Homeಕರ್ನಾಟಕಏಕರೂಪಿ ರಾಷ್ಟ್ರೀಯತೆಯ ಅಪಾಯಗಳನ್ನು ಎಚ್ಚರಿಸಿದ ಕರ್ನಾಟಕದ ತುಳುನಾಡಿನ ವೈವಿಧ್ಯತೆ

ಏಕರೂಪಿ ರಾಷ್ಟ್ರೀಯತೆಯ ಅಪಾಯಗಳನ್ನು ಎಚ್ಚರಿಸಿದ ಕರ್ನಾಟಕದ ತುಳುನಾಡಿನ ವೈವಿಧ್ಯತೆ

- Advertisement -
- Advertisement -

ದಕ್ಷಿಣ ಕನ್ನಡದವನು ಎಂದು ಪರಿಚಯಿಕೊಳ್ಳುವಾಗ ಎರಡು ರೀತಿಗಳಲ್ಲಿ ಗುರುತಿಸುತ್ತಾರೆ. ಒಂದು ಬುದ್ಧಿಶಾಲಿ ಜಿಲ್ಲೆಯವನೆಂದು ಮತ್ತೊಂದು ಕೋಮುವಾದದ ತವರಿನವನೆಂದು. ಬುದ್ಧಿವಂತರ ಜಿಲ್ಲೆ ಎಂದು ಕರೆಸಿಕೊಂಡಿದ್ದು ವರ್ಷಕ್ಕೊಮ್ಮೆ ಬರುತ್ತಿದ್ದ ಶಾಲಾ ಕಾಲೇಜುಗಳು ಪರೀಕ್ಷಾ ಫಲಿತಾಂಶದ ಕಾರಣಕ್ಕೆ ಮಾತ್ರ ಅಲ್ಲ, ಬದಲಿಗೆ ಈ ಪ್ರದೇಶದ ಜನತೆಯ ಶಿಕ್ಷಣ, ರಾಜಕಾರಣ, ಉದ್ಯಮ, ಬ್ಯಾಂಕಿಂಗ್, ಸಾಹಿತ್ಯ, ವಿದ್ವತ್ ಮೊದಲಾದ ವಲಯಗಳಲ್ಲಿ ಮಾಡಿದ ಸಾಧನೆಗಳಿಂದ. ಇಂದು ಕೋಮುವಾದಿಗಳಾಗಿ ಹೊಸ ಸಮುದಾಯಗಳು ರೂಪುಗೊಳ್ಳುವ ಪ್ರಕ್ರಿಯೆಯಲ್ಲಿ ಬುದ್ಧಿವಂತರಾಗಿ ಉಳಿದಿಲ್ಲ ಎಂಬುದನ್ನೂ ಸ್ಪಷ್ಟವಾಗಿ ಗುರುತಿಸಬಹುದಾಗಿದೆ!

ನನ್ನ ಬಾಲ್ಯದಿಂದಲೇ ’ಹಿಂದುತ್ವ’ದ ವಾತಾವರಣದಲ್ಲಿ ಬೆಳೆದ ಕಾರಣ, ನಾನು ಬರೆಯಬಲ್ಲ ಹಂತಕ್ಕೆ ಬಂದಾಗ ನನ್ನ ಜೊತೆಗಿನ ಎಲ್ಲಾ ಹುಡುಗರ ಹಾಗೆಯೇ ಪೂರ್ಣಪ್ರಮಾಣದ ಹಿಂದುತ್ವವಾದಿಯಾಗಿ ರೂಪುಗೊಂಡಿದ್ದೆ. ಆರ್.ಎಸ್.ಎಸ್ ಶಾಖೆಗಳಿಗೆ ಹೋಗುತ್ತಿದ್ದೆ. ಆದರೆ ನನ್ನ ಓರಗೆಯ ಇತರ ಹುಡುಗರಿಗೂ ನನಗೂ ಇದ್ದ ವ್ಯತ್ಯಾಸ ಎಂದರೆ ನಾನು ಆರ್.ಎಸ್.ಎಸ್ ಮತ್ತು ರಾಷ್ಟ್ರೋತ್ಥಾನದ ಸಾಹಿತ್ಯಗಳನ್ನು ಓದಿದೆ. ಇದು ಸಂಘ ಪರಿವಾರ ಪ್ರಣೀತ ಹಿಂದುತ್ವ ಮತ್ತು ಹಿಂದೂ ಧರ್ಮಕ್ಕೆ ಇರುವ ವ್ಯತ್ಯಾಸಗಳ ಬಗ್ಗೆ ಯೋಚಿಸಲು ಕಾರಣವಾಗಿ ಚಿಂತನೆಗೆ ಹಚ್ಚಿತು.

