Homeಸಿನಿಮಾಕ್ರೀಡೆಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸ್ ಸಿಡಿಸಿ ಪಾಕ್ ಅನ್ನು ಗೆಲುವಿನ ದಡ ಸೇರಿಸಿದ ಆಸಿಫ್ ಅಲಿ!

ಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸ್ ಸಿಡಿಸಿ ಪಾಕ್ ಅನ್ನು ಗೆಲುವಿನ ದಡ ಸೇರಿಸಿದ ಆಸಿಫ್ ಅಲಿ!

ಸತತ ಮೂರು ಪಂದ್ಯ ಗೆಲ್ಲುವುದರೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಹಾದಿ ಸುಗಮವಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್‌ನ ಆಫ್ಘಾನಿಸ್ಥಾನ ಎದುರಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲಲು ಕೊನೆಯ 12 ಎಸೆತಗಳಲ್ಲಿ 24 ರನ್ ಬೇಕಿದೆ. ಈಗಾಗಲೇ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದರಿಂದ ಪಾಕ್ ಅಭಿಮಾನಿಗಳಲ್ಲಿ ಆತಂಕ, ಎದೆಬಡಿತ. ಆಗ ಕ್ರೀಸ್‌ನಲ್ಲಿದುದ್ದು ಸ್ಫೋಟಕ ಬ್ಯಾಟ್ಸ್‌ಮನ್ ಆಸಿಫ್ ಅಲಿ. ಆಫ್ಘಾನಿಸ್ಥಾನದ ವೇಗದ ಬೌಲರ್ ಕರೀಂ ಜನತ್ 19ನೇ ಓವರ್ ಬೌಲ್ ಮಾಡಿದಾಗ ಆಸಿಫ್ ಅಲಿ ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿ ಪಾಕ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಾಕ್ ಅಭಿಮಾನಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

19ನೇ ಓವರ್‌ನ ಮೊದಲ ಬಾಲ್ ಅನ್ನು ಲಾಂಗ್ ಆಫ್‌ ಮೇಲೆ ಮೂರನೇ ಎಸೆತವನ್ನು ಮಿಡ್ ವಿಕೆಟ್ ಮೇಲೆ ಸಿಕ್ಸರ್ ಎತ್ತಿದ್ದರು. ಐದನೇ ಎಸೆತವನ್ನು ನೇರ ಬೌಲರ್ ತಲೆ ಮೇಲೆ ಹೊಡೆದರೆ ಆರನೇ ಎಸೆತವನ್ನು ಕವರ್‌ನಲ್ಲಿ ಸಿಕ್ಸ್‌ಗೆ ಕಳಿಸಿದರು. ಕೇವಲ 7 ಎಸೆತಗಳಲ್ಲಿ 25 ರನ್ ಸಿಡಿಸಿ ಪಂದ್ಯ ಗೆಲುವಿಗೆ ಅಮೋಘ ಕಾಣಿಕೆ ನೀಡಿದರು.

 

View this post on Instagram

 

A post shared by ICC (@icc)

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಫ್ಘಾನಿಸ್ಥಾನ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 147 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಉತ್ತರವಾಗಿ ಪಾಕ್ 19 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.

ಅಕ್ಟೋಬರ್ 26 ರಂದು ಪಾಕ್ ಮತ್ತು ನ್ಯೂಜಿಲೆಂಡ್ ಎದುರಿನ ಪಂದ್ಯದಲ್ಲಿಯೂ ಸಹ ಆಸಿಫ್ ಅಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಪಾಕ್ 5 ವಿಕೆಟ್ ಕಳೆದುಕೊಂಡು ಆತಂಕದ ಸ್ಥಿತಿಯಲ್ಲಿದ್ದಾಗ ಕ್ರೀಸ್‌ಗೆ ಬಂದ ಅವರು ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿ ತಂಡದ ಗೆಲುವಿಗೆ ಸಹಾಯಕವಾಗಿದ್ದರು. ಆ ಪಂದ್ಯದಲ್ಲಿ ಅವರು 12 ಎಸೆತಗಳಲ್ಲಿ 27 ರನ್ ಗಳಿಸಿದ್ದರು.

ಭಾರತ, ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ಥಾನದ ಎದುರು ಸತತ ಮೂರು ಪಂದ್ಯ ಗೆಲ್ಲುವುದರೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಹಾದಿ ಸುಗಮವಾಗಿದೆ. ಸ್ಕಾಟ್ಲ್ಯಾಂಡ್ ಮತ್ತು ನಮೀಬಿಯಾ ಎದುರು ಎರಡು ಪಂದ್ಯಗಳು ಮಾತ್ರ ಬಾಕಿ ಇದ್ದು ಒಂದು ಗೆದ್ದರೂ ಆರಾಮಾವಾಗಿ ಸೆಮಿಫೈನಲ್ ತಲುಪುತ್ತದೆ.

ಪಾಕ್ ಎದುರು ಮೊದಲ ಪಂದ್ಯ ಸೋತಿರುವ ಭಾರತ ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ಧ ತನ್ನ ಎರಡನೇ ಪಂದ್ಯ ಸೆಣಸಲಿದೆ.


ಇದನ್ನೂ ಓದಿ: ಭಾರತ -ಪಾಕಿಸ್ತಾನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಹೀಗಾದರೆ ಹೇಗೆ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...