Homeಮುಖಪುಟಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

- Advertisement -
- Advertisement -

ಕೋವಾಕ್ಸಿನ್‌ಗೆ ಮಾನ್ಯತೆ ನೀಡದ ಕಾರಣಕ್ಕಾಗಿ ವಿದೇಶ ಪ್ರವಾಸಕ್ಕೆ ಅನುಮತಿ ಪಡೆಯಲು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕೋವಾಕ್ಸಿನ್‌ನ ಎರಡು ಡೋಸ್‌ ಪಡೆದಿರುವ ಜನರಿಗೆ ಮತ್ತೇ ‘ಕೋವಿಶೀಲ್ಡ್’ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, “ಮತ್ತೆ ಲಸಿಕೆ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡುವ ಮೂಲಕ ನಾವು ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ. ನಮ್ಮೊಂದಿಗೆ ಯಾವುದೇ ಡೇಟಾ ಇಲ್ಲ. ಭಾರತ್ ಬಯೋಟೆಕ್ ವಿಶ್ವ ಆರೋಗ್ಯ ಸಂಸ್ಥೆಗೆ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿರುವುದನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ (WHO) ನ ಪ್ರತಿಕ್ರಿಯೆಗಾಗಿ ನಾವು ಕಾಯೋಣ. ದೀಪಾವಳಿ ರಜೆಯ ನಂತರ ನಾವು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಖುದ್ದು ಹಾಜರಾದ ವಕೀಲ ಕಾರ್ತಿಕ್ ಸೇಠ್, ಕೋವಾಕ್ಸಿನ್ ಅನ್ನು WHO ಮಾನ್ಯತೆ ನೀಡದ ಕಾರಣ ಪ್ರತಿದಿನ ವಿದೇಶಕ್ಕೆ ಹೋಗಲು ಇಚ್ಛಿಸುವ ಹಲವಾರು ಜನರಿಗೆ ಇತರ ದೇಶಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ ಎಂದು ವಾದಿಸಿದರು. ಪ್ರಸ್ತುತ ವ್ಯವಸ್ಥೆಯಡಿಯಲ್ಲಿ, ಈಗಾಗಲೇ ಕೋವಾಕ್ಸಿನ್ ಲಸಿಕೆಯನ್ನು ಪಡೆದಿರುವ ವ್ಯಕ್ತಿಯು ಕೋವಿಶೀಲ್ಡ್ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನವನ್ನು ನೀಡಬಹುದು ಎಂದು ಅವರು ಸೂಚಿಸಿದ್ದಾರೆ.

“ಯಾವುದೇ ಡೇಟಾ ಇಲ್ಲದೆ ಮತ್ತೊಂದು ಲಸಿಕೆಯನ್ನು ನೀಡುವಂತೆ ನಾವು ನಿರ್ದೇಶನ ಮಾಡಲು ಸಾಧ್ಯವಿಲ್ಲ. ನಿಮ್ಮ ಕಾಳಜಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಆದರೆ WHO ಯ ಪ್ರತಿಕ್ರಿಯೆಗಾಗಿ ಕಾಯೋಣ” ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

ವಕೀಲ ಕಾರ್ತಿಕ್ ಸೇಠ್ ಅವರು ತಮ್ಮ PIL ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಉಲ್ಲೇಖಿಸಿದ್ದು, ಯಾಕೆಂದರೆ ವಿದೇಶದಲ್ಲಿ ಅಧ್ಯಯನ ಮಾಡಲು ಸಜ್ಜಾಗಿರುವ ಹಲವಾರು ವಿದ್ಯಾರ್ಥಿಗಳು ಹಲವು ದೇಶಗಳಿಗೆ ಪ್ರವೇಶಕ್ಕೆ ಅನುಮತಿ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಕೋವಾಕ್ಸಿನ್ ಲಸಿಕೆಯನ್ನು ಬಿಡುಗಡೆ ಮಾಡುವಾಗ WHO ಅದನ್ನು ಅನುಮೋದಿಸಿಲ್ಲ ಎಂದು ಸರ್ಕಾರವು ಜನರಿಗೆ ತಿಳಿಸಲಿಲ್ಲ ಎಂದು ಕಾರ್ತಿಕ್‌ ಸೇಠ್‌ ಅವರ ಅರ್ಜಿಯಲ್ಲಿ ಹೇಳಲಾಗಿದೆ.

ಲಸಿಕೆ ತಯಾರಕರಾದ ಭಾರತ್ ಬಯೋಟೆಕ್ ಅನುಮೋದನೆಗಾಗಿ ಅರ್ಜಿಯನ್ನು 2021  ಏಪ್ರಿಲ್ ನಲ್ಲಿ ಸಲ್ಲಿಸಿದೆ. ಡಬ್ಲ್ಯುಎಚ್‌ಒ ಪಟ್ಟಿ ಮಾಡಿದ ಲಸಿಕೆಗಳನ್ನು ಹೊರತುಪಡಿಸಿ ಇತರ ಲಸಿಕೆಗಳನ್ನು ಪಡೆದ ಜನರಿಗೆ ಅನೇಕ ದೇಶಗಳು ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇ ತಿಂಗಳಲ್ಲಿ ಜನರು ತಿಳಿದು ಬಂದಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಕೋವಾಕ್ಸಿನ್ ಕುರಿತು ಅಧಿಕೃತ ಮಾಹಿತಿಯ ಬಿಡುಗಡೆ ಮತ್ತು ಅನುಮೋದನೆ ವಿಳಂಬದ ಕಾರಣಗಳನ್ನು ಬಹಿರಂಗಪಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...