ಭಾರತೀಯ ಸಂಸ್ಕೃತಿಯನ್ನು ಹಿಂದುತ್ವದ ನೆಲೆಯಿಂದ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವಾಗ ಎಡವುತ್ತಿದ್ದೆ. ಯಾಕೆಂದರೆ ಹಿಂದುತ್ವ ಯಾವುದನ್ನು ಹಿಂದುತ್ವ ’ಭಾರತ’ ಎಂದು ವ್ಯಾಖ್ಯಾನಿಸುತ್ತದೆಯೋ ಅದು ಅಸ್ತಿತ್ವದಲ್ಲಿಯೇ ಇಲ್ಲ. ಹಿಂದುತ್ವದ ಸಮಸ್ಯೆ ಇರುವುದು ಭಾರತವನ್ನು ಒಂದು ಸೀಮಿತ ಚೌಕಟ್ಟಿನಲ್ಲಿ ಇಟ್ಟು ನೋಡುವುದು!

ಭಾರತ ಒಂದು ಬಹು ಸಾಂಸ್ಕೃತಿಕ ರಾಷ್ಟ್ರ. ಹಿಂದುತ್ವ ಎಂಬ ಒಂದು ಸೈದ್ಧಾಂತಿಕ ಆವರಣದ ಒಳಗಡೆ ಅದನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಇದು ಸಂಸ್ಕೃತಿಯ ಬಗ್ಗೆ ಹೆಚ್ಚೆಚ್ಚು ಓದಲು ತೊಡಗುವಾಗ ಗಟ್ಟಿಗೊಳ್ಳುತ್ತಲೇಹೋಯಿತು. ಇದರ ಸುತ್ತ ನನ್ನ ಸಾಂಸ್ಕೃತಿಕ ಮತ್ತು ರಾಜಕೀಯ ಯೋಚನೆಗಳನ್ನು ಕಟ್ಟಲುತೊಡಗಿದೆ.

ರಾಷ್ಟ್ರೀಯತೆಯ ಬಗ್ಗೆ ಪ್ರಪಂಚದಾದ್ಯಂತ ಚರ್ಚೆಗಳು ನಡೆದಿವೆ. ಇದಕ್ಕಿರುವ ಭಿನ್ನಭಿನ್ನ ವ್ಯಾಖ್ಯಾನಗಳನ್ನು ಚರ್ಚಿಸಲಾಗುತ್ತಿದೆ. ಏಕದೇಶ, ಏಕಭಾಷೆ, ಏಕಧರ್ಮ – ಇವೇ ರಾಷ್ಟ್ರೀಯತೆಗೆ ಇರುವ ಸಾಮಾನ್ಯ ವ್ಯಾಖ್ಯಾನ. ಹಿಂದುತ್ವದ ಪ್ರತಿಪಾದಿಸುವುದು ಕೂಡ ಇದೇ ರಾಷ್ಟ್ರೀಯತೆಯನ್ನು. ಆರ್.ಎಸ್.ಎಸ್‌ನ ಎರಡನೇ ಸರಸಂಚಾಲಕ ಮಾಧವ ಸದಾಶಿವ ಗೋಳ್ವಾಕರ್ ಅವರ ಪ್ರಕಾರ ದೇಶವನ್ನು ರೂಪಿಸುವ ಐದು ಏಕತೆಗಳು ಎಂದರೆ ದೇಶ, ಜನಾಂಗ, ಧರ್ಮ, ಭಾಷೆ ಮತ್ತು ಸಂಸ್ಕೃತಿ. ಅವರೇ ಹೇಳುವಂತೆ ಇವೆಲ್ಲಾ ಅಂಶಗಳೂ ಧರ್ಮಕೇಂದ್ರಿತ. ಯಾಕೆಂದರೆ ಧರ್ಮವೇ ಇವೆಲ್ಲವನ್ನೂ ರೂಪಿಸುತ್ತದೆ!

