Homeಮುಖಪುಟದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

ದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

- Advertisement -
- Advertisement -

ಸಾಕಷ್ಟು ದಾಸ್ತಾನುಗಳಿದ್ದರೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ (fortified) ಅಕ್ಕಿಯ ಬಳಕೆಯನ್ನು ಕಡಿಮೆ ಮಾಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದ್ದು, ಸಾರವರ್ಧಿತ ಅಕ್ಕಿಯ ಬಳಕೆಯನ್ನು ತ್ವರಿತವಾಗಿ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಒಕ್ಕೂಟ ಸರ್ಕಾರದ ಶಿಕ್ಷಣ ಸಚಿವಾಲಯವು ಅಕ್ಟೋಬರ್ 20 ರಂದು ಈ ವಿಷಯದ ಕುರಿತು ರಾಜ್ಯಗಳಿಗೆ ಪತ್ರ ಬರೆದಿದೆ. ಪತ್ರದಲ್ಲಿ, “ಪ್ರಧಾನ ಮಂತ್ರಿಗಳು ನಿಗದಿಪಡಿಸಿದ ಗುರಿಯನ್ನು ಗಮನದಲ್ಲಿಟ್ಟುಕೊಂಡು, ಸಾರವರ್ಧಿತ ಅಕ್ಕಿ ದಾಸ್ತಾನು ಬಳಕೆಯನ್ನು ತ್ವರಿತಗೊಳಿಸಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಂಟಿ ಕಾರ್ಯದರ್ಶಿ ಆರ್‌ಸಿ ಮೀನಾ ಅವರು ರಾಜ್ಯ ಶಿಕ್ಷಣ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

ಮಧ್ಯಾಹ್ನದ ಊಟದ ಯೋಜನೆಯನ್ನು ಸೆಪ್ಟೆಂಬರ್‌ನಲ್ಲಿ ಪಿಎಂ ಪೋಷಣ್ ಎಂದು ಮರುನಾಮಕರಣ ಮಾಡಲಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 2024 ರ ವೇಳೆಗೆ ಪಡಿತರ ಯೋಜನೆ ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅಡಿಯಲ್ಲಿ ಸಾರೀಕೃತ ಅಕ್ಕಿಯನ್ನು ಮಾತ್ರವೇ ವಿತರಿಸಲಾಗುವುದು ಎಂದು ಘೋಷಿಸಿದ್ದರು.

“ಬಡ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಅಗತ್ಯ ಪೋಷಕಾಂಶಗಳ ಕೊರತೆಯು ಕಂಡುಬರುತ್ತಿದೆ. ಇದು ಅವರ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಪ್ರಮುಖ ಅಡೆತಡೆಗಳನ್ನು ಒಡ್ಡುತ್ತದೆ…” ಎಂದು ಪ್ರಧಾನಿ ಹೇಳಿದ್ದರು.

ಸರ್ಕಾರದ ದಾಖಲೆಗಳ ಪ್ರಕಾರ, ಪಿಎಂ ಪೋಷಣ್ ಮತ್ತು ಐಸಿಡಿಎಸ್ ಯೋಜನೆಗಳ ಅಡಿಯಲ್ಲಿ ಕ್ರಮವಾಗಿ 1.05 ಮತ್ತು 6.36 ಎಲ್ಎಂಟಿ (ಲಕ್ಷ ಮೆಟ್ರಿಕ್ ಟನ್) ಸಾರವರ್ಧಿತ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ. ಆದರೆ ಇದುವರೆಗೆ ಕ್ರಮವಾಗಿ 0.57 ಎಲ್‌ಎಂಟಿ ಮತ್ತು 2.09 ಎಲ್‌ಎಂಟಿ ಮಾತ್ರ ರಾಜ್ಯಗಳಿಂದ ಬಳಲ್ಪಟ್ಟಿವೆ. PM ಪೋಷಣ್ ಅಡಿಯಲ್ಲಿ ಅಕ್ಟೋಬರ್-ಮಾರ್ಚ್ ಅವಧಿಯಲ್ಲಿ ಒಟ್ಟು 13.9 LMT ಅಕ್ಕಿಯ ಹಂಚಿಕೆಯಾಗಿದೆ.

‘‘ಸಾಕಷ್ಟು ಪ್ರಮಾಣದಲ್ಲಿ ಸಾರವರ್ಧಿತ ಅಕ್ಕಿ ಲಭ್ಯವಿದ್ದರೂ” ಶಿಕ್ಷಣ ಸಚಿವಾಲಯದ ನಿರ್ದೇಶನಗಳ ಕೊರತೆಯಿಂದಾಗಿ ರಾಜ್ಯಗಳು ತಮ್ಮ ಪಾಲನ್ನು ಬಳಸುತ್ತಿಲ್ಲ ಎಂದು FCI ಒಕ್ಕೂಟ ಸರ್ಕಾರಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...