Homeಮುಖಪುಟಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

- Advertisement -
- Advertisement -

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸ ನಿಯಮದಂತೆ ಕಾರ್ಡ್ ಪಡೆಯಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ಹೇಳಿದ್ದು, ಅದರ ನಂತರ ತಾಜಾ ಕಾರ್ಡ್‌ಗಳನ್ನು ನೀಡಲಾಗುತ್ತದೆ.

ದಂಪತಿಗಳು ಬೇರೆಯಾಗಲು ಬಯಸಿ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದಾಗ ಪಡಿತರ ಕಾರ್ಡ್‌ನಲ್ಲಿ ಹೆಂಡತಿಯ ಹೆಸರು ಹಾಗೆ ಉಳಿದುಕೊಳ್ಳತ್ತದೆ. ಈ ಸಮಯದಲ್ಲಿ ತನ್ನ ಹೆಂಡತಿಯ ಹೆಸರನ್ನು ತೆಗೆದುಹಾಕಲು ಪತಿ ಸಿದ್ಧನಿಲ್ಲದಿದ್ದರೆ, ಮಹಿಳೆಗೆ ಅರ್ಹವಾದ ಮೂಲಭೂತ ಪ್ರಯೋಜನಗಳು ದಕ್ಕುವುದಿಲ್ಲ. ಆದ್ದರಿಂದ, ಈ ಸಂದರ್ಭದಲ್ಲಿ ಮಹಿಳೆ ಹಿಂದಿನ ಕಾರ್ಡ್‌ನಲ್ಲಿರುವ ಹೆಸರನ್ನು ತೆಗೆದು ಹೊಸ ಕಾರ್ಡ್‌ಗಾಗಿ ಅರ್ಜಿ ಹಾಕಬಹುದು.

ಇದನ್ನೂ ಓದಿ: ‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’ – ಯುಪಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಛೀಮಾರಿ

ಕಂದಾಯ ನಿರೀಕ್ಷಕರ ಪರಿಶೀಲನೆಯ ನಂತರ, ನಾಗರಿಕ ಸರಬರಾಜು ವಲಯದ ಅಧಿಕಾರಿಯು ಈಗಿರುವ ಹೆಸರನ್ನು ತೆಗೆದುಹಾಕಿ, ಮಹಿಳೆಯನ್ನು ‘ಕುಟುಂಬ’ ಎಂದು ನಮೂದಿಸಿ ಹೊಸ ಕಾರ್ಡ್ ನೀಡುವ ಅಧಿಕಾರವನ್ನು ಹೊಂದಿರುತ್ತಾರೆ. ಈ ಸಡಿಲಿಕೆಯು ಅವಿವಾಹಿತ ಒಂಟಿ ಮಹಿಳೆಯರು ಕೂಡ ಅರ್ಹರಾಗಿದ್ದು, ಜೊತೆಗೆ ಇದಕ್ಕೆ ವಿಚ್ಛೇದನ ಕೂಡಾ ಕಡ್ಡಾಯವಲ್ಲ ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಅಸ್ತಿತ್ವದಲ್ಲಿರುವ Vs ಪರಿಷ್ಕೃತ

ಈ ಹಿಂದೆ, ಬೇರ್ಪಟ್ಟ ಮಹಿಳೆ, ತನ್ನ ಮಕ್ಕಳೊಂದಿಗೆ ಅಥವಾ ಇತರ ಅವಲಂಬಿತರೊಂದಿಗೆ ವಾಸಿಸುತ್ತಿದ್ದರೆ, ಅವರು ಕಾನೂನುಬದ್ಧವಾಗಿ ವಿಚ್ಛೇದನ ಪಡೆಯದ ಹೊರತು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸದ ಹೊರತು ಪಡಿತರ ಚೀಟಿಗೆ ಅರ್ಹರಾಗಿರಲಿಲ್ಲ.

ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಅವಿವಾಹಿತ ಮಹಿಳೆಯರು ಪಡಿತರ ಚೀಟಿ ಪಡೆಯಲು ಅರ್ಹರಲ್ಲ, ಮತ್ತು ಅವರು ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದಾಗ ಮಾತ್ರ ಅವರನ್ನು ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಯುಪಿ: 2 ನೇ ತರಗತಿ ಬಾಲಕನನ್ನು ಶಾಲಾ ಕಟ್ಟಡದ ಮೇಲಿಂದ ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ

ಪ್ರತ್ಯೇಕವಾಗಿ ವಾಸಿಸುವ ಒಂಟಿ ಮಹಿಳೆಯರು ಯಾವುದೇ ತೊಂದರೆಯಿಲ್ಲದೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಪರಿಷ್ಕೃತ ನಿಯಮ ಹೇಳುತ್ತದೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ (AIDWA) ತಮಿಳುನಾಡು ಸರ್ಕಾರದ ಈ ತೀರ್ಮಾನವನ್ನು ಸ್ವಾಗತಿಸಿದ್ದು, ಈ ನಿರ್ಧಾರವನ್ನು ಪ್ರಗತಿಪರ ಎಂದು ಶ್ಲಾಘಿಸಿದೆ.

AIDWA ರಾಜ್ಯ ಕಾರ್ಯದರ್ಶಿ ಎಸ್‌ಕೆ ಪೊನ್ನುತ್ತಾಯಿ ಮಾತನಾಡಿ, ಪಡಿತರ ಚೀಟಿ ಇಲ್ಲದ ಕಾರಣ ಕೆಳ ಆರ್ಥಿಕ ವರ್ಗದ ಒಂಟಿ ಮಹಿಳೆಯರು ಪೊಂಗಲ್ ಮತ್ತು ಲಾಕ್‌ಡೌನ್ ಸಮಯದಲ್ಲಿ ನೀಡಲಾದ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆಹಾರ ಭದ್ರತೆಯ ಜೊತೆಗೆ, ಸರ್ಕಾರವು ನೀಡುವ ಎಲ್ಲಾ ಪ್ರಯೋಜನಗಳು ಅಗತ್ಯವಿರುವ ಜನರಿಗೆ ತಲುಪುವುದನ್ನು ಈ ನಿರ್ಧಾರವು ಖಚಿತಪಡಿಸುತ್ತದೆ  ಹೇಳಿದ್ದಾರೆ.

ಒಂಟಿ ಮಹಿಳೆಯರಿಗೆ ಪಡಿತರ ಚೀಟಿ ನೀಡುವಂತೆ ಒತ್ತಾಯಿಸಿ ಹಲವಾರು ಹೋರಾಟಗಳನ್ನು ಸಂಘಟನೆಯು ಮಾಡುತ್ತಾ ಬರುತ್ತಿದೆ.

ಇದನ್ನೂ ಓದಿ: ಅಜೀಂ ಪ್ರೇಮ್‌ಜಿ ದೇಶದ ಅತಿ ದೊಡ್ಡ ದಾನಿ: ದಿನಕ್ಕೆ 27 ಕೋಟಿ ರೂ. ದೇಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...