Homeಮುಖಪುಟಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಪ್ರಧಾನಿ ಮೋದಿಯವರು ನವೆಂಬರ್‌ 5ರಂದು ಉತ್ತರಖಾಂಡ್‌ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕೇದಾರನಾಥ ದೇವಾಲಯ ಪುರೋಹಿತರ ಪ್ರತಿಭಟನೆಯ ಬಿಸಿಯನ್ನು ಎದುರಿಸಬೇಕಾಗಿದೆ.

- Advertisement -
- Advertisement -

ನವೆಂಬರ್‌ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥಕ್ಕೆ ಭೇಟಿ ನೀಡಲಿದ್ದು, ಪ್ರಧಾನಿಯವರನ್ನು ಭೇಟಿ ಮಾಡಲು ಅವಕಾಶ ನೀಡದಿದ್ದರೆ ವೇದಿಕೆ ಪ್ರತಿಭಟನೆ ಮಾಡಲಾಗುವುದು ಎಂದು ತೀರ್ಥ ಪುರೋಹಿತರು (ಯಾತ್ರಾ ಪುರೋಹಿತರು) ಎಚ್ಚರಿಸಿದ್ದಾರೆ.

ಉತ್ತರಖಾಂಡ್‌ ಚಾರ್ ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ಬೋರ್ಡ್‌ ರಚಿಸಿ ಅದರ ಅಡಿಯಲ್ಲಿ ದೇವಾಲಯಗಳನ್ನು ಹಿಡಿತಕ್ಕೆ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿ, ಪ್ರಧಾನಿಯವರ ಭೇಟಿಯನ್ನು ಬಹಿಷ್ಕರಿಸಲು ಪುರೋಹಿತರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿಯವರು ಅಂದು ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಭೆ ಅನಾವರಣ ಮಾಡಲಿದ್ದಾರೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಗಳಿಗೆ ಚಾಲನೆ ನೀಡಲಿದ್ದಾರೆ.

“ಚಾರ್‌ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ರದ್ದುಗೊಳಿಸಲು ಆಗ್ರಹಿಸಿ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲು ಪದೇ ಪದೇ ಕೋರಲಾಗುತ್ತಿದೆ. ಆದರೆ ಅದಕ್ಕೆ ಮೋದಿಯವರು ಅವಕಾಶ ನೀಡುತ್ತಿಲ್ಲ” ಎಂದು ಪುರೋಹಿತರು ಬೇಸರ ವ್ಯಕ್ತಪಡಿಸಿದ್ದಾರೆ.

ಚಾರ್‌ಧಾಮ್‌ ಕಾಯಿದೆಯು ನಮ್ಮ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ, ಮಂಡಳಿಯ ವ್ಯಾಪ್ತಿಯಲ್ಲಿರುವ ದೇವಾಲಯದ ಆವರಣಗಳಲ್ಲಿನ ನಮ್ಮ ಆಸ್ತಿಗಳ ಮಾಲೀಕತ್ವವನ್ನು ಕಸಿದುಕೊಂಡಿದೆ. ಹೀಗಾಗಿ ಮೋದಿ ವಿರುದ್ಧ ನಮ್ಮ ದನಿಯನ್ನು ಎತ್ತಿದ್ದೇವೆ ಎಂದು ಬದ್ರಿನಾಥದ ಪುರೋಹಿತ ಹಾಗೂ ಚಾರ್‌ಧಾಮ್‌ ತೀರ್ಥ ಪುರೋಹಿತ್‌ ಹಕ್‌ಹುತುಕ್‌ ಮಹಾ ಪಂಚಾಯತ್‌‌ ಅಧ್ಯಕ್ಷ ಕೆ.ಕೆ.ಕೋಟಿಯಾಲ್‌‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

“ಪ್ರಧಾನಿ ಭೇಟಿಗೆ ಮುನ್ನ ರಾಜ್ಯ ಸರ್ಕಾರವು ಬೋರ್ಡ್ ಅನ್ನು ರದ್ದುಪಡಿಸುತ್ತದೆ ಎಂದು ಚಾರ್ ಧಾಮ್ ತೀರ್ಥ ಪುರೋಹಿತರು ನಂಬಿದ್ದೇವೆ. ಇಲ್ಲದಿದ್ದರೆ ನಾವು ಕೇದಾರನಾಥದಲ್ಲಿ ಪ್ರತಿಭಟನೆಗೆ ಸಿದ್ಧರಿದ್ದೇವೆ” ಎಂದು ಕೋಟಿಯಾಲ್‌ ಎಚ್ಚರಿಕೆ ನೀಡಿದ್ದಾರೆ.

