Homeಚಳವಳಿಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ಮಗಳನ್ನೇ ಕೊಂದ ತಂದೆ: ಚಿಕ್ಕಮಗಳೂರಿನಲ್ಲಿ ಕ್ರೂರ ಮರ್ಯಾದಾಗೇಡು ಹತ್ಯೆ

ನಾಗರೀಕ ಸಮಾಜ ಇಂತಹ ಅಮಾನವೀಯವಾದ ಕೃತ್ಯಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

- Advertisement -
- Advertisement -

ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಕೊರೊನಾದಂತಹ ಮಾರಣಾಂತಿಕ ಕಾಯಿಲೆಗಳು ಅಪ್ಪಳಿಸಿದರೂ ಸಹ ಜಾತಿ ಜಾತಿಗ್ರಸ್ಥರಾಗಿಯೇ ಉಳಿದಿರುವುದು ದುರಂತ. ಕ್ರೂರ ಜಾತೀಯತೆಯಲ್ಲಿ ನರಳುತ್ತಿರುವ ಜನರು ಮರ್ಯಾದೆ ಹೆಸರಿನಲ್ಲಿ ರಕ್ತಸಂಬಂಧಿಗಳನ್ನು ಹತ್ಯೆಗೈದು ಜೀವನಪೂರ್ತಿ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಅಂಥದ್ದೆ ದುರಂತವೊಂದು ಕರ್ನಾಟಕದಲ್ಲಿ ಮತ್ತೆ ಸಂಭವಿಸಿದೆ. ಅನ್ಯಜಾತಿಯ ಯುವಕನನ್ನು ಪ್ರೇಮಿಸಿದ್ದ ಕಾರಣಕ್ಕೆ ಮಗಳನ್ನೇ ತಂದೆಯೇ ಮರ್ಯಾದಾಗೇಡು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬುಧವಾರ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಆರೋಪಿ ಚಂದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕೆಂಚಿಗೊಂಡನಕೊಪ್ಪದವರಾಗಿದ್ದು ಆತನ ಮಗಳು ರಾಧಾ (18) ಹತ್ಯೆಯಾದ ದುರ್ದೈವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕೆಂಚಿಗೊಂಡನಕೊಪ್ಪದ ಹೆಳವ ಸಮುದಾಯದ ರಾಧಾ ಮತ್ತು ಅದೇ ಊರಿನ ಗಂಗಾಮತಸ್ಥ ಸಮುದಾಯದ ಯುವಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಯುವತಿಯ ಮನೆಯವರ ವಿರೋಧವಿತ್ತು. ಈ ವಿರೋಧದ ನಡುವೆಯೂ ಇಬ್ಬರು ಪ್ರೀತಿಸುತ್ತಿದ್ದರು. ಸ್ಥಳ ಬದಲಾವಣೆ ಮಾಡಿದರೆ ಮಗಳು ಯುವಕನನ್ನು ಮರೆಯಬಹುದು ಎಂದು ಚಂದ್ರಪ್ಪ ಅವರು ಮಗಳನ್ನು ಚನ್ನಗಿರಿ ತಾಲ್ಲೂಕಿನ ಮಲ್ಲಿಗೆರೆಯ ತನ್ನ ಸಹೋದರಿ ಶಾಂತಮ್ಮ ಅವರ ಮನೆಯಲ್ಲಿ ಇರಿಸಿದ್ದರು.

