Homeಮುಖಪುಟಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ಕೊನೆಯುಸಿದಿರುವುದರಿಂದ ಕನ್ನಡ ನಾಡು ದುಃಖದ ಮಡಿಲಲ್ಲಿ ಮುಳುಗಿದೆ. ಲಕ್ಷಾಂತರ ಅಭಿಮಾನಿಗಳು ಕಣ್ಣೀರು ಹರಿಸಿದ್ದಾರೆ. ನಾಡಿನ ಗಣ್ಯರು ಕಂಬಿನಿ ಮಿಡಿದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮೊದಲು ಗಣ್ಯರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಲೆಯಾಳಂ ಚಿತ್ರನಟ ಪೃಥ್ವಿರಾಜ್ ಸುಕುಮಾರನ್ ಟ್ವೀಟ್ ಮಾಡಿ, “ತುಂಬಾ ನೋವುಂಟುಮಾಡುವ ಸುದ್ದಿ. ಚಿರಶಾಂತಿಯಲ್ಲಿರು ಸೂಪರ್ ಸ್ಟಾರ್. ಕುಟುಂಬ, ಸ್ನೇಹಿತರು ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪದಗಳಲ್ಲಿ ವ್ಯಕ್ತಪಡಿಸಲಾಗದಷ್ಟು ನೋವುಂಟು ಮಾಡುತ್ತಿದೆ ಪುನೀತ್” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತ್ತು ನೋವು ವ್ಯಕ್ತಪಡಿಸಿದ್ದಾರೆ.

ತಮಿಳು ಚಿತ್ರನಟ ಜೀವ ಟ್ವೀಟ್ ಮಾಡಿ, “ಆಘಾತಕಾರಿ! ನಂಬಲು ಸಾಧ್ಯವಿಲ್ಲ! ಜೀವನವು ಅನಿರೀಕ್ಷಿತವಾಗಿದೆ, RIP” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸ್ನೇಹ ಜೀವ, ವಿನಮ್ರ ಮನಸ್ಸಿನ ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ಹೊಡೆತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ” ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನುಡಿನಮನ ಸಲ್ಲಿಸಿದ್ದಾರೆ.

ಕರುಣಾಮಯಿ ಮತ್ತು ಪ್ರೀತಿಯ ನಟರಾದ ಸಜ್ಜನರಲ್ಲಿ ಒಬ್ಬರಾದ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಈ ಭರಿಸಲಾಗದ ನಷ್ಟವನ್ನು ಭರಿಸುವ ಶಕ್ತಿಯನ್ನು ಪುನೀತ್ ಅವರ ಕುಟುಂಬಕ್ಕೆ, ಸ್ನೇಹಿತರಿಗೆ ಮತ್ತು ಅವರ ಅಭಿಮಾನಿಗಳ ಸಾಗರಕ್ಕೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಹುಭಾಷ ನಟ ದುಲ್ಖರ್ ಸಲ್ಮಾನ್ ಪ್ರಾರ್ಥಿಸಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಚಿತ್ರನಟರಾದ ಚಿರಂಜೀವಿ, ಪ್ರಕಾಶ್ ರಾಜ್ ಆರ್ಯ ನಿರ್ದೇಶಕರಾದ ವಿ‍ಘ್ನೇಶ್ ಶಿವನ್, ನಟಿಯರಾದ ಶ್ರದ್ಧಾ ಶ್ರೀನಾಥ್, ತಮನ್ನಾ ಭಾಟಿಯ ಸೇರಿದಂತೆ ನೂರಾರು ಜನರು ನುಡಿನಮನ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...