Homeಕರ್ನಾಟಕಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದೆ. ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆ” ಎಂಬ ವಿಚಾರವನ್ನು ಈ ಮೆಸೇಜ್‌ ಒಳಗೊಂಡಿದೆ. ಇದರ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯು ದೇವಿ ಶೆಟ್ಟಿ ಅವರಲ್ಲಿ ವಿಚಾರಿಸಿದ್ದು, “ಈ ರೀತಿಯ ಯಾವುದೇ ಸಂದೇಶವನ್ನು ನಾನು ನೀಡಿಲ್ಲ. ಜನರನ್ನು ದಿಕ್ಕು ತಪ್ಪಿಸಲು ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ ಆಪ್‌ ಮೆಸೇಜ್‌ ಹೀಗಿದೆ:

ಡಾ.ದೇವಿ ಶೆಟ್ಟಿ

ನನ್ನೆಲ್ಲ ಸ್ನೇಹಿತರಿಗೆ….

ಕೆಲವು ವರ್ಷಗಳಿಂದ ನನಗೆ ವೈಯಕ್ತಿಕವಾಗಿ ಪರಿಚಯವಿದ್ದ 8ರಿಂದ 9 ಮಂದಿ ಅಗಲಿದ್ದಾರೆ, ಅದರಲ್ಲಿ ನಲವತ್ತು ವರ್ಷ ವಯಸ್ಸಿಗೆ ಸಾವನ್ನಪ್ಪಿದ, ಅತಿಯಾದ ಫಿಟ್‌ನೆಟ್‌‌ ಮಾಡುತ್ತಿದ್ದ ಕೆಲವು ಸೆಲಬ್ರಟಿಗಳೂ ಇದ್ದಾರೆ. ಫಿಟ್‌ನೆಸ್‌, ಸಿಕ್ಸ್‌ಫ್ಯಾಕ್ಸ್‌‌ ಇತ್ಯಾದಿಗಳ ಕಡೆಗೆ ಅವರು ನೋಡುತ್ತಿದ್ದರು. ಈ ಪಟ್ಟಿಗೆ ಈಗ ಪುನೀತ್‌ ರಾಜ್‌ಕುಮಾರ್‌ ಸೇರಿದ್ದಾರೆ.

ಜೀವನದಲ್ಲಿ ಯಾವುದೇ ವಿಷಯದಲ್ಲಾದರೂ ಅತಿಯಾದದ್ದನ್ನು ತಪ್ಪಿಸುವುದು ಮಂತ್ರವಾಗಬೇಕು. ಶೂನ್ಯವಾಗಿರಬೇಕು ಅಥವಾ ನೂರನ್ನು ತಲುಪಬೇಕು ಎಂಬ ರೀತಿಯ ಅತಿಯಾದ ಅಲೋಚನೆ ಸರಿಯಾದದ್ದಲ್ಲ. ಇಪ್ಪತ್ತು ನಿಮಿಷಗಳ ಮಧ್ಯಮ ಪ್ರಮಾಣದ ವ್ಯಾಯಾಮ ಮಾಡಿರಿ, ನಿಮ್ಮ ಪೂರ್ವಜರು ತಿನ್ನುತ್ತಿದ್ದುದನ್ನು ಮಾತ್ರ ತಿನ್ನಿರಿ, ನಿಮ್ಮ ಊರಿನಲ್ಲಿರುವ ಸ್ಥಳೀಯ ಮತ್ತು ಕಾಲಕ್ಕೆ ಅನುಗುಣವಾದ ಆಹಾರವನ್ನು ಸೇವಿಸಿ, ಪೂರ್ಣ 7 ಗಂಟೆಗಳ ನಿದ್ದೆ ಮಾಡಿರಿ, ನಿಮ್ಮ ದೇಹಕ್ಕೆ ಸ್ಟೀರಾಯ್ಡ್ಗಳನ್ನು ನೀಡದೆ ಗೌರವಿಸಿರಿ…. ಇತ್ಯಾದಿಗಳನ್ನು ನೀವು ಮಾಡಬೇಕಾಗಿದೆ.

ನೀವು ಬೆಳೆದಿದ್ದನ್ನು ಸಣ್ಣ ಪ್ರಮಾಣದಲ್ಲಿ ತಿನ್ನಿ, 20 ನಿಮಿಷದಿಂದ 30 ನಿಮಿಷಗಳವರೆಗೆ ವ್ಯಾಯಾಮ ಮಾಡಿ… ಒಳ್ಳೆಯ ನಡಿಗೆ ಮಾಡಿ. ನೀವು ಕುಡಿಯುತ್ತಿದ್ದರೆ, ವಾರಕ್ಕೆ ಒಂದೆರಡು ಪೆಗ್‌ಗಳಿಗೆ ಮಿತಿಗೊಳಿಸಿ. ‘ಕೆಲವು ದಿನ ಧೂಮಪಾನವನ್ನು ಬಿಡಬೇಡಿ’. ಯಾವುದಾದರೂ ಇರಲಿ, ಮಿತವಾಗಿರಲಿ. ನಿಮ್ಮ ದಿನಚರಿಯಲ್ಲಿ ಸ್ವಲ್ಪ ಮೌನ, ಧ್ಯಾನವನ್ನು ಸೇರಿಸಿ. ಅತ್ಯಂತ ಮುಖ್ಯವಾಗಿ, ನಿಮ್ಮ ದೇಹವನ್ನು ಆಲಿಸಿ. ಅದನ್ನು ಅರ್ಥಮಾಡಿಕೊಳ್ಳಿ.

40ರ ಹೊತ್ತಿಗೆ ದೇಹವು ಬಹಳಷ್ಟು ಬದಲಾವಣೆಗಳಿಗೆ ಒಳಗಾಗುತ್ತಿದೆ, 50 ವರ್ಷಗಳಿಗೆ ಇನ್ನೂ ಹೆಚ್ಚು, 60 ನಂತರ ನಿಮ್ಮ ದೇಹವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ, 70ರ ಮೇಲೆ, ನಿಮ್ಮ ದೇಹವು ಸ್ಥಗಿತಗೊಳ್ಳಲು ಪ್ರಾರಂಭಿಸುತ್ತದೆ, 80ರ ಮೇಲೆ ಪ್ರತಿ ವರ್ಷ ಬೋನಸ್ ಆಗಿದೆ…. ನೀವು 40 ಅಥವಾ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ನೀವು ಆರೋಗ್ಯವಂತರಾಗಿದ್ದರೆ ಕೃತಜ್ಞರಾಗಿರಿ…

ಹೀಗೆಹಲವು ಸಂಗತಿಗಳನ್ನು ದೇವಿ ಶೆಟ್ಟಿ ಅವರ ಹೆಸರಲ್ಲಿ ಹರಿಬಿಡಲಾಗಿದೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...