Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...