Homeಅಂತರಾಷ್ಟ್ರೀಯ‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ದಿಗ್ಗಜ ‘ಪೇಸ್‌ಬುಕ್ ಇನ್ಕ್‌’(Facebook Inc) ತನ್ನ ಹೆಸರನ್ನು ‘ಮೆಟಾ’ (Meta) ಎಂದು ಬದಲಾಯಿಸಲಿದೆ ಎಂದು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜ಼ಕರ್‌ಬರ್ಗ್‌ (Mark Zukerberg) ಪ್ರಕಟಿಸಿದ್ದರೆ. ‘ಮೆಟಾ’ ಸಾಮಾಜಿಕ ಜಾಲತಾಣಗಳನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ತಮ್ಮ ಅಪ್ಲಿಕೇಷನ್‌ಗಳು ಮತ್ತು ಬ್ರಾಂಡ್‌ಗಳ ಹೆಸರುಗಳು ಹಾಗೆಯೆ ಇರಲಿದ್ದು, ಅವುಗಳ ಮಾತೃ ಸಂಸ್ಥೆಯಾದ ‘ಫೇಸ್‌ಬುಕ್ ಇನ್ಕ್‌’ ಹೆಸರಷ್ಟೇ ಬದಲಾಗಲಿದೆ ಎಂದು ಮಾರ್ಕ್‌ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ. ಫೇಸ್‌ಬುಕ್ ಇನ್ಕ್‌ ಅಡಿಯಲ್ಲಿ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಪ್, ಮೆಸೆಂಜರ್‌, ಓಕ್ಲಾಸ್, ವರ್ಕ್‌ಪ್ಲೇಸ್‌, ಪೋರ್ಟಾಲ್, ಡಿಯಮ್ ಬ್ರಾಂಡ್ ಮತ್ತು ಅಪ್ಲಿಕೇಷನ್ ಇವೆ.

“ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದೆ. ಈ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೀಗಾಗಿಯೆ ನಮ್ಮ ಕಂಪನಿ ಜನರ ಸಂಪರ್ಕದ ಕೇಂದ್ರವಾಗಿದ್ದು, ನಾವೆಲ್ಲರೂ ಒಟ್ಟಾಗಿ ಬೃಹತ್‌ ಪ್ರಮಾಣದ ಆರ್ಥಿಕತೆಯನ್ನು ಸೃಷ್ಟಿಸಬಹುದು. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್‌ 100 ಕೋಟಿ ಜನರನ್ನು ತಲುಪಲಿದೆ” ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಏನಿದು ‘ಮೆಟಾವರ್ಸ್’?

‘ಮೆಟಾವಸ್‌’ ಎಂಬ ಪದವನ್ನು ಮೊದಲ ಬಾರಿಗೆ ಅಮೆರಿಕದ ಕಾದಂಬರಿಕಾರ ‘ನೀಲ್ ಸ್ಟೆಫನ್ಸನ್’ ಎನ್ನುವವರು ಮೊದಲ ಬಾರಿಗೆ ಬಳಸಿದ್ದರು. ನೈಜ ಪ್ರಪಂಚದಿಂದ ತಪ್ಪಿಸಿಕೊಳ್ಳುವ ವರ್ಚುವಲ್‌ ಪ್ರಪಂಚದ ಜನರನ್ನು ಉದ್ದೇಶಿಸಿ ಅವರು ಈ ಪದವನ್ನು ಬಳಸಿದ್ದರು. ಇದೇ ಹೆಸರನ್ನು ತನ್ನ ಕಂಪೆನಿಗೆ ಮರುನಾಮಕರಣ ಮಾಡುವುದಾಗಿ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ಫೇಸ್‌ಬುಕ್ ಇನ್ಕ್‌ ತನ್ನ ‘ಮೆಟಾವರ್ಸ್‌’ ನಿರ್ಮಿಸುವ ಯೋಜನೆಯನ್ನು ಕಳೆದ ತಿಂಗಳು ಬಹಿರಂಗ ಪಡಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೆಟಾವರ್ಸ್‌ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ, ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಡಲಿದೆ ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ವಿಶ್ವದ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ವಿರುದ್ಧ ಶಾಸಕಾಂಗದ ಕ್ರಮ ಮತ್ತು ನಿಯಂತ್ರಣವನ್ನು ಎದುರಿಸುತ್ತಿರುವಾಗ ತಮ್ಮ ಕಂಪನಿಗೆ ಹೊಸ ನಾಮಕರಣದ ನಿರ್ಧಾರವನ್ನು ಜ಼ಕರ್‌ಬರ್ಗ್‌‌‌ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...