Homeಕರ್ನಾಟಕಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ 'ಪುನೀತ್‌ ರಾಜ್‌ಕುಮಾರ್‌' ಅವರದಲ್ಲ

ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

- Advertisement -
- Advertisement -

ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಾಕಾರಿಯಾದೇ ಮೃತಪಟ್ಟಿದ್ದಾರೆ.

ಪ್ರತಿಭಾವಂತ ನಟನ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ, ಈ ನಡುವೆ ಪುನೀತ್‌ ರಾಜ್‌ಕುಮಾರ್‌ ಅವರು ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ವೈರಲ್‌ ಆಗುತ್ತಿದೆ. ವೈರಲ್‌ ವಿಡಿಯೊದಲ್ಲಿ, ವ್ಯಕ್ತಿಯೊಬ್ಬರು ಸುಸ್ತಾಗಿ ಬಂದು ಮೆಟ್ಟಿಲ ಮೇಲೆ ಕೂರುತ್ತಾರೆ. ನೋಡು ನೋಡುತ್ತಿದ್ದಂತೆ ಅವರು ಕೂತಲ್ಲಿಂದಲೇ ಕುಸಿದು ಬೀಳುತ್ತಾರೆ.

ಇದನ್ನೂ ಓದಿ: ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲ

ವಾಸ್ತವ ಏನು? ಈ ವಿಡಿಯೊ ನಿಜವೇ?

ವೈರಲ್‌ ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಲ್ಲಿ ಇರುವ ವ್ಯಕ್ತಿಯು ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಹೋಲುವುದಿಲ್ಲ. ಈ ವ್ಯಕ್ತಿಗೂ ಪುನೀತ್‌ ರಾಜ್‌ಕುಮಾರ್‌ ಅವರಿಗೂ ಯಾವುದೇ ಹೋಲಿಕೆ ಇಲ್ಲ.

ಅಲ್ಲದೆ ವೈರಲ್ ವಿಡಿಯೊ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೊವಾಗಿದೆ. ಸಾಮಾನ್ಯವಾಗಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೊದಲ್ಲಿ ಅದು ಸೆರೆಯಾಗಿರುವ ದಿನಾಂಕ ಕೂಡಾ ದಾಖಲಾಗಿರುತ್ತದೆ. ಅದರಂತೆ ಪ್ರಸ್ತುತ ವೈರಲ್ ವಿಡಿಯೊದಲ್ಲಿ ಆಗಸ್ಟ್‌‌ 28(25/08) ಎಂದು ಬರೆದಿರುವುದು ಕಾಣುತ್ತದೆ.

ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ವಿಡಿಯೊ ಸ್ಕ್ರೀನ್‌ ಶಾರ್ಟ್‌ ಇಟ್ಟುಕೊಂಡು ನಾವು ರಿವರ್ಸ್ ಸರ್ಚ್ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದ್ದು, ಈ ವಿಡಿಯೊ ಸೆಪ್ಟೆಂಬರ್‌ 2 ರಂದು ಫೇಸ್‌ಬುಕ್ ಮತ್ತು ಟ್ವಿಟರ್‌‌‌ನಲ್ಲಿ ಹಂಚಿಕೊಳ್ಳಲಾಗಿದೆ.

ಅಂದರೆ, ಪ್ರಸ್ತುತ ವೈರಲ್ ವಿಡಿಯೊ ಸುಮಾರು ಎರಡು ತಿಂಗಳ ಹಿಂದಿನ ವಿಡಿಯೊವಾಗಿದೆ. ಜೊತೆಗೆ ಸೆಪ್ಟೆಂಬರ್‌ ಎರಡರಂದು ‘ಸೋಷಿಯಲ್ ದಿಶಾ ಚಾನೆಲ್’ ಎಂಬ ಪೇಜ್‌ ಈ ವಿಡಿಯೋದ ಸುದೀರ್ಘ ದೃಶ್ಯವನ್ನೂ ಅಪ್ಲೋಡ್ ಮಾಡಿದೆ. ಅದರಲ್ಲಿ ಇದು 2021 ಆಗಸ್ಟ್‌‌ 28 ಸ್ಪಷ್ಟವಾಗಿ ಕಾಣುತ್ತದೆ. ಅಲ್ಲದೆ ಈ ಘಟನೆ ನಡೆದಿರುವುದು ಸಂಜೆ 07: 37 (19:37) ಕ್ಕೆ ಎಂದು ಸ್ಪಷ್ಟವಾಗಿ ವಿಡಿಯೊ ಮೂಲಕ ಕಾಣಬಹುದು.

ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಅಷ್ಟೇ ಅಲ್ಲದೆ ಈ ವಿಡಿಯೊ ಬಗ್ಗೆ ಟಿವಿ9 ಭರತ್‌‌ವರ್ಷ ಸೆಪ್ಟೆಂಬರ್‌ 1 ರಂದು ವರದಿ ಕೂಡಾ ಮಾಡಿದೆ. ವರದಿ ಹೇಳುವಂತೆ, “ಘಟನೆಯು ಸೂರತ್‌ನ ಗೋಲ್ಡ್ ಜಿಮ್‌ನ ವೀಡಿಯೊವಾಗಿದ್ದು, 33ರ ಹರೆಯದ ವ್ಯಕ್ತಿಗೆ ಅತಿಯಾದ ವರ್ಕೌಟ್‌ನಿಂದ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಇಡೀ ಘಟನೆ ಜಿಮ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ” ಎಂದು ಹೇಳಿದೆ.

 

ಈ ಎಲ್ಲಾ ಆಧಾರದ ಮೂಲಕ ಪ್ರಸ್ತುತ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ನಟ ಪುನೀತ್‌ ರಾಜ್‌ಕುಮಾರ್‌ ಅವರದ್ದಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...