Homeಚಳವಳಿಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನಾರಿಕುರುವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದಾರೆ.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದರು. ಅಶ್ವಿನಿಯವರ ನಾರಿಕುರುವ ಅಲೆಮಾರಿ ಸಮುದಯಾದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿದೆ.

ಒಂದು ಮಧ್ಯಾಹ್ನ ನಾವು ಊಟ ಮಾಡಲು ಸಾಲಿನಲ್ಲಿ ನಿಂತಿದ್ದೆವು. ಮೊದಲ ಪಂಕ್ತಿಗೆ ನಮಗೆ ಜಾಗ ಸಿಗಲಿಲ್ಲ. ಎರಡನೇ ಪಂಕ್ತಿಗೆ ಕುಳಿತಾಗ ದೇವಸ್ಥಾನದ ಒಬ್ಬ ವ್ಯಕ್ತಿ ಬಂದು ಅಲ್ಲಿಂದ ಹೊರಹೋಗುವಂತೆ ಹೇಳಿದರು. ಎಲ್ಲರೂ ಊಟ ಮಾಡಿ ಉಳಿದರೆ ದೇವಸ್ಥಾನದ ಹೊರಗೆ ನಿಮಗೆ ನೀಡುತ್ತೇವೆ, ದೇವಸ್ಥಾನದ ಹೊರಗೆ ಕಾಯಿರಿ ಎಂದು ನನ್ನ ಜೊತೆಗಿದ್ದ ನಮ್ಮ ಸಮುದಾಯದವರೆಲ್ಲರನ್ನು ಹೊರ ಕಳಿಸಿದ್ದರು ಎಂದು ಅಶ್ವಿನಿಯವರು ವಿಡಿಯೋದಲ್ಲಿ ಹೇಳಿದ್ದರು. ಇದು ನಿಮ್ಮ ಮದುವೆಯೆ ಉಳಿದರೆ ಕೊಡುತ್ತೇನೆ ಎಂದು ಹೇಳುವುದಕ್ಕೆ? ಇದು ಬಡವರಿಗೆಂದು ರಾಜ್ಯ ಸರ್ಕಾರ ಸ್ಥಾಪಿಸಿರುವ ದೇವಸ್ಥಾನದ ಊಟದ ಯೋಜನೆ. ನಾವು ಅವಿದ್ಯಾವಂತರಾದ ಕಾರಣಕ್ಕೆ ನಮಗೆ ಊಟ ನಿರಾಕರಿಸಲಾಗಿದೆ. ಒಂದು ದಿನ ನನ್ನ ಮಗ ಬೆಳೆದು ದೊಡ್ಡವನಾಗುತ್ತಾನೆ. ನಾವು ಅವನಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇವೆ. ಎಷ್ಟು ದಿನ ಅವರು ಬದಲಾಗದೆ ಉಳಿಯುತ್ತಾರೆ ನಾವು ನೋಡುತ್ತೇವೆ ಎಂದು ಅಶ್ವಿನಿ ಹೇಳಿದ್ದರು.

ಅಶ್ವಿನಿ ಪೂಂಚೇರಿ ಗ್ರಾಮದ ನಾರಿಕುರುವ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆ ಸಮುದಾಯದ ಜನರು ಮಣಿಗಳು ಮತ್ತು ಆಭರಣಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಈ ವಿಡಿಯೋ ಸಿಎಂ ಸ್ಟಾಲಿನ್ ಗಮನಕ್ಕೆ ಬಂದಾಗ ಆ ಮಹಿಳೆಯನ್ನು ಗುರುತಿಸುವಂತೆ ಮತ್ತು ತಾರತಮ್ಯವನ್ನು ಖಂಡಿಸಿ ಜಾಗೃತಿ ಮೂಡಿಸುವಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದ್ದರು. ಅದರಂತೆ ಆ ಮಹಿಳೆ ಮತ್ತು ಸಮುದಾಯವನ್ನು ಗುರುತಿಸಿ ಅವರೊಂದಿಗೆ ದೇವಸ್ಥಾನದಲ್ಲಿ ಒಟ್ಟಿಗೆ ಊಟ ಮಾಡುವ ಮೂಲಕ ಮುಂದೆ ಇಂತಹ ಘಟನೆಗಳು ನಡೆಯದಂತೆ ತಮಿಳುನಾಡು ಸರ್ಕಾರ ಎಚ್ಚರಿಕೆ ನೀಡಿದೆ.

ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ತಮಿಳುನಾಡಿನ 754 ದೇವಾಲಯಗಳಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ ಈ ಯೋಜನೆ ಜಾರಿಯಲ್ಲಿದೆ.

ತಾರತಮ್ಯಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಿದ ತಮಿಳನಾಡು ಸರ್ಕಾರದ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಹರಿದುಬಂದಿದೆ. ಹಲವರು ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ನಿನ್ನೆ ಘೋಷಿಸಿತ್ತು. ಇದಕ್ಕೂ ಹಲವುರ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...