ಹಾಗಿದ್ದರೆ ಯಾವ ಸಂಸ್ಕೃತಿಯ ಮೂಲಕ ದೇಶವನ್ನು ಮತ್ತು ಹಿಂದೂ ಧರ್ಮವನ್ನು ನಿರ್ಧರಿಸಬೇಕು? ವೈದಿಕ ಸಾಹಿತ್ಯವೇ ಇವೆಲ್ಲವನ್ನೂ ನಿರ್ಧರಿಸುತ್ತದೆ ಎಂದರೆ ನನ್ನ ಊರಿನ ದೈವ ಪಾತ್ರಿ ಒಬ್ಬ ಹಾಡುವ ಪಾಡ್ದನಕ್ಕೆ ಈ ದೇಶದಲ್ಲಿ ಬೆಲೆ ಇಲ್ಲವೇ? ಅಖಿಲ ಭಾರತ ಮಟ್ಟದಲ್ಲಿ ದೈವಾರಾಧನೆ, ಯಕ್ಷಗಾನಕ್ಕೆ ಇರುವ ಸ್ಥಾನ ಏನು? ಕೇವಲ ದೇವರನ್ನೇ ನಂಬುವುದು ದೇಶದ ಸಂಸ್ಕೃತಿ ಎಂದರೆ ದೇವರ ಅಸ್ತಿತ್ವವನ್ನು ಅಲ್ಲಗಳೆದು ಭಾರತೀಯ ತಾತ್ವಿಕ ಪರಂಪರೆಯಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವ ಲೋಕಾಯತ, ನಾಸ್ತಿಕ, ಚಾರ್ವಾಕ ಮೊದಲಾದವರು ಭಾರತೀಯರೆಲ್ಲವೆ? ವೇದಗಳನ್ನು ತಿರಸ್ಕರಿಸಿ, ಜಾತಿವ್ಯವಸ್ಥೆಯನ್ನು, ವರ್ಣವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ ನಾಥ, ಕಾಳಾಮುಖ, ಸಾಂಖ್ಯ, ಬೌದ್ಧ, ಶರಣ ಮೊದಲಾದ ಪಂಥಗಳು ಭಾರತದಲ್ಲವೇ? ಸಾವಿರಾರು ಭಾಷೆಗಳು ಮತ್ತು ಅವುಗಳ ಸುತ್ತ ಬೆಳೆದಿರುವ ಸಂಸ್ಕೃತಿಗಳು ಭಾರತಕ್ಕೆ ಬೇಡವೇ?

ಹಿಂದುತ್ವವನ್ನು ಪ್ರಶ್ನಿಸಿ ಅದರ ಕೋಮುವಾದಿ ರಾಷ್ಟ್ರೀಯತೆಗೆ ಉತ್ತರ ನೀಡಲು ನಮ್ಮ ಮುಂದೆ ಇರುವದು, ಈ ದೇಶ ಸಾವಿರಾರು ವರ್ಷಗಳಿಂದ ಬೆಳೆಸಿಕೊಂಡು ಬಂದಿರುವ ಬಹುಮುಖಿ ಸಂಸ್ಕೃತಿ. ಇದಕ್ಕೆ ನಾನು ಹುಟ್ಟಿ ಬೆಳೆದ ದಕ್ಷಿಣ ಕನ್ನಡದಲ್ಲಿಯೇ ನೂರಾರು ಉದಾಹರಣೆಗಳಿವೆ.

