Homeಕರ್ನಾಟಕPuneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ನಾಳೆ ಬೆಳಗಿನ ಜಾವದವರೆಗೂ ನಟನ ಅಂತಿಮ ದರ್ಶನಕ್ಕೆ ಅನುಕೂಲ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಇಂದು ಸಂಜೆಗೆ ನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿತ್ತು. ನಿರ್ದೇಶಕ ರಾಕ್‌ಲೈನ್ ವೆಂಕಟೇಶ್ ಕೂಡಾ ಇಂದು ಸಂಜೆ ಅಂತಿಮ ಕ್ರಿಯೆ ನಡೆಯಲಿದೆ ಎಂದು ಹೇಳಿದ್ದರು. ಆದರೆ ಶನಿವಾರ ಮಧ್ಯಾಹ್ನ ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಮುಖ್ಯಮಂತ್ರಿ, “ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

“ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ಅವರ ಮಗಳು ದೆಹಲಿ ತಲುಪಿ, ಬೆಂಗಳೂರು ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ.ಅವರು ಬಹುತೇಕವಾಗಿ 5:30, 6:00 ಗಂಟೆಗೆ ತಲುಪಲಿದ್ದಾರೆ. ಇಲ್ಲೂ ಜನಸಂದಣಿ ಹೆಚ್ಚಾಗಿದ್ದು, ಬಹಳಷ್ಟು ಜನರಿಗೆ ಅವರ ಅಂತಿಮ ದರ್ಶನ ಪಡೆಯುವ ಇಚ್ಛೆ ಇದೆ. ಆರುಗಂಟೆಯ ನಂತರ ಕತ್ತಲಾದ ಮೇಲೆ ಸಣ್ಣಜಾಗದಲ್ಲಿ ಅಂತ್ಯಕ್ರಿಯೆ ಮಾಡುವುದು ಸವಾಲಿನ ಕೆಲಸ” ಎಂದು ಹೇಳಿದ್ದಾರೆ.

“ಕುಟುಂಬ ಸದಸ್ಯರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಜೊತೆಗೆ ಚರ್ಚೆ ಮಾಡಿ, ಅಂತ್ಯಕ್ರಿಯೆಯನ್ನು ನಾಳೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ನಾಳೆ ಬೆಳಗಿನ ಜಾವದವರೆಗೂ ನಟನ ದರ್ಶನಕ್ಕೆ ಅನುಕೂಲ ಮಾಡಲಾಗುವುದು. ಎಲ್ಲರೂ ನಿಧಾನವಾಗಿ, ಶಾಂತವಾಗಿ ಸಾಲಿನಲ್ಲಿ ಬಂದು ದರ್ಶನ ಮಾಡಬಹುದು” ಎಂದು ಬೊಮ್ಮಾಯಿ ಹೇಳಿದ್ದಾರೆ.

ಪುನೀತ್‌ ಅವರ ಸಹೋದರ ರಾಘವೇಂದ್ರ ರಾಜ್‌ಕುಮಾರ್‌ ಅವರ ಮಗ ವಿನಯ್ ರಾಜ್‌ಕುಮಾರ್‌‌ ಅಂತಿಮ ವಿಧಿವಿಧಾನವನ್ನು ನೆರೆವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಂತ್ಯ ಸಂಸ್ಕಾರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಎಲ್ಲಾ ವ್ಯವಸ್ಯೆ ಮಾಡಿಕೊಳ್ಳಲಾಗಿದ್ದು, ಡಾ. ರಾಜ್ ಕುಮಾರ್​ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯಸಂಸ್ಕಾರ ನಡೆಯಲಿದೆ. ಈ ನಡುವೆ ಪುನೀತ್ ಅವರ ಮಗಳು ಧೃತಿ ಅಮೇರಿಕದಿಂದ ಹೊರಟಿದ್ದು, ಸಂಜೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ ಎಂದು ವರದಿಯಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಪುನೀತ್ ರಾಜ್‌ಕುಮಾರ್ ಅವರ ಅಂತಿಮ ದರ್ಶನ ಪಡೆದು ಕುಟುಂಬಿಕರಿಗೆ ಸಾಂತ್ವಾನ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...