Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...