ಇವುಗಳನ್ನು ತಿರುಗಿ ನೋಡಿದಾಗ, ನನಗೆ ಏಕರೂಪಿ ಸಂಸ್ಕೃತಿಯನ್ನು ಪ್ರಚಾರ ಮಾಡುವ ಹಿಂದುತ್ವದಿಂದ ಬಹುತ್ವದ ಬೇರುಗಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂಬ ಭಯ ಗೋಚರಿಸುತ್ತದೆ. ತುಳುನಾಡಿನ ಸಂಸ್ಕೃತಿ ಒಡೆಯುವುದನ್ನು ಕಲಿಸಿಲ್ಲ. ಹಕ್ಕುಗಳಿಗೆ ಹೋರಾಡುವ ಕೋಟಿ ಚೆನ್ನಯರು, ಸ್ತ್ರೀಮತವನ್ನು ಉದ್ಧರಿಸಲು ತನ್ನ ಪತಿಯನ್ನು ತಿರಸ್ಕರಿಸುವ ಅಕ್ಕೆರಸು ಸಿರಿ, ತನ್ನ ಅರಸನನ್ನು ರಕ್ಷಿಸಲು ಪ್ರಾಣ ನೀಡುವ ಮಾಮ್ಮಾಲಿ ಬ್ಯಾರಿ, ಬಪ್ಪನಾಡಿನ ದುರ್ಗಾಪರಮೇಶ್ವರಿ, ಒಲಿದ ಬಪ್ಪ ಬ್ಯಾರಿ ಮೊದಲಾದ ಜಾನಪದ ನಾಯಕರು ಈ ನೆಲದ ಸಂಸ್ಕೃತಿಯನ್ನು ಕಟ್ಟಿದ್ದಾರೆ.

ಬೊಬ್ಬರ್ಯ ಎಂಬ ಮುಸಲ್ಮಾನ ಬ್ಯಾರಿಯೊಬ್ಬ ಮೀನುಗಾರರ ದೈವವಾಗುವುದು ಜಾನಪದದಿಂದ ಹೊರತು ರಾಜಕೀಯ ಪ್ರೇರಿತ ಮತೀಯತೆಯಿಂದಲ್ಲ. ಹಿಂದುತ್ವ ಹಿಂದೂ ಧರ್ಮವನ್ನು ಸುಧಾರಿಸುವ ಬದಲು ಒಂದು ಕರ್ಮಠ ಮತಧರ್ಮವನ್ನಾಗಿ ಮಾರ್ಪಾಡು ಮಾಡುವಾಗ ನಾವು ಬಹುತ್ವದ ಬಗ್ಗೆ ಹೆಚ್ಚುಹೆಚ್ಚು ಮಾತನಾಡಬೇಕಾಗಿದೆ. ಹಿಂದುತ್ವದಲ್ಲಿ ಬೊಬ್ಬರ್ಯ ದೈವದ ಕಥೆಯನ್ನು ಮಹಾಭಾರತದ ಬಬ್ರುವಾಹನನ ಕಥೆಯೊಂದಿಗೆ ಜೋಡಿಸಿ ತಿರುಚಲು ಯತ್ನಿಸಿದರೆ ಸಾಮಾನ್ಯನೊಬ್ಬ ಹಾಡುವ ಪಾಡ್ದನದಲ್ಲಿ ಅವನು ಒಬ್ಬ ಮುಸಲ್ಮಾನ!

ಹಿಂದುತ್ವದಲ್ಲಿ ಬಹುತ್ವಕ್ಕೆ ಅವಕಾಶ ಇಲ್ಲ. ತುಳುವಿನ ಸಬಲೀಕರಣದ ಬಗ್ಗೆ ಅದು ಮಾತನಾಡಿದರೂ ಅದಕ್ಕೆ ಬೇಕಾದ ಪಠ್ಯವನ್ನು ರೂಪಿಸುವಾಗ ಕೋಮುವಾದವನ್ನು ತರಲಾಗುತ್ತದೆ. ಹೀಗಾಗಿ ತುಳುವಿನ ಬಗೆಗಿನ ವಿದ್ವತ್‌ಪೂರ್ಣ ಚರ್ಚೆ ಕಳೆದ ಎರಡು ದಶಕಗಳಿಂದ ತೀರ ಕಡಿಮೆಯಾಗಿದೆ.

