಿಂದ ತಪ್ಪು ಮಾಡಿರಬಹುದು. ಆದರೆ, ನೀವು ಆಗಲೇ ಪಂದ್ಯ ಗೆದ್ದಿದ್ದೀರಿ, ನಮಗೆ ಉಳಿದಿರುವುದು ನಿಮ್ಮ ಹೃದಯ ಗೆಲ್ಲುವುದೊಂದೇ ಮಾರ್ಗ… ಕೋಟ್ಯಾಂತರ ಮನಸ್ಸುಗಳನ್ನು ಬೆಸೆಯಬಹುದಾದ ಶಕ್ತಿ ನನ್ನ ಬಳಿ ಬರುತ್ತಿದ್ದ ಪುಟ್ಟ ಬಾಲ್ ಗೆ ಇದೆ ಎಂಬುದು ಆ ಕ್ಷಣ ಹೊಳೆಯಿತು. ಹೀಗಾಗಿ ನಾವು ಆಡುತ್ತಿರುವುದು ಆಟವೇ ಹೊರತು, ಯುದ್ದವಲ್ಲ ಎಂಬುದನ್ನು ನಾನು ತೋರಿಸಬೇಕಿತ್ತು. ನಾನು ಮಾಡಿದ್ದು ತಪ್ಪೇನಿಸಿದರೆ ನಮ್ಮ ತಂಡದವರ ನನಗೆ ಯಾವ ಶಿಕ್ಷೆ ವಿಧಿಸಿದರು ನಾನು ಅಭಿಮಾನದಿಂದ ಸ್ವೀಕರಿಸುತ್ತೇನೆ. ಮತ್ತೂ ಆ ಸಹೋದರರಿಬ್ಬರೂ ಆದಷ್ಟು ಬೇಗ ಒಂದಾಗಲಿ ಎಂದು ಹಾರೈಸುತ್ತೇನೆ”.

ಅಲ್ಲಿಗೆ ಎರಡು ತಂಡದ ಅಭಿಮಾನಿಗಳ ಮನದಲ್ಲಿ ಪುಟ್ಟದೊಂದು ಸ್ನೇಹದ ಸೇತುವೆ ತೆರೆದು ಕೊಂಡಿತು. ಅಭಿಮಾನಿಗಳ ಕಣ್ಣುಗಳು ಒದ್ದೆಯಾಗಿದ್ದವು. ಒಂದು ಕೊನೆ ಎಸೆತ ಇಡೀ ಮನಸ್ಸನ್ನು ಗೆಲ್ಲುವ, ಎರಡು ದೇಶಗಳ ಸಂಬಂಧಗಳನ್ನು ಬೆಸೆಯುವ ಶಕ್ತಿ ಹೊಂದಿದೆ ಎಂಬುದು ಎಲ್ಲರಿಗೂ ತಿಳಿಯಿತು. ಆಗ ಗೆಲುವಿನ ನಗೆ ಬೀರಿದ್ದು ಎರಡು ದೇಶದ ಅಭಿಮಾನಿಗಳು.

  • ಅನಿಲ್ ಕುಮಾರ್ ಗುನ್ನಾಪೂರ

(ಅನಿಲ್ ಕುಮಾರ್ ಗುನ್ನಾಪೂರ ವಿಜಯಪುರ ಜಿಲ್ಲೆಯವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿತ ಇವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಉಳ್ಳವರು. “ಗುಬ್ಬಚ್ಚಿ ಗೂಡಿನಲ್ಲಿ…” ಇವರ ಪ್ರಕಟಿತ ಮೊದಲ ಕವನ ಸಂಕಲನ. ಅವರ ಕಥಾ ಸಂಕಲನ “ಕಲ್ಲು ಹೂವಿನ ನೆರಳು” ಇತ್ತೀಚೆಗೆ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...