Homeಕರ್ನಾಟಕನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಒಡನಾಟವನ್ನು ‘ಜಟ್ಟ’, ‘ಮೈತ್ರಿ’, ‘ಅಮರಾವತಿ’ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌ ಹಂಚಿಕೊಂಡಿದ್ದಾರೆ.

- Advertisement -
- Advertisement -

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು” ಎಂದು ಪ್ರತಿಕ್ರಿಯಿಸಿದರು ಮೈತ್ರಿ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್‌.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಯಾವುದಾದರೂ ವಿಷಯವನ್ನು ತಿರಸ್ಕರಿಸಿದರೂ ನಮಗೆ ಯಾರಿಗೂ ನೋವಾಗದಂತೆ ತಿರಸ್ಕಾರದ ಉದ್ದೇಶವನ್ನು ಸ್ಪಷ್ಟಪಡಿಸುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದು ಗಿರಿರಾಜ್ ಸ್ಮರಿಸಿದರು.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸಿದರು.

“ಡಾ.ರಾಜ್‌ ಕುಮಾರ್‌ ಅವರು ನಿಧನರಾದಾಗ ಮನೆಯ ಹಿರಿಯ ಮಗ ನಮ್ಮನ್ನು ಅಗಲಿದ ಅನುಭವವಾಯಿತು. ನಮ್ಮ ಮನೆಯಲ್ಲಿ ಮಗು ಇಲ್ಲದಿದ್ದಾಗ ಸೃಷ್ಟಿಯಾಗುವ ನಿರ್ವಾತವನ್ನು ಅಪ್ಪು ನಿಧನ ತಂದಿದೆ. ಯಾರನ್ನೂ ಪುನೀತ್‌ ಅವರು ಕೀಳಾಗಿ ನೋಡುತ್ತಿರಲಿಲ್ಲ. ಅನಾಥಾಶ್ರಮಕ್ಕೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿದ್ದದ್ದು ನಮಗೆಲ್ಲ ತಿಳಿದೇ ಇದೆ. ಮಾಡಿದ ಸಹಾಯವನ್ನು ಅಪ್ಪು ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಿರಲಿಲ್ಲ.”

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

“ಮರಕ್ಕಿಂತ ಮರ ದೊಡ್ಡದು ಎಂಬ ರೀತಿ ದೊಡ್ಡ ದೊಡ್ಡ ಸ್ಟಾರ್‌ಗಳು ಮುಂದೆ ಬರಬಹುದು. ಒಂದು ಸಿನಿಮಾ ಸಾಧನೆಯನ್ನು ಮತ್ತೊಂದು ಸಿನಿಮಾ ಮುರಿಯಬಹುದು. ಆದರೆ ಅಷ್ಟೊಂದು ಯಶಸ್ಸು, ಸಾಧನೆ ಮಾಡಿದರೂ ಪ್ರೀತಿ ವಿಶ್ವಾಸದಲ್ಲೇ ಮನುಷ್ಯರನ್ನು ಗೆಲ್ಲುವುದಿದೆಯಲ್ಲ, ಅದು ಅತ್ಯಂತ ಅಪರೂಪದ ಗುಣ. ಅಂತಹ ಅಪರೂಪದ ಗುಣ ಪುನೀತ್‌ ಅವರಿಗಿತ್ತು. ಒಬ್ಬ ಸ್ಟಾರ್‌ ನಟ ನಿಧನರಾದರು ಎಂಬುದಕ್ಕಿಂತ, ಅಂತಹ ಒಳ್ಳೆಯ ಮನುಷ್ಯ ನಿಧನರಾದರು ಎಂಬುದು ನಮ್ಮನ್ನು ಸದಾ ಕಾಡುತ್ತದೆ” ಎನ್ನುತ್ತಾರೆ ಗಿರಿರಾಜ್‌.

ಮಲಯಾಳಂ ಚಿತ್ರರಂಗದ ಮೇರು ನಟ ಮೋಹನ್‌ ಲಾಲ್‌ ಸಂತಾಪ ಸೂಚಿಸಿದ್ದಾರೆ. ಪುನೀತ್‌ ಅವರ ಮೈತ್ರಿ ಸಿನಿಮಾದಲ್ಲಿ ಮೋಹನ್‌ ಲಾಲ್‌ ಅವರೂ ಅಭಿನಯಿಸಿದ್ದರು.

“ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ಸುದ್ದಿ ಆಘಾತ ತಂದಿದೆ. ಈ ಸುದ್ದಿಯನ್ನು ನಂಬಲು ಆಗುತ್ತಿಲ್ಲ. ನನ್ನ ಹಿರಿಯ ಸಹೋದರನನ್ನು ಕಳೆದುಕೊಂಡ ಅನುಭವವಾಗುತ್ತಿದೆ. ಈ ದುಃಖದಿಂದ ಪುನೀತ್‌ ಕುಟುಂಬ ಹೊರಬರಲಿ ಎಂದು ಪ್ರಾರ್ಥಿಸುವೆ” ಎಂದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸಂತಾಪ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಫೇಸ್‌ಬುಕ್‌ ಪೋಸ್ಟ್‌ ಮೂಲಕ ಸಂತಾಪ ಸೂಚಿಸಿದ್ದು, “ಕನ್ನಡದ ಚಿತ್ರಂಗದ ದಂತಕತೆ ಡಾ.ರಾಜ್‌ಕುಮಾರ್‌ ಅವರ ಪುತ್ರ ಪವರ್‌ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿರ್ಗಮನವನ್ನು ಕೇಳಿ ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

“ನಮ್ಮ ಮತ್ತು ಅವರ ಕುಟುಂಬದೊಂದಿಗೆ ಬಹಳ ವರ್ಷಗಳಿಂದ ಒಡನಾಟವಿತ್ತು. ಪುನೀತ್‌ ಅವರ ನಿಧನದಿಂದಾಗಿ ವೈಯಕ್ತಿಕ ನಷ್ಟವೂ ಆಗಿದೆ. ತಾರಾಪಟ್ಟದ ಹೊರತಾಗಿಯೂ ಅವರು ಮಹಾನ್‌ ವಿನಯವಂತರಾಗಿದ್ದರು. ರಾಜಕೀಯ ನಾಯಕ ಕಲೈಂಗರ್ ಅವರ ನಿಧನದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ನಮ್ಮ ಗೋಪಾಲಪುರಂ ನಿವಾಸಕ್ಕೆ ಭೇಟಿ ನೀಡಿದ್ದ ಪುನೀತ್ ಅವರ ವರ್ತನೆ ನನ್ನ ಹೃದಯದಲ್ಲಿ ಉಳಿದಿದೆ. ಕನ್ನಡ ಸಿನಿ ಉದ್ಯಮವು ತನ್ನ ಸಮಕಾಲೀನ ಶ್ರೇಷ್ಠ ಐಕಾನ್‌ಗಳಲ್ಲಿ ಒಂದನ್ನು ಕಳೆದುಕೊಂಡಿದೆ. ಈ ತುಂಬಲಾರದ ನಷ್ಟದಲ್ಲಿ, ದುಃಖದಲ್ಲಿರುವ ಪುನೀತ್ ಅವರ ಕುಟುಂಬಕ್ಕೆ ಮತ್ತು ಕರ್ನಾಟಕದ ಜನತೆಗೆ ನನ್ನ ಹೃದಯಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ಸ್ಟಾಲಿನ್‌ ತಿಳಿಸಿದ್ದಾರೆ.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...