ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಕಸರತ್ತು ಮಾಡುವ ವೇಳೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.
ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀರಿಕ್ಷಿಸಲಾಗುತ್ತಿದ್ದು, ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ನಟನ ಅನಾರೋಗ್ಯದ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ನಟ ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್, ನಟರವಿಚಂದ್ರನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಲಘು ಹೃದಯಾಘಾತ ಕಾಣಿಸಿಕೊಂಡಿದೆ ಎಂದು ಮೂಲಗಳು ಹೇಳುತ್ತಿದ್ದು, ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ.
ಮೊನ್ನೆ ತಾನೇ ಭಜರಂಗಿ – 2 ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ಪುನೀತ್ ರಾಜ್ ಕುಮಾರ್ ಶಿವರಾಜ್ ಕುಮಾರ್ ಮತ್ತು ಯಶ್ ಜೊತೆಗೂಡಿ ಡ್ಯಾನ್ಸ್ ಮಾಡಿ ಅಭಿಮಾನಿಗಳಲ್ಲಿ ಹುರುಪು ಮೂಡಿಸಿದ್ದರು.
ಇದನ್ನೂ ಓದಿ:ಕೊರೊನಾ ವಿರುದ್ಧದ ಹೋರಾಟಕ್ಕೆ 50ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ಕುಮಾರ್