Homeಮುಖಪುಟಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ಕೊನೆಯುಸಿದಿರುವುದರಿಂದ ಕನ್ನಡ ನಾಡು ದುಃಖದ ಮಡಿಲಲ್ಲಿ ಮುಳುಗಿದೆ. ಲಕ್ಷಾಂತರ ಅಭಿಮಾನಿಗಳು ಕಣ್ಣೀರು ಹರಿಸಿದ್ದಾರೆ. ನಾಡಿನ ಗಣ್ಯರು ಕಂಬಿನಿ ಮಿಡಿದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮೊದಲು ಗಣ್ಯರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಲೆಯಾಳಂ ಚಿತ್ರನಟ ಪೃಥ್ವಿರಾಜ್ ಸುಕುಮಾರನ್ ಟ್ವೀಟ್ ಮಾಡಿ, “ತುಂಬಾ ನೋವುಂಟುಮಾಡುವ ಸುದ್ದಿ. ಚಿರಶಾಂತಿಯಲ್ಲಿರು ಸೂಪರ್ ಸ್ಟಾರ್. ಕುಟುಂಬ, ಸ್ನೇಹಿತರು ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪದಗಳಲ್ಲಿ ವ್ಯಕ್ತಪಡಿಸಲಾಗದಷ್ಟು ನೋವುಂಟು ಮಾಡುತ್ತಿದೆ ಪುನೀತ್” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತ್ತು ನೋವು ವ್ಯಕ್ತಪಡಿಸಿದ್ದಾರೆ.

ತಮಿಳು ಚಿತ್ರನಟ ಜೀವ ಟ್ವೀಟ್ ಮಾಡಿ, “ಆಘಾತಕಾರಿ! ನಂಬಲು ಸಾಧ್ಯವಿಲ್ಲ! ಜೀವನವು ಅನಿರೀಕ್ಷಿತವಾಗಿದೆ, RIP” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸ್ನೇಹ ಜೀವ, ವಿನಮ್ರ ಮನಸ್ಸಿನ ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ಹೊಡೆತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ” ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನುಡಿನಮನ ಸಲ್ಲಿಸಿದ್ದಾರೆ.

ಕರುಣಾಮಯಿ ಮತ್ತು ಪ್ರೀತಿಯ ನಟರಾದ ಸಜ್ಜನರಲ್ಲಿ ಒಬ್ಬರಾದ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಈ ಭರಿಸಲಾಗದ ನಷ್ಟವನ್ನು ಭರಿಸುವ ಶಕ್ತಿಯನ್ನು ಪುನೀತ್ ಅವರ ಕುಟುಂಬಕ್ಕೆ, ಸ್ನೇಹಿತರಿಗೆ ಮತ್ತು ಅವರ ಅಭಿಮಾನಿಗಳ ಸಾಗರಕ್ಕೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಹುಭಾಷ ನಟ ದುಲ್ಖರ್ ಸಲ್ಮಾನ್ ಪ್ರಾರ್ಥಿಸಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಚಿತ್ರನಟರಾದ ಚಿರಂಜೀವಿ, ಪ್ರಕಾಶ್ ರಾಜ್ ಆರ್ಯ ನಿರ್ದೇಶಕರಾದ ವಿ‍ಘ್ನೇಶ್ ಶಿವನ್, ನಟಿಯರಾದ ಶ್ರದ್ಧಾ ಶ್ರೀನಾಥ್, ತಮನ್ನಾ ಭಾಟಿಯ ಸೇರಿದಂತೆ ನೂರಾರು ಜನರು ನುಡಿನಮನ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...