Homeಕರ್ನಾಟಕಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ಡಾ.ರಾಜ್‌ ಕುಟುಂಬದೊಂದಿಗೆ ಅಪಾರ ಒಡನಾಟ ಹೊಂದಿರುವ ಸಾಹಿತಿ ಹಾಗೂ ಸಿನಿಮಾ ನಿರ್ದೇಶಕರಾದ ಡಾ.ಬರಗೂರು ರಾಮಚಂದ್ರಪ್ಪ ಅವರು ಪುನೀತ್‌ ರಾಜ್‌ಕುಮಾರ್‌ ಅವರ ಮಾನವೀಯ ಕಾರ್ಯಗಳನ್ನು ಓದುಗರೊಂದಿಗೆ ಹಂಚಿಕೊಂಡಿದ್ದಾರೆ.

- Advertisement -
- Advertisement -

ಪುನೀತ್‌ ಎಂದ ಕೂಡಲೇ ನನ್ನ ಕಣ್ಣೆದುರಿಗೆ ಬರುವುದು ರಾಜ್‌ಕುಮಾರ್‌ ಅವರೇನೇ. ಪುನೀತ್‌ ಅಷ್ಟೇ ಅಲ್ಲ, ರಾಜ್‌ಕುಮಾರ್‌ ಅವರ ಮೂವರು ಮಕ್ಕಳೂ ಡಾ.ರಾಜ್‌ ಅವರ ಸಾರ್ವಜನಿಕ ನಡವಳಿಕೆಯ ಮಾದರಿಯನ್ನು ಅನುಸರಿಸಿದವರು.

ಜನಪ್ರಿಯ ಹೀರೋ ಎಂದ ಕೂಡಲೇ ಅಭಿಮಾನಿಗಳ ದೊಡ್ಡ ಬಳಗವೇ ಇರುತ್ತದೆ. ಆಗ ಒಬ್ಬ ಹೀರೋ ನಿಜವಾದ ಅರ್ಥದಲ್ಲಿ ತನ್ನ ಚಿತ್ರಗಳ ಮೂಲಕ ಯಾವ ಸಂದೇಶವನ್ನು ನೀಡುತ್ತಾನೆ ಎಂಬುದು ಮುಖ್ಯವಾಗುತ್ತದೆ. ಅಂದರೆ ಅವರು ಎಂತಹ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಸಂಗತಿ.

ಪಾತ್ರದ ವಿಚಾರ ನಿರ್ದೇಶಕನದ್ದಲ್ಲವೇ ಎಂದು ಕೆಲವರು ಕೇಳಬಹುದು, ನಿಜ. ಆದರೆ ಜನಪ್ರಿಯ ನಟರಾದವರ ಕೈಯಲ್ಲೇ ಕಥಾ ವಸ್ತುವಿನ ಆಯ್ಕೆ ಇರುತ್ತದೆ. ನಾನು ಇಂತಹ ಕಥೆ ಇದ್ದರೆ ಮಾತ್ರ ನಟಿಸುತ್ತೇನೆ ಎಂದು ಹೇಳುವ ಮಟ್ಟಕ್ಕೆ ನಟ ಬೆಳೆದಿರುತ್ತಾನೆ. ಇಂತಹ ಸಂದರ್ಭದಲ್ಲಿ ತನಗೆ ಹೊಂದುವಂತಹ ಕಥೆ ಇದ್ದಾಗ ಮಾತ್ರ ನಟನೆಗೆ ಮುಂದಾಗುತ್ತಾನೆ. ಒಬ್ಬ ನಾಯಕ ಎಂತಹ ಕಥೆ ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದು ಮುಖ್ಯವಾಗುತ್ತದೆ. ಈ ಅರ್ಥದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರು ಸದಭಿರುಚಿಯ ಕಥಾ ವಸ್ತುಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು.

