Homeಮುಖಪುಟಯುಪಿ: 2 ನೇ ತರಗತಿ ಬಾಲಕನನ್ನು ಶಾಲಾ ಕಟ್ಟಡದ ಮೇಲಿಂದ ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ

ಯುಪಿ: 2 ನೇ ತರಗತಿ ಬಾಲಕನನ್ನು ಶಾಲಾ ಕಟ್ಟಡದ ಮೇಲಿಂದ ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ

- Advertisement -
- Advertisement -

ಮುಖ್ಯೋಪಾಧ್ಯಾಯನೊಬ್ಬ ಎರಡನೇ ತರಗತಿಯ ಬಾಲಕನ ಕಾಲನ್ನು ಹಿಡಿದು ಶಾಲಾ ಕಟ್ಟಡದ ಮೇಲಿನಿಂದ ನೇತಾಡಿಸಿದ ಚಿತ್ರವೊಂದು ಉತ್ತರಪ್ರದೇಶದ ಮಿರ್ಜಾಪುರದಿಂದ ಹೊರಹೊಮ್ಮಿದೆ. ಈ ಆಘಾತಕಾರಿ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಕೃತ್ಯ ಎಸಗಿದ ಶಿಕ್ಷಕ ಮನೋಜ್ ವಿಶ್ವಕರ್ಮನನ್ನು ಬಂಧಿಸಲಾಗಿದೆ.

ಗುರುವಾರ ಊಟದ ವಿರಾಮದ ಸಮಯದಲ್ಲಿ ಆಟವಾಡುತ್ತಿದ್ದಾಗ ಎರಡನೇ ತರಗತಿ ವಿದ್ಯಾರ್ಥಿ ಸೋನು ಯಾದವ್‌ ಮತ್ತೊಬ್ಬ ವಿದ್ಯಾರ್ಥಿಯನ್ನು ಕಚ್ಚಿದ್ದರು. ಇದಕ್ಕಾಗಿ ಮನೋಜ್ ವಿಶ್ವಕರ್ಮ, ಸೋನು ಯಾದವ್ ಅವರ ಕಾಲಿನಿಂದ ಹಿಡಿದು ತಲೆಕೆಳಗಾಗಿ ಕಟ್ಟಡದ ಮೇಲಿನಿಂದ ನೇತಾಡಿಸಿದ್ದಾನೆ.

ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ಅಲ್ಲದೆ ಕಚ್ಚಿದ್ದಕ್ಕಾಗಿ ಕ್ಷಮೆ ಕೇಳದಿದ್ದರೆ ಕಟ್ಟಡದ ಮೇಲಿನಿಂದ ಬೀಳಿಸುವುದಾಗಿ ಮುಖ್ಯೋಪಾಧ್ಯಾಯ ಬೆದರಿಸಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವೇಳೆ ಮಕ್ಕಳ ಗುಂಪು ಜಮಾಯಿಸಿದ್ದು, ಅಲ್ಲದೆ ಸೋನು ಜೋರಾಗಿ ಅತ್ತು ಕಿರುಚಾಡಿದ್ದರಿಂದ ಮುಖ್ಯೋಪಾಧ್ಯಾಯ ಕೆಳಗಡೆ ಇಳಿಸಿದ್ದಾನೆ.

ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

“ಮುಖ್ಯೋಪಾಧ್ಯಾಯ ಹಾಗೆ ಮಾಡಬಾರದಿತ್ತು. ಆದರೆ ಅವರು ‘ಪ್ರೀತಿ’ಯಿಂದ ಅದನ್ನು ಮಾಡಿದ್ದಾರೆ ಆದ್ದರಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಬಾಲಕನ ತಂದೆ ರಂಜಿತ್ ಯಾದವ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಮುಖ್ಯೋಪಾಧ್ಯಾಯ ಮನೋಜ್ ವಿಶ್ವಕರ್ಮ‌ನನ್ನು ಬಾಲನ್ಯಾಯ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ.

“ಸೋನು ತುಂಬಾ ಕಿಡಿಗೇಡಿ…ಮಕ್ಕಳಿಗೆ ಮತ್ತು ಶಿಕ್ಷಕರಿಗೂ ಆತ ಕಚ್ಚುತ್ತಿದ್ದ. ಸೋನುವಿನ ತಂದೆ ನಮ್ಮೊಂದಿಗೆ ಆತನನ್ನು ತಿದ್ದುವಂತೆ ಕೇಳಿಕೊಂಡಿದ್ದರು. ಆದ್ದರಿಂದ ನಾವು ಅವನನ್ನು ಹೆದರಿಸಲು ಪ್ರಯತ್ನಿಸಿದ್ದೇವೆ. ಭಯಪಡಿಸುವುದಕ್ಕಾಗಿ ಮೇಲಿನ ಮಹಡಿಯಿಂದ ತಲೆಕೆಳಗಾಗಿ ನೇತಾಡಿಸಲಾಯಿತು” ಎಂದು  ಹಾಕಲಾಯಿತು,” ಎಂದು ಬಂಧನಕ್ಕೆ ಒಳಗಾರಿರುವ ಮನೋಜ್ ವಿಶ್ವಕರ್ಮ ಹೇಳಿದ್ದಾನೆ.

ಇದನ್ನೂ ಓದಿ: ದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...