Homeಮುಖಪುಟಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

- Advertisement -
- Advertisement -

ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು, ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿಯಾಗಿದ್ದು ಇಂದು ಸಂಜೆ ಎನ್‌ಡಿಪಿಸ್ ಕೋರ್ಟಿಗೆ ಹಾಜರಾಗಿ 1 ಲಕ್ಷ ರೂ ಬಾಂಡ್‌ಗೆ ಸಹಿ ಹಾಕಲಿದ್ದಾರೆ.

ಶಾರೂಕ್ ಖಾನ್‌ರವರ ಹಲವು ವರ್ಷದ ಸ್ನೇಹಿತೆಯಾದ ಜೂಹಿ ಚಾವ್ಲ ಆರ್ಯನ್ ಖಾನ್‌ರನ್ನು ಹುಟ್ಟಿದಾಗಿನಿಂದಲೇ ಬಲ್ಲವರು. ಶಾರೂಕ್ ಮತ್ತು ಚಾವ್ಲ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ಆದೇಶದ ಆಪರೇಟಿವ್ ಭಾಗ ನಮಗೆ ಸಿಕ್ಕಿದೆ. ನಾವು ಶ್ಯೂರಿಟಿಗಳಂತಹ ಇತರ ವಿಧಿವಿಧಾನಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದೆ. ನಾವು ಇಂದು ಬಿಡುಗಡೆಗೆ ಪ್ರಯತ್ನಿಸುತ್ತಿದ್ದೇವೆ,” ಜಾಮೀನು ಷರತ್ತುಗಳು ಲಭ್ಯವಾದ ಕೂಡಲೆ ನಟಿ ಜೂಹಿ ಚಾವ್ಲಾ ಅವರು ಆರ್ಯನ್ ಖಾನ್‌ಗೆ ಶ್ಯೂರಿಟಿಯಾಗಲು ನ್ಯಾಯಾಲಯಕ್ಕೆ ಬಂದರು ಎಂದು ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನೆಶಿಂಧೆ ತಿಳಿಸಿದ್ದಾರೆ.

“ಜೂಹಿ ಚಾವ್ಲಾ ಜಾಮೀನು ಆಗಿದ್ದಾರೆ. ಪಾಸ್‌ಪೋರ್ಟ್‌ನಲ್ಲಿ ಅವರ ಹೆಸರಿದೆ. ಆಧಾರ್ ಕಾರ್ಡ್ ಇದೆ” ಎಂದು ಆರ್ಯನ್ ಖಾನ್ ಅವರ ಶ್ಯೂರಿಟಿಯನ್ನು ಮಾನೆಶಿಂಧೆ ಹಾಜರುಪಡಿಸಿದರು. ಜೂಹಿ ಚಾವ್ಲಾ ಸಾಕ್ಷಿ ಪೆಟ್ಟಿಗೆಯನ್ನು ಪ್ರವೇಶಿಸಿದರು. ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಅವರ ಪರವಾಗಿ ಹಾಜರಾಗದಿದ್ದರೂ ಅವರನ್ನು ಬಿಡುಗಡೆ ಮಾಡುವಂತೆ ಮನೇಶಿಂಡೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರ್ಯನ್ ಖಾನ್ ಮತ್ತು ಆತನ ಸಹ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದರೂ ಆದೇಶ ಜೈಲು ತಲುಪಲು ಸಮಯ ತೆಗೆದುಕೊಳ್ಳುತ್ತಿದೆ. ಇಂದು ಸಂಜೆ 5.30ರೊಳಗೆ ಜೈಲು ಅಧಿಕಾರಿಗಳಿಗೆ ತಲುಪಿದರೆ ಆರ್ಯನ್ ಖಾನ್ ಇಂದೇ ಬಿಡುಗಡೆಯಾಗುತ್ತದೆ. ಇಲ್ಲದಿದ್ದಲ್ಲಿ  ಇಂದು ರಾತ್ರಿ ಸಹ ಜೈಲಿನಲ್ಲೆ ಉಳಿಯಬೇಕಾಗುತ್ತದೆ.

ನಿನ್ನೆ ಜಾಮೀನು ನೀಡಿರುವ ಮುಂಬೈ ಹೈಕೋರ್ಟ್ 14 ಷರತ್ತುಗಳನ್ನು ವಿಧಿಸಿದೆ. ಆದೇಶದ ಪ್ರಕಾರ ಅವರು ₹ 1 ಲಕ್ಷದ ವೈಯಕ್ತಿಕ ಬಾಂಡ್ ಅನ್ನು ಸಲ್ಲಿಸಬೇಕು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು.

ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು, ಇದೇ ರೀತಿಯ ಚಟುವಟಿಕೆಗಳಲ್ಲಿ ತೊಡಗಬಾರದು, ಅವನ ಸ್ನೇಹಿತ ಅರ್ಬಾಜ್ ಮರ್ಚೆಂಟ್‌ನಂತಹ ಇತರ ಆರೋಪಿಗಳೊಂದಿಗೆ ಸಂವಹನ ಮಾಡಬಾರದು ಮತ್ತು ಮಾಧ್ಯಮಗಳೊಂದಿಗೆ ಮಾತನಾಡಬಾರದು” ಎಂಬ ಷರತ್ತುಗಳು ಸೇರಿವೆ.

ಆರ್ಯನ್ ಖಾನ್ ಪ್ರತಿ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರ ನಡುವೆ ಎನ್‌ಸಿಬಿ ಕಚೇರಿಗೆ ಹೋಗಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಅಗತ್ಯವಿದ್ದಾಗ ತನಿಖೆಗೆ ಸಹಕರಿಸಬೇಕಿದೆ. ಇವುಗಳಲ್ಲಿ ಯಾವುದಾದರೂ ಷರತ್ತುಗಳನ್ನು ಉಲ್ಲಂಘಿಸಿದರೆ, ಎನ್‌ಸಿಬಿಯು ಜಾಮೀನು ರದ್ದುಗೊಳಿಸುವಂತೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...