Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ - ಕೊಹ್ಲಿ

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ ಆಧಾರದಲ್ಲಿ ಯಾರ ಮೇಲಾದರೂ ದಾಳಿ ಮಾಡಿದರೆ ಮನುಷ್ಯನಾಗಿ ಮಾಡಬಹುದಾದ ಅತ್ಯಂತ ಕರುಣಾಜನಕ ವಿಷಯ” ಎಂದು ಕೊಹ್ಲಿ ವಿಷಾಧ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳುವ ಹಕ್ಕಿದೆ. ಆದರೆ ಕೆಲವರ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದನ್ನು ನಾನು ಎಂದಿಗೂ ಊಹಿಸಿರಲಿಲ್ಲ” ಎಂದು ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ನಾವು ಒಳ್ಳೆಯ ಉದ್ದೇಶಕ್ಕಾಗಿ ಮೈದಾನದಲ್ಲಿ ಆಡುತ್ತಿದ್ದೇವೆಯೇ ಹೊರತು ಸಾಮಾಜಿಕ ಮಾಧ್ಯಮಗಳಲ್ಲಿನ ಬೆನ್ನುಮೂಳೆಯಿಲ್ಲದ ಜನರ ಗುಂಪಿನಂತಲ್ಲ. ಅವರಿಗೆ ಕೇವಲ ಒಬ್ಬ ವ್ಯಕ್ತಿಯನ್ನು ಸಹ ನೇರವಾಗಿ ಎದುರಿಸಲು ಸಾಧ್ಯವಿಲ್ಲ. ಅವರು ತಮ್ಮ ಗುರುತನ್ನು ಮರೆಮಾಚಿ ಸಾಮಾಜಿಕ ಮಾಧ್ಯಮಗಳಲ್ಲಿ ಗೇಲಿ ಮಾಡುತ್ತಾರೆ. ಇದು ಕೆಲವರಿಗೆ ಮನರಂಜನೆಯ ಮೂಲವಾಗಿರುವುದು ದುರದೃಷ್ಟಕರ ಮತ್ತು ದುಃಖದ ವಿಷಯವಾಗಿದೆ. ಇದು ಅಕ್ಷರಶಃ ಒಬ್ಬ ಮನುಷ್ಯ ಅತಿ ಕೆಳಮಟ್ಟದ ಕೃತ್ಯವಾಗಿದೆ ಎಂದು ಕೊಹ್ಲಿ ಕಿಡಿಕಾರಿದ್ದಾರೆ.

ಜನರು ತಮ್ಮ ಹತಾಶೆಯನ್ನು ಹೊರಹಾಕುತ್ತಾರೆ. ಏಕೆಂದರೆ ಮೊಹಮ್ಮದ್ ಶಮಿ ಭಾರತದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂಬ ತಿಳುವಳಿಕೆ ಅವರಿಗಿಲ್ಲ. ಶಮಿಯವರ ಪ್ರಾಮಾಣಿಕತೆ, ದೇಶದ ಬಗೆಗಿನ ಬದ್ಧತೆಯನ್ನು ಅರ್ಥಮಾಡಿಕೊಳ್ಳದ ಜನರೊಂದಿಗೆ ಒಂದು ನಿಮಿಷವನ್ನು ಸಹ ವ್ಯರ್ಥಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಅವರ ಬೆಂಬಲಕ್ಕೆ 200 ಪರ್ಸೆಂಟ್ ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.


ಇದನ್ನೂ ಓದಿ; ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...