ತಾಯಿ ಮತ್ತು ಮಗನ ಸಂಬಂಧದ ಕೌಟುಂಬಿಕ ಪಾತ್ರಗಳು ಒಂದು ಕಡೆ ಇರುತ್ತವೆ. ಇನ್ನೊಂದು ಕಡೆ ಅನಾಥ ಮಕ್ಕಳನ್ನು ಪುನರ್ವಸತಿ ಕೇಂದ್ರದಲ್ಲಿ ಇಟ್ಟಾಗ ಏನು ಸಂದೇಶ ಸಾರಬಹುದು, ಗಣಿಗಾರಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಗಣಿಗಾರಿಕೆಯ ಅನಾಹುತಗಳೇನು?- ಈ ಥರದ ಕಥಾ ವಸ್ತುಗಳಲ್ಲೂ ಅವರು ಹೀರೋ ಆಗಿ ಅಭಿನಯಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಹೀರೋಗಳ ಸಾರ್ವಜನಿಕ ನಡೆವಳಿಕೆಯೂ ಬಹಳ ಮುಖ್ಯ ಎಂದು ಭಾವಿಸಿದ್ದೇನೆ. ಆ ದೃಷ್ಟಿಯಿಂದಲೂ ನಮ್ಮ ಚಿತ್ರರಂಗದಲ್ಲಿ ಮೆಚ್ಚಲೇಬೇಕಾದ, ಗೌರವಿಸಬೇಕಾದ ವ್ಯಕ್ತಿತ್ವ ಪುನೀತ್‌ ರಾಜ್‌ಕುಮಾರ್‌. ವರನಟ ಡಾ.ರಾಜ್‌ಕುಮಾರ್‌ ಥರದ ಪ್ರಬುದ್ಧ ಕಲಾವಿದ ಮತ್ತೊಬ್ಬ ಸಿಗುವುದು ಕಷ್ಟ. ಹೀಗಾಗಿ ರಾಜ್‌ ಕುಮಾರ್ ಅವರನ್ನು ಇಡೀ ನಾಡು ಅಪಾರವಾಗಿ ಗೌರವಿಸುತ್ತದೆ. ಜೊತೆಗೆ ರಾಜ್‌ಕುಮಾರ್‌ ಅವರ ಸಾರ್ವಜನಿಕ ನಡವಳಿಕೆ ಮಾದರಿಯಾದದ್ದು. ಡಾ.ರಾಜ್‌ಕುಮಾರ್‌ ಅವರ ಸಜ್ಜನಿಕೆ, ವಿನಯ, ಅನ್ಯರ ಬಗೆಗಿನ ಗೌರವ, ಸರಳತೆ, ಅಹಂಕಾರ ಇಲ್ಲದೆ ಇರುವುದು- ಇದೆಲ್ಲವೂ ಪುನೀತ್‌ ರಾಜ್‌ಕುಮಾರ್‌ ಅವರಲ್ಲಿತ್ತು.

ಪುನೀತ್‌ ರಾಜ್‌ಕುಮಾರ್‌ ಅವರ ಸಾರ್ವಜನಿಕ ನಡವಳಿಕೆ ಇವತ್ತಿನ ಯುವಕರ ದೃಷ್ಟಿಯಿಂದ ಬಹಳ ಮುಖ್ಯವಾದದ್ದು. ಯಾಕೆಂದರೆ ಒಬ್ಬ ಹೀರೋ ಹೇಗಿರುತ್ತಾನೋ ಹಾಗೇ ತಮ್ಮ ಅಭಿಮಾನಿಗಳು ವರ್ತಿಸಲು ಶುರುಮಾಡುತ್ತಾರೆ. ಪುನೀತ್‌ ಅವರ ಸಭ್ಯತೆ ಮತ್ತು ಸಂಭಾವಿತನದ ಇಮೇಜ್‌ ಯುವಕರಿಗೆ ಮಾದರಿಯಾಗಿತ್ತು. ಈ ಗುಣಗಳು ಅವರ ಅಭಿಮಾನಿಗಳ ಮೇಲೆ ಪ್ರಭಾವ ಬೀರಿದೆ.