ನಮಗೆ ಬೇಕಾದದ್ದು ನಮ್ಮ ಹಿರಿಯರು ನೀಡಿದ ಎಲ್ಲರನ್ನೂ ಒಳಗೊಳ್ಳುವ ತುಳು ಸಂಸ್ಕೃತಿ. ಇದು ಕೇವಲ ತುಳುವಿನ ವಿಚಾರದಲ್ಲಿ ಮಾತ್ರವಲ್ಲ ಇಡೀ ದೇಶದ ವಿಚಾರದಲ್ಲೂ ಮುಖ್ಯವಾಗುತ್ತದೆ! ನನ್ನ ಮನೆಯ ಸಂಸ್ಕೃತಿಯ ಮೂಲಕ ನನ್ನ ದೇಶವನ್ನು ವ್ಯಾಖ್ಯಾನಿಸಲು ಸಾಧ್ಯವಾದರೆ ಅದೇ ನಿಜವಾದ ದೇಶಪ್ರೇಮ. ಹಾಗಾದಾಗ ಮಾತ್ರ ಭಾರತ ನಮ್ಮ ಒಳಗೆ ಗಟ್ಟಿಯಾಗಿ ನೆಲೆಯೂರಲು ಸಾಧ್ಯ.

ಕೋಮುವಾದದಿಂದ ಅಧಃಪತನಕ್ಕೆ ಹೋಗುತ್ತಿರುವ ಭಾರತವನ್ನು ಉಳಿಸುವ ಜವಾಬ್ದಾರಿ ಕನ್ನಡಿಗರಾದ ನಮ್ಮ ಮೇಲಿದೆ. ಕವಿರಾಜ ಮಾರ್ಗಕಾರ ಹೇಳುವ “ಕನ್ನಡಂಗಳ” ವೈವಿಧ್ಯತೆಯ ಜೊತೆಗೆ ತುಳು, ಕೊರಗ, ಕೊಡವ ಮೊದಲಾದ ಕರ್ನಾಟಕದ ಭಾಷೆಗಳು ತಮ್ಮ ಅಸ್ತಿತ್ವದ ಬಗ್ಗೆ ದನಿ ಎತ್ತಿವೆ. ಈ ಸಂಸ್ಕೃತಿಗಳು ಕನ್ನಡನಾಡನ್ನು ಬೆಳೆಸಿವೆ. ಕನ್ನಡದ ದನಿಗಳು ತುಳುವಿನವೂ, ಕೊಡವ ಭಾಷೆಯದ್ದೂ, ಅಳಿವಿನಂಚಿನಲ್ಲಿ ಇರುವ ಕೊರಗರದ್ದೂ ಆಗಬೇಕು! ಈ ಪ್ರಜ್ಞೆ ಇಡೀ ಕರ್ನಾಟಕವನ್ನು ವ್ಯಾಪಿಸಬೇಕು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ನಾಡನ್ನು ಕಟ್ಟಿದ ಈ ಬಹುಮುಖಿ ನೆಲೆಗಳ ಉಳಿವಿನ ಬಗ್ಗೆ ದನಿ ಎತ್ತುವ ಮೂಲಕ ಪತನಮುಖಿ ಭಾರತದ ಚೈತನ್ಯವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ.

ಚರಣ್ ಐವರ್ನಾಡು

ಚರಣ್ ಐವರ್ನಾಡು
ಯುವ ಬರಹಗಾರ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರು. ಇತಿಹಾಸ, ಜಾನಪದ, ರಾಜಕೀಯ ಮತ್ತು ಸಬಾಲ್ಟ್ರನ್ ಅಧ್ಯಯನಗಳು ಇವರ ಬರವಣಿಗೆಯ ಕ್ಷೇತ್ರಗಳು.


ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...