Homeಚಳವಳಿಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನಾರಿಕುರುವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದಾರೆ.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದರು. ಅಶ್ವಿನಿಯವರ ನಾರಿಕುರುವ ಅಲೆಮಾರಿ ಸಮುದಯಾದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿದೆ.

ಒಂದು ಮಧ್ಯಾಹ್ನ ನಾವು ಊಟ ಮಾಡಲು ಸಾಲಿನಲ್ಲಿ ನಿಂತಿದ್ದೆವು. ಮೊದಲ ಪಂಕ್ತಿಗೆ ನಮಗೆ ಜಾಗ ಸಿಗಲಿಲ್ಲ. ಎರಡನೇ ಪಂಕ್ತಿಗೆ ಕುಳಿತಾಗ ದೇವಸ್ಥಾನದ ಒಬ್ಬ ವ್ಯಕ್ತಿ ಬಂದು ಅಲ್ಲಿಂದ ಹೊರಹೋಗುವಂತೆ ಹೇಳಿದರು. ಎಲ್ಲರೂ ಊಟ ಮಾಡಿ ಉಳಿದರೆ ದೇವಸ್ಥಾನದ ಹೊರಗೆ ನಿಮಗೆ ನೀಡುತ್ತೇವೆ, ದೇವಸ್ಥಾನದ ಹೊರಗೆ ಕಾಯಿರಿ ಎಂದು ನನ್ನ ಜೊತೆಗಿದ್ದ ನಮ್ಮ ಸಮುದಾಯದವರೆಲ್ಲರನ್ನು ಹೊರ ಕಳಿಸಿದ್ದರು ಎಂದು ಅಶ್ವಿನಿಯವರು ವಿಡಿಯೋದಲ್ಲಿ ಹೇಳಿದ್ದರು. ಇದು ನಿಮ್ಮ ಮದುವೆಯೆ ಉಳಿದರೆ ಕೊಡುತ್ತೇನೆ ಎಂದು ಹೇಳುವುದಕ್ಕೆ? ಇದು ಬಡವರಿಗೆಂದು ರಾಜ್ಯ ಸರ್ಕಾರ ಸ್ಥಾಪಿಸಿರುವ ದೇವಸ್ಥಾನದ ಊಟದ ಯೋಜನೆ. ನಾವು ಅವಿದ್ಯಾವಂತರಾದ ಕಾರಣಕ್ಕೆ ನಮಗೆ ಊಟ ನಿರಾಕರಿಸಲಾಗಿದೆ. ಒಂದು ದಿನ ನನ್ನ ಮಗ ಬೆಳೆದು ದೊಡ್ಡವನಾಗುತ್ತಾನೆ. ನಾವು ಅವನಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇವೆ. ಎಷ್ಟು ದಿನ ಅವರು ಬದಲಾಗದೆ ಉಳಿಯುತ್ತಾರೆ ನಾವು ನೋಡುತ್ತೇವೆ ಎಂದು ಅಶ್ವಿನಿ ಹೇಳಿದ್ದರು.

ಅಶ್ವಿನಿ ಪೂಂಚೇರಿ ಗ್ರಾಮದ ನಾರಿಕುರುವ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆ ಸಮುದಾಯದ ಜನರು ಮಣಿಗಳು ಮತ್ತು ಆಭರಣಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಈ ವಿಡಿಯೋ ಸಿಎಂ ಸ್ಟಾಲಿನ್ ಗಮನಕ್ಕೆ ಬಂದಾಗ ಆ ಮಹಿಳೆಯನ್ನು ಗುರುತಿಸುವಂತೆ ಮತ್ತು ತಾರತಮ್ಯವನ್ನು ಖಂಡಿಸಿ ಜಾಗೃತಿ ಮೂಡಿಸುವಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಆದೇಶಿಸಿದ್ದರು. ಅದರಂತೆ ಆ ಮಹಿಳೆ ಮತ್ತು ಸಮುದಾಯವನ್ನು ಗುರುತಿಸಿ ಅವರೊಂದಿಗೆ ದೇವಸ್ಥಾನದಲ್ಲಿ ಒಟ್ಟಿಗೆ ಊಟ ಮಾಡುವ ಮೂಲಕ ಮುಂದೆ ಇಂತಹ ಘಟನೆಗಳು ನಡೆಯದಂತೆ ತಮಿಳುನಾಡು ಸರ್ಕಾರ ಎಚ್ಚರಿಕೆ ನೀಡಿದೆ.

ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನದಾನಂ ಹೆಸರಿನಲ್ಲಿ ಬಡವರಿಗೆ ಉಚಿತ ಊಟ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ತಮಿಳುನಾಡಿನ 754 ದೇವಾಲಯಗಳಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ ಈ ಯೋಜನೆ ಜಾರಿಯಲ್ಲಿದೆ.

ತಾರತಮ್ಯಕ್ಕೊಳಗಾದ ಮಹಿಳೆಗೆ ನ್ಯಾಯ ದೊರಕಿಸಿದ ತಮಿಳನಾಡು ಸರ್ಕಾರದ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಹರಿದುಬಂದಿದೆ. ಹಲವರು ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ನಿನ್ನೆ ಘೋಷಿಸಿತ್ತು. ಇದಕ್ಕೂ ಹಲವುರ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...