Homeಮುಖಪುಟಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ 'ಟಿಎಂಸಿ' ಎಂದರೆ ಟೆಂಪಲ್, ಮಸ್ಜಿದ್, ಚರ್ಚ್ ಎಂದು ಕರೆದಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಸೋಲಿಸೋಣ ಎಂದು ಗೋವಾ ಫಾರ್ವಾಡ್ ಪಾರ್ಟಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಕರೆ ನೀಡಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಬಿಜೆಪಿ ಮೈತ್ರಿಯಿಂದ ಹೊರಬಂದಿರುವ ಅವರು ಇಂದು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ.

“ಭ್ರಷ್ಟ, ಕೋಮುವಾದಿ ಬಿಜೆಪಿಯ ಆಳ್ವಿಕೆಯನ್ನು ಕೊನೆಗೊಳಿಸಲು ವಿರೋಧ ಪಕ್ಷಗಳ ಐಕ್ಯತೆ ಅತಿ ಮುಖ್ಯವಾಗಿದೆ. ಹಾಗಾಗಿ 2022ರ ಚುನಾವಣೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಮಮತಾ ಬ್ಯಾನರ್ಜಿಯವರ ಆಹ್ವಾನದ ಮೇರೆಗೆ ನಾನು ಮತ್ತು ನಮ್ಮ ಹಿರಿಯ ಸಹೋದ್ಯೋಗಿಗಳು ಇಂದು ಬೆಳಿಗ್ಗೆ 10 ಗಂಟೆಗೆ ಅವರನ್ನು ಭೇಟಿಯಾಗುತ್ತಿದ್ದೇವೆ” ಎಂದು ವಿಜಯ್ ಸರ್ದೇಸಾಯಿ ತಿಳಿಸಿದ್ದಾರೆ.

ಮೂವರು ವಿಧಾನಸಭಾ ಸದಸ್ಯರನ್ನು ಹೊಂದಿರುವ ಗೋವಾ ಫಾರ್ವಾಡ್ ಪಾರ್ಟಿ ಬಿಜೆಪಿಯೊಂದಿಗೆ ಸರ್ಕಾರದ ಭಾಗವಾಗಿತ್ತು. ವಿಜಯ್ ಸರ್ದೇಸಾಯಿ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ ಬಿಜೆಪಿಯೊಂದಿಗೆ ಬಿರುಕು ಕಾಣಿಸಿಕೊಂಡ ನಂತರ ಬಿಜೆಪಿಯನ್ನು ಸಮಾಜ ವಿರೋಧ ಪಕ್ಷ ಎಂದು ಕರೆದ ಅವರು 2021ರ ಏಪ್ರಿಲ್‌ನಲ್ಲಿ ಮೈತ್ರಿಯಿಂದ ಹೊರಬಂದಿದ್ದರು.

ಅವರು ಮೊದಲು ಕಾಂಗ್ರೆಸ್‌ನೊಂದಿಗೆ ಮೈತ್ರಿಗೆ ಯತ್ನಿಸಿದ್ದರು. ಆದರೆ ಕಾಂಗ್ರೆಸ್ ಒಪ್ಪದಿದ್ದಾಗ ಟಿಎಂಸಿ ಜೊತೆ ಮಾತುಕತೆಗೆ ಮುಂದಾಗಿದ್ದಾರೆ. ಟಿಎಂಸಿ ಸಹ ಗೋವಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪರ್ಧಿಸಲು ನಿರ್ಧರಿಸಿದೆ. ಮೂರು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಭರ್ಜರಿ ಚುನಾವಣಾ ತಯಾರಿ ನಡೆಸಿದ್ದಾರೆ.

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ‘ಟಿಎಂಸಿ’ ಎಂದರೆ ಟೆಂಪಲ್ (ದೇವಾಲಯ), ಮಸ್ಜಿದ್ (ಮಸೀದಿ), ಚರ್ಚ್ (ಇಗರ್ಜಿ) ಎಂದು ಕರೆದಿದ್ದಾರೆ. ಹಲವು ದೇವಾಲಯಗಳಿಗೆ ಭೇಟಿ ಕೊಟ್ಟಿರುವ ಅವರು, “ನಾನು ನಿಮ್ಮ ಸಹೋದರಿ. ನಿಮ್ಮ ಅಧಿಕಾರ ಹಿಡಿಯಲು ನಾನು ಬಂದಿಲ್ಲ. ಆದರೆ ಜನರು ತೊಂದರೆ ಎದುರಿಸುತ್ತಿರುವಾಗ ಅವರನ್ನು ನೋಡಲು ನನ್ನ ಹೃದಯ ಬಯಸುತ್ತದೆ” ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’ ಮತ್ತು ನಟಿ, ಕಾರ್ಯಕರ್ತೆ ನಫೀಸಾ ಅಲಿ ಟಿಎಂಸಿ ಸೇರಿರುವುದು ಪಕ್ಷ ಬಲ ತಂದುಕೊಟ್ಟಿದೆ.

40 ಸದಸ್ಯಬಲದ ಗೋವಾ ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ. 2017ರಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಜಯಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಯು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿದೆ.


ಇದನ್ನೂ ಓದಿ: ಗೋವಾ: ಟಿಎಂಸಿ ಸೇರಿದ ಮಾಜಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...