ರಾಜ್‌ಕುಮಾರ್‌ ಅವರ ಮಕ್ಕಳು ಎಲ್ಲಿಯೂ ಸಾರ್ವಜನಿಕ ವಿವಾದಗಳಿಗೆ ಒಳಗಾದವರಲ್ಲ. ಪುನೀತ್ ಅವರನ್ನು ಕರ್ನಾಟಕದ ಅಸಂಖ್ಯಾತ ಯುವಕರು ಇಷ್ಟಪಡುತ್ತಾರೆ. ಅವರನ್ನು ಸಾರ್ವತ್ರಿಕವಾಗಿ ಇಷ್ಟಪಡುವ ಬಹುದೊಡ್ಡ ಪಡೆಯೇ ನಾಡಿನಲ್ಲಿದೆ. ಅವರ ನಡವಳಿಕೆಯನ್ನು ಸಾಮಾಜಿಕ ಜವಾಬ್ದಾರಿಯ ನಡವಳಿಕೆ ಎನ್ನಬಹುದು.

ಸಾರ್ವಜನಿಕ ಸೇವೆಯ ಗುರುತು

ಪುನೀತ್‌ ರಾಜ್‌ಕುಮಾರ್‌ ಅವರ ಸಾರ್ವಜನಿಕ ಸೇವೆ ಅನನ್ಯವಾದದ್ದು. ಮೈಸೂರಿನಲ್ಲಿ ಪಾರ್ವತಮ್ಮ ರಾಜ್‌ಕುಮಾರ್‌ ಅವರ ನೇತೃತ್ವದಲ್ಲಿ ಶಕ್ತಿಧಾಮ ಶುರು ಮಾಡಲಾಯಿತು. ರಾಜ್‌ಕುಮಾರ್‌ ಅವರ ಬೆಂಬಲ ಶಕ್ತಿಧಾಮ ಸ್ಥಾಪನೆಗೆ ಇತ್ತು. ಬೀದಿಗೆ ಬಿದ್ದ ಹೆಣ್ಣು ಮಕ್ಕಳಿಗೆ ಆಶ್ರಯವನ್ನು ಶಕ್ತಿಧಾಮ ನೀಡುತ್ತಿದೆ. ಪುನೀತ್‌ ರಾಜ್‌ಕುಮಾರ್‌ ಹಾಡಿ ಸಂಪಾದಿಸಿದ್ದು ಇರಬಹುದು, ಕನ್ನಡದ ಕೋಟ್ಯಾಧಿಪತಿ ರಿಯಾಲಿಟಿ ಶೋ ಮೂಲಕ ಬಂದ ಸಂಭಾವನೆ ಇರಬಹುದು- ಇದರ ಬಹುಪಾಲನ್ನು ಶಕ್ತಿಧಾಮಕ್ಕೆ ನೀಡುತ್ತಾ ಬಂದಿದ್ದರು. ಅನೇಕ ಅನಾಥಾಶ್ರಮಗಳಿಗೆ ಹಣ ಕೊಡುತ್ತಿದ್ದರು.

PC: newindianexpress.com

ರಾಜ್‌ಕುಮಾರ್‌‌ ಅವರು ನೂರು ಸಿನಿಮಾಗಳನ್ನು ಪೂರೈಸಿದಾಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿ.ವಿ.ಎಲ್‌.ಶಾಸ್ತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಶಿಕ್ಷಣ ಸಮಿತಿ ರಚಿಸುತ್ತಾರೆ. ಆನಂತರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಾಕಷ್ಟು ಕೆಲಸಗಳನ್ನು ಮಾಡುತ್ತಾರೆ. ಅನಾಥಾಶ್ರಮಗಳಿಗೆ ಸಹಕಾರ ನೀಡುತ್ತಾರೆ. ರಂಗ ಮಂದಿರಗಳು ರಾಜ್ಯಾದ್ಯಾಂತ ಸ್ಥಾಪನೆಯಾಗಲು ರಸಸಂಜೆ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಾರೆ.

