Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ - ಕೊಹ್ಲಿ

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ ಆಧಾರದಲ್ಲಿ ಯಾರ ಮೇಲಾದರೂ ದಾಳಿ ಮಾಡಿದರೆ ಮನುಷ್ಯನಾಗಿ ಮಾಡಬಹುದಾದ ಅತ್ಯಂತ ಕರುಣಾಜನಕ ವಿಷಯ” ಎಂದು ಕೊಹ್ಲಿ ವಿಷಾಧ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಆದರೆ ಕೆಲವರ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ನಾನು ಎಂದಿಗೂ ಊಹಿಸಿರಲಿಲ್ಲ” ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ ಎಂದು ಕೊಹ್ಲಿ ಕಿಡಿಕಾರಿದ್ದಾರೆ.

ಜನರು ತಮ್ಮ ಹತಾಶೆಯನ್ನು ಹೊರಹಾಕುತ್ತಾರೆ. ಏಕೆಂದರೆ ಮೊಹಮ್ಮದ್ ಶಮಿ ಭಾರತದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂಬ ತಿಳುವಳಿಕೆ ಅವರಿಗಿಲ್ಲ. ಶಮಿಯವರ ಪ್ರಾಮಾಣಿಕತೆ, ದೇಶದ ಬಗೆಗಿನ ಬದ್ಧತೆಯನ್ನು ಅರ್ಥಮಾಡಿಕೊಳ್ಳದ ಜನರೊಂದಿಗೆ ಒಂದು ನಿಮಿಷವನ್ನು ಸಹ ವ್ಯರ್ಥಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.


ಇದನ್ನೂ ಓದಿ; ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...