Homeಕರ್ನಾಟಕPuneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ನಾಳೆ ಬೆಳಗಿನ ಜಾವದವರೆಗೂ ನಟನ ಅಂತಿಮ ದರ್ಶನಕ್ಕೆ ಅನುಕೂಲ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಇಂದು ಸಂಜೆಗೆ ನಟನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿತ್ತು. ನಿರ್ದೇಶಕ ರಾಕ್‌ಲೈನ್ ವೆಂಕಟೇಶ್ ಕೂಡಾ ಇಂದು ಸಂಜೆ ಅಂತಿಮ ಕ್ರಿಯೆ ನಡೆಯಲಿದೆ ಎಂದು ಹೇಳಿದ್ದರು. ಆದರೆ ಶನಿವಾರ ಮಧ್ಯಾಹ್ನ ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಮುಖ್ಯಮಂತ್ರಿ, “ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

“ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ಅವರ ಮಗಳು ದೆಹಲಿ ತಲುಪಿ, ಬೆಂಗಳೂರು ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ.ಅವರು ಬಹುತೇಕವಾಗಿ 5:30, 6:00 ಗಂಟೆಗೆ ತಲುಪಲಿದ್ದಾರೆ. ಇಲ್ಲೂ ಜನಸಂದಣಿ ಹೆಚ್ಚಾಗಿದ್ದು, ಬಹಳಷ್ಟು ಜನರಿಗೆ ಅವರ ಅಂತಿಮ ದರ್ಶನ ಪಡೆಯುವ ಇಚ್ಛೆ ಇದೆ. ಆರುಗಂಟೆಯ ನಂತರ ಕತ್ತಲಾದ ಮೇಲೆ ಸಣ್ಣಜಾಗದಲ್ಲಿ ಅಂತ್ಯಕ್ರಿಯೆ ಮಾಡುವುದು ಸವಾಲಿನ ಕೆಲಸ” ಎಂದು ಹೇಳಿದ್ದಾರೆ.

“ಕುಟುಂಬ ಸದಸ್ಯರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಜೊತೆಗೆ ಚರ್ಚೆ ಮಾಡಿ, ಅಂತ್ಯಕ್ರಿಯೆಯನ್ನು ನಾಳೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ನಾಳೆ ಬೆಳಗಿನ ಜಾವದವರೆಗೂ ನಟನ ದರ್ಶನಕ್ಕೆ ಅನುಕೂಲ ಮಾಡಲಾಗುವುದು. ಎಲ್ಲರೂ ನಿಧಾನವಾಗಿ, ಶಾಂತವಾಗಿ ಸಾಲಿನಲ್ಲಿ ಬಂದು ದರ್ಶನ ಮಾಡಬಹುದು” ಎಂದು ಬೊಮ್ಮಾಯಿ ಹೇಳಿದ್ದಾರೆ.

ಪುನೀತ್‌ ಅವರ ಸಹೋದರ ರಾಘವೇಂದ್ರ ರಾಜ್‌ಕುಮಾರ್‌ ಅವರ ಮಗ ವಿನಯ್ ರಾಜ್‌ಕುಮಾರ್‌‌ ಅಂತಿಮ ವಿಧಿವಿಧಾನವನ್ನು ನೆರೆವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಂತ್ಯ ಸಂಸ್ಕಾರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಎಲ್ಲಾ ವ್ಯವಸ್ಯೆ ಮಾಡಿಕೊಳ್ಳಲಾಗಿದ್ದು, ಡಾ. ರಾಜ್ ಕುಮಾರ್​ ಸಮಾಧಿಯಿಂದ 125 ಅಡಿ ಹಾಗೂ ಪಾರ್ವತಮ್ಮ ಸಮಾಧಿಯಿಂದ 45 ಅಡಿ ದೂರದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯಸಂಸ್ಕಾರ ನಡೆಯಲಿದೆ. ಈ ನಡುವೆ ಪುನೀತ್ ಅವರ ಮಗಳು ಧೃತಿ ಅಮೇರಿಕದಿಂದ ಹೊರಟಿದ್ದು, ಸಂಜೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ ಎಂದು ವರದಿಯಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಪುನೀತ್ ರಾಜ್‌ಕುಮಾರ್ ಅವರ ಅಂತಿಮ ದರ್ಶನ ಪಡೆದು ಕುಟುಂಬಿಕರಿಗೆ ಸಾಂತ್ವಾನ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...