ಹಬ್ಬಕ್ಕೆ ಮಗಳನ್ನು ಮನೆಗೆ ಕರೆತರಲು ಚಂದ್ರಪ್ಪ ಬುಧವಾರ ಮಲ್ಲಿಗೆರೆಗೆ ಹೋಗಿದ್ದರು. ಮಗಳನ್ನು ಕರೆದುಕೊಂಡು ಬೈಕಿನಲ್ಲಿ ಚನ್ನಗಿರಿ-ಬೀರೂರು ಮಾರ್ಗದಲ್ಲಿ ಬರುವಾಗ, ಯುವಕನನ್ನು ಮರೆಯುವಂತೆ ಮಗಳಿಗೆ ಬುದ್ದಿವಾದ ಹೇಳಿದ್ದಾರೆ. ಪ್ರೇಮಿಸಿರುವ ಯುವಕನನ್ನೇ ವಿವಾಹವಾಗುವುದಾಗಿ ರಾಧಾ ವಾದ ಮಾಡಿದ್ದಾರೆ. ಕೋಪಗೊಂಡ ಚಂದ್ರಪ್ಪ ಬೀರೂರು ಹೊರವಲಯದ ರೈಲ್ವೆ ಗೇಟ್‌ ಬಳಿ ಜನಸಂಚಾರವಿಲ್ಲದ್ದನ್ನು ಗಮನಿಸಿ ಬೈಕ್‌ ನಿಲ್ಲಿಸಿ ಗೇಟ್‌ ಪಕ್ಕದ ಬಂಡಿ ಜಾಡಿನಲ್ಲಿ ಮಗಳ ತಲೆ ಮೇಲಿದ್ದ ಬಟ್ಟೆಯನ್ನೇ ಕುತ್ತಿಗೆಗೆ ಬಿಗಿದು, ಅಲ್ಲಿಯೇ ಇದ್ದ ಗುಂಡಿಯಲ್ಲಿ ಅದುಮಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ನಡೆದ ಘಟನೆಯನ್ನು ಫೋನ್‌ನಲ್ಲಿ ಕುಟುಂಬದವರಿಗೆ ತಿಳಿಸಿರುವ ಚಂದ್ರಪ್ಪ, ಘಟನೆ ನಂತರ ರಾತ್ರಿ 2.30ರ ಸುಮಾರಿಗೆ ಊರು ತಲುಪಿದ್ದಾರೆ. ಮಗಳನ್ನು ಕೊಲೆ ಮಾಡಿದ ತಾನೂ ಬದುಕಬಾರದು ಎಂದು ಅತ್ತಿದ್ದಾರೆ. ಇದನ್ನು ಕಂಡು ಮಗ ಪಕ್ಕದ ಮನೆಯ ಸಂಬಂಧಿಕರನ್ನು ಕರೆತಂದಿದ್ದಾರೆ. ಅವರ ಮುಂದೆ ಚಂದ್ರಪ್ಪ ಅವರು ನಡೆದ ಘಟನೆಯನ್ನು ವಿವರಿಸಿದ್ದಾರೆ. ತಕ್ಷಣವೇ ಮನೆಯವರು ಸಂಬಂಧಿಕರೊಂದಿಗೆ ಚಂದ್ರಪ್ಪನನ್ನು ಶಿಕಾರಿಪುರ ಠಾಣೆಗೆ ಕರೆದೊಯ್ದಿದ್ದಾರೆ. ಶರಣಾದ ನಂತರ ಅಲ್ಲಿನ ಪೊಲೀಸರು ಚಂದ್ರಪ್ಪನನ್ನು ಬೀರೂರು ಠಾಣೆಗೆ ಕಳಿಸಿದ್ದಾರೆ.

ಬೀರೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಯುವತಿಯ ಶವ ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗದ ಪತ್ರಕರ್ತ, ಕವಿ ರವಿಕುಮಾರ್‌ ಟೆಲೆಕ್ಸ್‌, “ವಿದ್ಯಾವಂತರಾಗಿರುವ ನಾವು ಜಾತಿ ಸಮಾನತೆ ಬಗ್ಗೆ ಜಾಗೃತಿ ಮುಡಿಸಬೇಕಿದ್ದ ಕಾಲದಲ್ಲಿಯೂ ಜೀವ ಹತ್ಯೆ ಮಾಡುವಂತಹದ್ದು ನಮ್ಮ ಹಿಮ್ಮುಖ ನಡೆಯನ್ನು ತೋರಿಸುತ್ತದೆ. ಜೀವಕ್ಕಿಂತ ಜಾತಿ ಶ್ರೇಷ್ಠ, ಜಾತಿ ಆಧಾರಿತ ಮದುವೆ  ಶ್ರೇಷ್ಠ ಎಂಬ ಭ್ರಮೆಯಲ್ಲಿ ಈ ಸಮಾಜ ಬದುಕುತ್ತಿದೆ. ಅದರಿಂದ ಹೊರಗೆ ಬರಬೇಕು. ಜೀವವೂ ಅಮೂಲ್ಯ ಪ್ರೀತಿಯೂ ಅಮೂಲ್ಯ. ಯಾರನ್ನೂ ಕೊಲ್ಲುವಂತಹ ಹಕ್ಕು ನಮಗ್ಯಾರು ಕೊಟ್ಟಿಲ್ಲ. ಎಲ್ಲರಿಗೂ ಬದುಕಿನ ಹಕ್ಕಿದೆ. ಎಲ್ಲರಿಗೂ ಅವರದ್ದೇ ಆದಂತಹ ಹಕ್ಕುಗಳಿವೆ. ಸಮಾಜ ಅದನ್ನು ಗೌರವಿಸಬೇಕು. ಜೀವ ತೆಗೆಯುವುದೇ ಒಂದು ಮಾರ್ಗವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮರ್ಯಾದಾಗೇಡು ಹತ್ಯೆಗಳನ್ನು ಖಂಡಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ಕಾರ್ಯದರ್ಶಿ ಮಲ್ಲಿಗೆಯವರು, ’ಮರ್ಯಾದಾಗೇಡು ಹತ್ಯೆಗಳು ಪದೇ ಪದೇ ಮರುಕಳಿಸುತ್ತಿರುವುದು ಆಘಾತಕಾರಿ ವಿಷಯ. ಇಂತಹ ಘಟನೆಗಳು ಸರಣಿ ರೂಪದಲ್ಲಿ ನಡೆಯುತ್ತಿರುವಾಗಲೂ ಇದರ ಬಗ್ಗೆ ಯೋಚಿಸಬೇಕು ಎಂದು ಆಡಳಿತಕ್ಕೆ ಏಕೆ ಅನಿಸುತ್ತಿಲ್ಲ ಎಂಬುದು ಬಹಳ ದೊಡ್ಡ ಆಶ್ಚರ್ಯ! ಬಹುಶಃ ಜನರ ಜೀವನ ಮತ್ತು ಇಂತಹ ಮೋಸಗಳಿಂದ ಜನರನ್ನು ಹೊರತರುವುದು ಈಗಿನ ಸರ್ಕಾರಕ್ಕೆ ಆದ್ಯತೆ ಅಲ್ಲದೇ ಇರಬಹುದು. ಮುಖ್ಯಮಂತ್ರಿಗಳ ಇತ್ತೀಚಿನ ಹೇಳಿಕೆಗಳನ್ನು ನೋಡಿದರೆ ಅವರು ಸಂವಿಧಾನಕ್ಕೆ ಬದ್ಧವಾಗಿ ಕೆಲಸ ಮಾಡುವುದಕ್ಕಿಂತ ಆರ್‌ಎಸ್‌ಎಸ್‌ ಅನ್ನು ಸಮರ್ಥಿಸುವಲ್ಲಿ ಹೆಚ್ಚಿನ ಸಮಯ ವ್ಯಯಿಸುತ್ತಿರುವಂತೆ ಕಾಣುತ್ತಿದೆ. ಇದು ಅಕ್ಷಮ್ಯ. ಆಡಳಿತ ನಡೆಸುವವರು ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕು. ಜಾತಿ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಕೊಲೆಗಳು ಸಂವಿಧಾನಕ್ಕೆ ವಿರುದ್ಧ ಎಂದು ಗೊತ್ತಿದ್ದ ಮೇಲೂ ಇದರ ಬಗ್ಗೆ ಗಂಭೀರವಾದ ಕ್ರಮಗಳನ್ನು ಕೈಗೊಳ್ಳದೇ ಇರುವುದು ಇಂತಹ ಕ್ರೌರ್ಯ ಹೆಚ್ಚಾಗಲು ಕಾರಣವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಗಳು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದಿರುವ ಅವರು ‘ಸರ್ಕಾರಗಳು ಈ ತಕ್ಷಣದಲ್ಲಿ ಮರ್ಯಾದಾಗೇಡು ಹತ್ಯೆಗಳ ವಿಚಾರವಾಗಿ ಪ್ರತ್ಯೇಕವಾದ ತನಿಖೆಯನ್ನು ನಡೆಸಬೇಕು. ಇಂತಹ ಘಟನೆಗಳ ತನಿಖೆ ನಡೆಸಲು ಒಂದು ವಿಶೇಷ ಸಮಿತಿಯನ್ನು ರಚಿಸಿಬೇಕು. ಈವರೆಗೆ ಇಂತಹ ಘಟನೆ ನಡೆದಿರುವಂತಹ ಎಲ್ಲಾ ಗ್ರಾಮಗಳ ನೊಂದಂತಹ ಕುಟುಂಬದವರೊಂದಿಗೆ ಚರ್ಚಿಸಿ ಅವರ ಹೇಳಿಕೆಗಳನ್ನು ಆಧರಿಸಿ ಸರಿಯಾದ ಮತ್ತು ದೂರಗಾಮಿಯಾದಂತಹ ಪರಿಹಾರೋಪಾಯವನ್ನು ರೂಪಿಸಬೇಕಾಗಿದಡೆ. ನಾಗರೀಕ ಸಮಾಜ ಇಂತಹ ಅಮಾನವೀಯವಾದ ಕೃತ್ಯಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಎಲ್ಲಾ ಸಮುದಾಯಗಳ ಮಠಾಧೀಶರು ಮತ್ತು ಧಾರ್ಮಿಕ ಮುಖಂಡರುಗಳು ಅವರು ಕೇವಲ ಧಾರ್ಮಿಕ ವಿಷಯಗಳಿಗಷ್ಟೆ ತಮ್ಮನ್ನು ತೊಡಗಿಸಿಕೊಳ್ಳುವುದಲ್ಲದೇ ಇಂತಹ ಕೃತ್ಯಗಳ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣದ ಕುರಿತು ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚೀಂದ್ರ ಅವರು, ’ಈ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...