ಒಮ್ಮೆ ರಾಜ್‌ಕುಮಾರ್‌ ಅವರು ನಮ್ಮ ಮನೆಗೆ ಬಂದಾಗ, “ಇಷ್ಟೆಲ್ಲ ಮಾಡುತ್ತೀರಿ, ಆದರೂ ಎಲ್ಲಿಯೂ ಪ್ರಚಾರ ತೆಗೆದುಕೊಳ್ಳುವುದಿಲ್ಲವಲ್ಲ ಸಾರ್” ಎಂದೆ. “ನಾವು ಕಲಾವಿದರು. ಬಲಗೈಲಿ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು. ನಾವು ಸಿನಿಮಾ ಮಾಡ್ತೀವಿ. ಇದನ್ನೆಲ್ಲ ಯಾಕೆ ಪ್ರಚಾರ ಮಾಡಬೇಕು” ಎಂದಿದ್ದರು.

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಪುನೀತ್ ಅವರಲ್ಲಿ ಒಮ್ಮೆ ಮಾತನಾಡುತ್ತಿದ್ದಾಗ ಹೇಳಿದೆ: “ನಿಮ್ಮ ತಂದೆಯವರು ಬಲಗೈಲಿ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಎಂದು ಹೇಳುತ್ತಿದ್ದರು. ಆ ಕಾಲದಲ್ಲಿ ಹೇಳಿದ್ದನ್ನೇ ನೀವು ಈಗಲೂ ಅನುಸರಿಸುತ್ತಿದ್ದೀರಿ. ಆದರೆ ಇವತ್ತಿನ ಪ್ರಪಂಚ, ಇವತ್ತಿನ ಸಮಾಜ ಬದಲಾಗಿದೆ. ನೀವು ಏನು ಮಾಡುತ್ತಿದ್ದೀರಿ ಎಂದು ಜನ ಕೇಳುತ್ತಾರೆ. ನೀವು ಮಾಡಿರುವುದನ್ನು ಹೇಳಬಹುದಲ್ಲ” ಎಂದೆ. ಆಗ ಪುನೀತ್ ಅವರು (ಐದು ವರ್ಷಗಳ ಹಿಂದೆ) ನಮ್ಮ ಮನೆಗೆ ಸಹಾಯಕರ ಮೂಲಕ ಒಂದು ಪಟ್ಟಿ ಕಳುಹಿಸಿಕೊಟ್ಟರು. ಸುಮಾರು ಐವತ್ತರಿಂದ ಅರವತ್ತು ಸರ್ಕಾರಿ ಶಾಲೆಗಳಿಗೆ ಲಕ್ಷಾಂತರ ರೂಪಾಯಿ ನೀಡಿರುವ ವಿವರಗಳನ್ನು ಆ ಪಟ್ಟಿಯಲ್ಲಿ ನೋಡಿದೆ.

ಸರ್ಕಾರಿ ಶಾಲೆಗಳಿಗೆ ಅವರು ಹಣ ನೀಡಿರುವುದು ಮುಖ್ಯ ಅನಿಸಿತು. ಕೆಲವು ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದರು, ಕೆಲವು ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್‌ ಕೊಟ್ಟಿದ್ದರು. ಹಣ ಸಹಾಯ ಮಾಡಿದ್ದರು. ವೃದ್ಧಾಶ್ರಮಗಳಿಗೆ, ಅನಾಥಾಶ್ರಮಗಳಿಗೆ ಹಣ ಕೊಟ್ಟಿದ್ದರು. ಹಾಗಾಗಿ ಪುನೀತ್‌ ಯುವಕರಿಗೆ ರಂಜನೆ ಮಾಡುತ್ತಿದ್ದ ನಟನಾಗಿ ಅಷ್ಟೇ ಇರಲಿಲ್ಲ. ಸಾಮಾಜಿಕ ಜವಾಬ್ದಾರಿಗಳನ್ನು ಸಿನಿಮಾಗಳ ಮೂಲಕ ತೋರಿಸಿಕೊಡುತ್ತಿದ್ದರು. ಯುವಕರು ಹಾದಿ ತಪ್ಪಬಹುದಾದ ಸಿನಿಮಾಗಳನ್ನು ಅವರು ಮಾಡಲಿಲ್ಲ.

