Homeಕರ್ನಾಟಕಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಅವರು ಶುಕ್ರವಾರದಂದು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕನ್ನಡ ಸಿನಿಮಾ ರಂಗದಲ್ಲಿ ಫಿಟೆಸ್ಟ್ ನಟರಾಗಿದ್ದ ಪುನೀತ್‌ ಅವರು ಮುಂದಿನ ದಿನಗಳಲ್ಲಿ ಸಾಲು ಸಾಲು ಸಿನಿಮಾಗಳ ಕೆಲಸದಲ್ಲಿ ಬ್ಯುಸಿ ಆಗಿದ್ದರು. ಆದರೆ ಅವೆಲ್ಲವೂ ಈಗ ಅರ್ಧಕ್ಕೆ ಉಳಿದುಹೋಗಿವೆ.

ಪುನೀತ್ ಪ್ರಸ್ತುತ ಜೇಮ್ಸ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಈ ಸಿನಿಮಾವನ್ನು ನಿರ್ದೇಶಕ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದರು. ಇದು ಸಂಪೂರ್ಣ ಆಕ್ಷನ್‌ ಎಂಟರ್‌ಟೈನರ್ ಸಿನಿಮಾ ಆಗಿದ್ದು, ಪುನೀತ್‌ ಈ ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಜೇಮ್ಸ್ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ಪ್ರಿಯಾ ಆನಂದ್ ಅವರ ನಾಯಕಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

ಪುನೀತ್‌‌ ಅವರ ಮುಂದಿನ ಚಿತ್ರ ದ್ವಿತ್ವ ಸಿನಿಮಾ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಸೆಟ್ಟೇರಲಿತ್ತು. ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್‌ನೊಂದಿಗಿನ ಚಿತ್ರೀಕರಿಸಲಾಗುತ್ತಿತ್ತು.

ಅಲ್ಲದೆ, ಪುನೀತ್ ಅವರು ರಾಜಕುಮಾರ ಮತ್ತು ಯುವರತ್ನದಲ್ಲಿ ಕೆಲಸ ಮಾಡಿದ ಸಂತೋಷ್ ಆನಂದ್‌ ರಾಮ್‌ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡಲು ನಿರ್ಧರಿಸಿದ್ದರು.

ಇಷ್ಟೇ ಅಲ್ಲದೆ ಫೈಲ್ವಾನ್ ನಿರ್ದೇಶಕ ಕೃಷ್ಣ ಅವರು ಪುನೀತ್‌ಗಾಗಿ ಒಂದು ಸಿನಿಮಾ ಘೋಷಿಸಿದ್ದು, ಅದರಲ್ಲಿ ಪುನೀತ್‌ ‘ರಾ’ ಏಜೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಜೊತೆಗೆ ದಿನಕರ್‌ ತೂಗುದೀಪ ನಿರ್ದೇಶನದ ಜಯಣ್ಣ ಬ್ಯಾನರ್‌ ಅಡಿಯಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿತ್ತು. ಅಲ್ಲದೆ ಪೃಥ್ವಿ ನಿರ್ದೇಶಕ ಜೇಕಬ್ ವರ್ಗೀಸ್ ಜೊತೆ ಸಿನಿಮಾ ಮಾಡುವುದಾಗಿ ಪುನೀತ್ ಹೇಳಿಕೊಂಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಷ್ಟೇ ಅಲ್ಲದೆ, ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್‌ ಅಡಿಯಲ್ಲಿ ಮೂರು ಚಿತ್ರಗಳು ಬಿಡುಗಡೆಗೆ ಸಿದ್ದವಾಗಿತ್ತು.

ಅವರ ಅಂತ್ಯಕ್ರಿಯೆ ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಲಿದೆ ಎಂದು ಸರ್ಕಾರ ತಿಳಿಸಿದ್ದು, ಪುನೀತ್ ಅವರ ಗೌರವಾರ್ಥ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಕೊರೊನ ಮಾರ್ಗಸೂಚಿ ಅನುಸರಿಸಿ ನೆರೆವೇರಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಆದರೆ ನಿರ್ದೇಶಕ ರಾಕ್‌ಲೈನ್ ವೆಂಕಟೇಶ್‌ ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...