“ಪ್ರತಿಭಟನೆ ಕೇವಲ ಘೋಷಣೆಗಳಿಗೆ ಸೀಮಿತವಾಗುವುದಿಲ್ಲ, ಪ್ರಧಾನಿ ಲ್ಯಾಡ್‌ ಆಗಲು ಬಿಡುವುದಿಲ್ಲ. ನಾವು ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ. ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ತೋರಿಸಿ ಬಂದ್‌ಗೆ ಕರೆ ನೀಡುತ್ತೇವೆ” ಎಂದು ಸ್ಥಳೀಯ ಪುರೋಹಿತರ ಸಂಘವಾಗಿರುವ ಕೇದಾರನಾಥ ಸಭಾದ ಅಧ್ಯಕ್ಷ ವಿನೋದ್ ಶುಕ್ಲಾ ಹೇಳಿದ್ದಾರೆ.

ಅಕ್ಟೋಬರ್ 11ರ ಸಭೆಯ ನಂತರ ಬೋರ್ಡ್ ಅನ್ನು ರದ್ದುಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೀಡಿದ್ದರು. ಅಕ್ಟೋಬರ್ 30ರವರೆಗೆ ಪ್ರತಿಭಟನೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ನವೆಂಬರ್ 1ರಿಂದ ನಾವು ನಮ್ಮ ಪ್ರತಿಭಟನೆಯನ್ನು ಪುನಾರಂಭಿಸುತ್ತಿದ್ದೇವೆ” ಎಂದಿದ್ದಾರೆ ಶುಕ್ಲಾ.

ಮತ್ತೊಬ್ಬ ಅರ್ಚಕ, ಚಾರ್ ಧಾಮ್ ಮಹಾ ಪಂಚಾಯತ್‌ನ ಸಂಚಾಲಕ ಮತ್ತು ಗಂಗೋತ್ರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುರೇಶ್ ಸೆಂವಾಲ್ ಪ್ರತಿಕ್ರಿಯಿಸಿ, “ಚಾರ್ ಧಾಮ್ ದೇವಾಸ್ಥಾನಂ ಆಡಳಿತ ಮಂಡಳಿ ಕಾಯಿದೆಯು ಒಂದು ಕರಾಳ ಕಾನೂನು” ಎಂದಿದ್ದಾರೆ.

ಇದನ್ನೂ ಓದಿರಿ: ಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

“ಚಾರ್ ಧಾಮ್ ದೇವಾಲಯಗಳ ಪುರೋಹಿತರು ಕೇದಾರನಾಥದಲ್ಲಿ ಪ್ರಧಾನಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇತರ ಧರ್ಮಗಳಿಗೆ ಕಾನೂನು ಇಲ್ಲದಿರುವಾಗ ಕೇವಲ ಹಿಂದೂ ದೇವಾಲಯಗಳ ಮೇಲೆ ಸರ್ಕಾರ ಏಕೆ ಹೀಗೆ ಮಾಡುತ್ತಿದೆ? ಅವರು ತಮ್ಮ ವ್ಯಾಪ್ತಿಯಲ್ಲಿರುವ ಯಾವುದೇ ಮಸೀದಿ ಅಥವಾ ಚರ್ಚ್‌ಗಳನ್ನು ತೆಗೆದುಕೊಂಡಿಲ್ಲ” ಎಂದು ಸುರೇಶ್ ಸೆಂವಾಲ್‌ ಹೇಳಿದ್ದಾರೆ.

ಏನಿದು ವಿವಾದ?

2019ರ ಡಿಸೆಂಬರ್‌ನಲ್ಲಿ ಉತ್ತರಖಾಂಡ್‌ ಸರ್ಕಾರವು ಉತ್ತರ ಖಾಂಡ್‌ ಚಾರ್‌ ಧಮ್‌ ಶ್ರೈನ್‌ ಮ್ಯಾನೇಜ್‌ಮೆಂಟ್ ಮಸೂದೆಯನ್ನು ಮಂಡಿಸಿತು. ಈ ಮಸೂದೆಯು ಶಾಸನ ಸಭೆಯಲ್ಲಿ ಅಂಗೀಕಾರವಾಗಿ ಉತ್ತರಖಾಂಡ್‌ ಚಾರ್‌ ಧಮ್‌ ದೇವಸ್ಥಾನಮ್‌‌ ಮ್ಯಾನೇಜ್‌ಮೆಂಟ್‌ ಆಕ್ಟ್‌- 2019 ಜಾರಿಗೊಳಿಸಿ, 2020 ಜನವರಿ 15ರಂದು ಗೆಜೆಟ್‌ ನೋಟಿಫಿಕೇಷನ್‌ ಕೂಡ ಮಾಡಲಾಯಿತು.

