Homeಸಿನಿಮಾಕ್ರೀಡೆಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸ್ ಸಿಡಿಸಿ ಪಾಕ್ ಅನ್ನು ಗೆಲುವಿನ ದಡ ಸೇರಿಸಿದ ಆಸಿಫ್ ಅಲಿ!

ಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸ್ ಸಿಡಿಸಿ ಪಾಕ್ ಅನ್ನು ಗೆಲುವಿನ ದಡ ಸೇರಿಸಿದ ಆಸಿಫ್ ಅಲಿ!

ಸತತ ಮೂರು ಪಂದ್ಯ ಗೆಲ್ಲುವುದರೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಹಾದಿ ಸುಗಮವಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್‌ನ ಆಫ್ಘಾನಿಸ್ಥಾನ ಎದುರಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲಲು ಕೊನೆಯ 12 ಎಸೆತಗಳಲ್ಲಿ 24 ರನ್ ಬೇಕಿದೆ. ಈಗಾಗಲೇ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದರಿಂದ ಪಾಕ್ ಅಭಿಮಾನಿಗಳಲ್ಲಿ ಆತಂಕ, ಎದೆಬಡಿತ. ಆಗ ಕ್ರೀಸ್‌ನಲ್ಲಿದುದ್ದು ಸ್ಫೋಟಕ ಬ್ಯಾಟ್ಸ್‌ಮನ್ ಆಸಿಫ್ ಅಲಿ. ಆಫ್ಘಾನಿಸ್ಥಾನದ ವೇಗದ ಬೌಲರ್ ಕರೀಂ ಜನತ್ 19ನೇ ಓವರ್ ಬೌಲ್ ಮಾಡಿದಾಗ ಆಸಿಫ್ ಅಲಿ ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿ ಪಾಕ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಾಕ್ ಅಭಿಮಾನಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

19ನೇ ಓವರ್‌ನ ಮೊದಲ ಬಾಲ್ ಅನ್ನು ಲಾಂಗ್ ಆಫ್‌ ಮೇಲೆ ಮೂರನೇ ಎಸೆತವನ್ನು ಮಿಡ್ ವಿಕೆಟ್ ಮೇಲೆ ಸಿಕ್ಸರ್ ಎತ್ತಿದ್ದರು. ಐದನೇ ಎಸೆತವನ್ನು ನೇರ ಬೌಲರ್ ತಲೆ ಮೇಲೆ ಹೊಡೆದರೆ ಆರನೇ ಎಸೆತವನ್ನು ಕವರ್‌ನಲ್ಲಿ ಸಿಕ್ಸ್‌ಗೆ ಕಳಿಸಿದರು. ಕೇವಲ 7 ಎಸೆತಗಳಲ್ಲಿ 25 ರನ್ ಸಿಡಿಸಿ ಪಂದ್ಯ ಗೆಲುವಿಗೆ ಅಮೋಘ ಕಾಣಿಕೆ ನೀಡಿದರು.

 

View this post on Instagram

 

A post shared by ICC (@icc)

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಫ್ಘಾನಿಸ್ಥಾನ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 147 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಉತ್ತರವಾಗಿ ಪಾಕ್ 19 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.

ಅಕ್ಟೋಬರ್ 26 ರಂದು ಪಾಕ್ ಮತ್ತು ನ್ಯೂಜಿಲೆಂಡ್ ಎದುರಿನ ಪಂದ್ಯದಲ್ಲಿಯೂ ಸಹ ಆಸಿಫ್ ಅಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಪಾಕ್ 5 ವಿಕೆಟ್ ಕಳೆದುಕೊಂಡು ಆತಂಕದ ಸ್ಥಿತಿಯಲ್ಲಿದ್ದಾಗ ಕ್ರೀಸ್‌ಗೆ ಬಂದ ಅವರು ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿ ತಂಡದ ಗೆಲುವಿಗೆ ಸಹಾಯಕವಾಗಿದ್ದರು. ಆ ಪಂದ್ಯದಲ್ಲಿ ಅವರು 12 ಎಸೆತಗಳಲ್ಲಿ 27 ರನ್ ಗಳಿಸಿದ್ದರು.

ಭಾರತ, ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ಥಾನದ ಎದುರು ಸತತ ಮೂರು ಪಂದ್ಯ ಗೆಲ್ಲುವುದರೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಹಾದಿ ಸುಗಮವಾಗಿದೆ. ಸ್ಕಾಟ್ಲ್ಯಾಂಡ್ ಮತ್ತು ನಮೀಬಿಯಾ ಎದುರು ಎರಡು ಪಂದ್ಯಗಳು ಮಾತ್ರ ಬಾಕಿ ಇದ್ದು ಒಂದು ಗೆದ್ದರೂ ಆರಾಮಾವಾಗಿ ಸೆಮಿಫೈನಲ್ ತಲುಪುತ್ತದೆ.

ಪಾಕ್ ಎದುರು ಮೊದಲ ಪಂದ್ಯ ಸೋತಿರುವ ಭಾರತ ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ಧ ತನ್ನ ಎರಡನೇ ಪಂದ್ಯ ಸೆಣಸಲಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...