Homeಕರ್ನಾಟಕಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದೆ. ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆ” ಎಂಬ ವಿಚಾರವನ್ನು ಈ ಮೆಸೇಜ್‌ ಒಳಗೊಂಡಿದೆ. ಇದರ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯು ದೇವಿ ಶೆಟ್ಟಿ ಅವರಲ್ಲಿ ವಿಚಾರಿಸಿದ್ದು, “ಈ ರೀತಿಯ ಯಾವುದೇ ಸಂದೇಶವನ್ನು ನಾನು ನೀಡಿಲ್ಲ. ಜನರನ್ನು ದಿಕ್ಕು ತಪ್ಪಿಸಲು ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ ಆಪ್‌ ಮೆಸೇಜ್‌ ಹೀಗಿದೆ:

ಡಾ.ದೇವಿ ಶೆಟ್ಟಿ

ನನ್ನೆಲ್ಲ ಸ್ನೇಹಿತರಿಗೆ….

ಕೆಲವು ವರ್ಷಗಳಿಂದ ನನಗೆ ವೈಯಕ್ತಿಕವಾಗಿ ಪರಿಚಯವಿದ್ದ 8ರಿಂದ 9 ಮಂದಿ ಅಗಲಿದ್ದಾರೆ, ಅದರಲ್ಲಿ ನಲವತ್ತು ವರ್ಷ ವಯಸ್ಸಿಗೆ ಸಾವನ್ನಪ್ಪಿದ, ಅತಿಯಾದ ಫಿಟ್‌ನೆಟ್‌‌ ಮಾಡುತ್ತಿದ್ದ ಕೆಲವು ಸೆಲಬ್ರಟಿಗಳೂ ಇದ್ದಾರೆ. ಫಿಟ್‌ನೆಸ್‌, ಸಿಕ್ಸ್‌ಫ್ಯಾಕ್ಸ್‌‌ ಇತ್ಯಾದಿಗಳ ಕಡೆಗೆ ಅವರು ನೋಡುತ್ತಿದ್ದರು. ಈ ಪಟ್ಟಿಗೆ ಈಗ ಪುನೀತ್‌ ರಾಜ್‌ಕುಮಾರ್‌ ಸೇರಿದ್ದಾರೆ.

ಜೀವನದಲ್ಲಿ ಯಾವುದೇ ವಿಷಯದಲ್ಲಾದರೂ ಅತಿಯಾದದ್ದನ್ನು ತಪ್ಪಿಸುವುದು ಮಂತ್ರವಾಗಬೇಕು. ಶೂನ್ಯವಾಗಿರಬೇಕು ಅಥವಾ ನೂರನ್ನು ತಲುಪಬೇಕು ಎಂಬ ರೀತಿಯ ಅತಿಯಾದ ಅಲೋಚನೆ ಸರಿಯಾದದ್ದಲ್ಲ. ಇಪ್ಪತ್ತು ನಿಮಿಷಗಳ ಮಧ್ಯಮ ಪ್ರಮಾಣದ ವ್ಯಾಯಾಮ ಮಾಡಿರಿ, ನಿಮ್ಮ ಪೂರ್ವಜರು ತಿನ್ನುತ್ತಿದ್ದುದನ್ನು ಮಾತ್ರ ತಿನ್ನಿರಿ, ನಿಮ್ಮ ಊರಿನಲ್ಲಿರುವ ಸ್ಥಳೀಯ ಮತ್ತು ಕಾಲಕ್ಕೆ ಅನುಗುಣವಾದ ಆಹಾರವನ್ನು ಸೇವಿಸಿ, ಪೂರ್ಣ 7 ಗಂಟೆಗಳ ನಿದ್ದೆ ಮಾಡಿರಿ, ನಿಮ್ಮ ದೇಹಕ್ಕೆ ಸ್ಟೀರಾಯ್ಡ್ಗಳನ್ನು ನೀಡದೆ ಗೌರವಿಸಿರಿ…. ಇತ್ಯಾದಿಗಳನ್ನು ನೀವು ಮಾಡಬೇಕಾಗಿದೆ.

ನೀವು ಬೆಳೆದಿದ್ದನ್ನು ಸಣ್ಣ ಪ್ರಮಾಣದಲ್ಲಿ ತಿನ್ನಿ, 20 ನಿಮಿಷದಿಂದ 30 ನಿಮಿಷಗಳವರೆಗೆ ವ್ಯಾಯಾಮ ಮಾಡಿ… ಒಳ್ಳೆಯ ನಡಿಗೆ ಮಾಡಿ. ನೀವು ಕುಡಿಯುತ್ತಿದ್ದರೆ, ವಾರಕ್ಕೆ ಒಂದೆರಡು ಪೆಗ್‌ಗಳಿಗೆ ಮಿತಿಗೊಳಿಸಿ. ‘ಕೆಲವು ದಿನ ಧೂಮಪಾನವನ್ನು ಬಿಡಬೇಡಿ’. ಯಾವುದಾದರೂ ಇರಲಿ, ಮಿತವಾಗಿರಲಿ. ನಿಮ್ಮ ದಿನಚರಿಯಲ್ಲಿ ಸ್ವಲ್ಪ ಮೌನ, ಧ್ಯಾನವನ್ನು ಸೇರಿಸಿ. ಅತ್ಯಂತ ಮುಖ್ಯವಾಗಿ, ನಿಮ್ಮ ದೇಹವನ್ನು ಆಲಿಸಿ. ಅದನ್ನು ಅರ್ಥಮಾಡಿಕೊಳ್ಳಿ.

40ರ ಹೊತ್ತಿಗೆ ದೇಹವು ಬಹಳಷ್ಟು ಬದಲಾವಣೆಗಳಿಗೆ ಒಳಗಾಗುತ್ತಿದೆ, 50 ವರ್ಷಗಳಿಗೆ ಇನ್ನೂ ಹೆಚ್ಚು, 60 ನಂತರ ನಿಮ್ಮ ದೇಹವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ, 70ರ ಮೇಲೆ, ನಿಮ್ಮ ದೇಹವು ಸ್ಥಗಿತಗೊಳ್ಳಲು ಪ್ರಾರಂಭಿಸುತ್ತದೆ, 80ರ ಮೇಲೆ ಪ್ರತಿ ವರ್ಷ ಬೋನಸ್ ಆಗಿದೆ…. ನೀವು 40 ಅಥವಾ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ನೀವು ಆರೋಗ್ಯವಂತರಾಗಿದ್ದರೆ ಕೃತಜ್ಞರಾಗಿರಿ…

ಹೀಗೆಹಲವು ಸಂಗತಿಗಳನ್ನು ದೇವಿ ಶೆಟ್ಟಿ ಅವರ ಹೆಸರಲ್ಲಿ ಹರಿಬಿಡಲಾಗಿದೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...