ಜೂನಿಯರ್‌ ರಾಜ್‌ಕುಮಾರ್‌ ಎಂದೇ ಖ್ಯಾತರಾದ ಹಾವೇರಿಯ ಅಶೋಕ್‌ ಬಸ್ತಿ ಅವರು ರಾಜ್‌ಕುಮಾರ್‌ ಅವರ ಹೆಸರಲ್ಲಿ ಸಾಂಸ್ಕೃತಿಕ ಭವನ ಮಾಡಲಿದ್ದರು. ಅದೇ ಸಮಯದಲ್ಲಿ ಧಾರಾವಾಡದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರು ಶೂಟಿಂಗ್‌ನಲ್ಲಿ ಇದ್ದರು. ಅಶೋಕ್ ಬಸ್ತಿ ಅವರ ಸಾಂಸ್ಕೃತಿಕ ಭವನದ ಕುರಿತು ಪುನೀತ್‌ ಅವರಿಗೆ ತಿಳಿಸಿದೆ. ಸಾಂಸ್ಕೃತಿಕ ಭವನದ ಶಂಕು ಸ್ಥಾಪನೆಗೆ ಹೋಗಿಬಂದಿದ್ದರು. ಇನ್ನೊಬ್ಬರು ಜೂನಿಯರ್‌ ರಾಜ್‌ಕುಮಾರ್‌ ಕುಂಬಳಗೋಡು ಬಳಿಯ ಮುನಿಕುಮಾರ್‌. ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿ ಮಾಡಬೇಕು ಎಂಬ ಆಕಾಂಕ್ಷೆಯನ್ನು ತೋಡಿಕೊಂಡಿದ್ದರು. ಇದನ್ನು ತಿಳಿಸಲು ಹದಿನೈದು ದಿನಗಳ ಹಿಂದೆ ಪುನೀತ್ ಅವರಿಗೆ ಕರೆ ಮಾಡಿದ್ದೆ. “ಚೂರು ಕೆಲಸಗಳಿವೆ. ಖಂಡಿತ ಭೇಟಿ ಮಾಡೋಣ” ಎಂದಿದ್ದರು.

ಮೊದಲೆಲ್ಲ ಕರೆ ಮಾಡಿದಾಗ ‘ಸಾರ್‌’ ಎನ್ನುತ್ತಿದ್ದರು. ಇತ್ತೀಚೆಗೆ ನನ್ನನ್ನು ‘ಅಣ್ಣ’ ಎನ್ನುತ್ತಿದ್ದರು. ಮೊನ್ನೆಯೂ ‘ಆಯ್ತು ಅಣ್ಣ, ಮುನಿಕುಮಾರ್‌ ಅವರನ್ನು ಭೇಟಿಯಾಗೋಣ’ ಎಂದಿದ್ದರು. ಅಷ್ಟು ಆತ್ಮೀಯತೆ ಇತ್ತು. ಯಾವುದಾದರೂ ಆಡಿಯೋ ರಿಲೀಸ್‌ಗೆ ಕರೆದರೆ ತಕ್ಷಣ ಬಂದು ಬಿಡುತ್ತಿದ್ದರು. ಒಂದು ಸಿನಿಮಾವನ್ನು ನೀವು ನೋಡಬೇಕು ಎಂದರೆ ಬಂದು ನೋಡುತ್ತಿದ್ದರು. ಅವರ ವಿನಯವಂತಿಗೆ ಅಪಾರ.

ಅವರನ್ನು ಚಿಕ್ಕವರಿದ್ದಾಗಿನಿಂದಲೂ ನೋಡಿದ್ದೇನೆ. ಅವರ ಅಭಿನಯ, ಅವರು ನಡೆದುಕೊಳ್ಳುತ್ತಿದ್ದ ರೀತಿ… ಇಷ್ಟು ಚಿಕ್ಕ ವಯಸ್ಸಿಗೆ ಹೋಗಿದ್ದನ್ನು ಊಹಿಸಿಕೊಳ್ಳಲೂ ಆಗುತ್ತಿಲ್ಲ.

-ಡಾ.ಬರಗೂರು ರಾಮಚಂದ್ರಪ್ಪ

ನಿರೂಪಣೆ: ಯತಿರಾಜ್‌ ಬ್ಯಾಲಹಳ್ಳಿ


ಇದನ್ನೂ ಓದಿರಿ: ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...