ಈ ಬೋರ್ಡ್‌‌ನಲ್ಲಿ ಮುಖ್ಯಮಂತ್ರಿ ಅಧ್ಯಕ್ಷರಾಗಿರುತ್ತಾರೆ. ರಾಜ್ಯದ ಸಂಸ್ಕೃತಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಇತರ ಪದಾಧಿಕಾರಿಗಳೊಂದಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಈ ಮಂಡಲಿ ರಚನೆಯಾದಾಗಿನಿಂದಲೂ ಪುರೋಹಿತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬದ್ರಿ ಕೇದಾರನಾಥ ದೇವಾಲಯ ಸಮಿತಿ ಮುಖ್ಯಸ್ಥ ಮನೋಹರ್ ಕಾಂತ್ ಧ್ಯಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಳೆದ ಜುಲೈನಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಅಕ್ಟೋಬರ್ 25ರಂದು ಧ್ಯಾನಿ ಸಮಿತಿಯು ಮಧ್ಯಂತರ ವರದಿಯನ್ನು ಸಿಎಂಗೆ ಸಲ್ಲಿಸಿತು.

ಪ್ರಸ್ತುತ, ಉತ್ತರಾಖಂಡ್ ಚಾರ್ ಧಾಮ್ ದೇವಸ್ತಾನಂ ಮಂಡಳಿಯು ರಾಜ್ಯದ 51 ದೇವಾಲಯಗಳ ವ್ಯವಹಾರಗಳನ್ನು ನಿರ್ವಹಿಸುವ ನಿಯಂತ್ರಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇವುಗಳಲ್ಲಿ ಗಂಗೋತ್ರಿ, ಯಮುನೋತ್ರಿ, ಬದರಿನಾಥ, ಕೇದಾರನಾಥ ಮತ್ತು 47 ಇತರ ದೇವಾಲಯಗಳು ಸೇರಿವೆ.

ಎಲ್ಲಾ ಚಾರ್ ಧಾಮ್ ದೇಗುಲಗಳು ಮತ್ತು ಅವುಗಳ ಸಂಯೋಜಿತ ದೇವಾಲಯಗಳ ಅರ್ಚಕರು, ಪುರೋಹಿತರು ಅತಿದೊಡ್ಡ ಮಧ್ಯಸ್ಥಗಾರರಾಗಿದ್ದಾರೆ. ಆದರೆ ದೇವಸ್ಥಾನಂ ಬೋರ್ಡ್ ಕಾನೂನನ್ನು ರೂಪಿಸುವ ಮೊದಲು ಉತ್ತರಾಖಂಡ ಸರ್ಕಾರವು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಪುರೋಹಿತರು ಆರೋಪಿಸಿದ್ದಾರೆ.

“ಎಲ್ಲಾ ನಾಲ್ಕು ಚಾರ್ ಧಾಮ್ ದೇಗುಲಗಳಲ್ಲಿ ಮತ್ತು ಅವರಿಗೆ ಸಂಯೋಜಿತವಾಗಿರುವ ದೇವಾಲಯಗಳಲ್ಲಿ ತೀರ್ಥಯಾತ್ರೆ ಪುರೋಹಿತರು ಮಾತ್ರ ತಮ್ಮ ಹಕ್ಕನ್ನು ಹೊಂದಿದ್ದಾರೆ. ಸರ್ಕಾರ ಕಾನೂನು ರೂಪಿಸುವ ಮುನ್ನ ಅವರ ಸಲಹೆ ಕೇಳಬೇಕಿತ್ತು. ಆದರೆ ಕೇಳಲಿಲ್ಲ. ಚಾರ್ ಧಾಮ್ ಅರ್ಚಕರ ಭೂಮಿ ಹಕ್ಕನ್ನು ಕಸಿದುಕೊಂಡು ಅವರ ಆಸ್ತಿಯನ್ನು ದೇವಸ್ಥಾನಂ. ಮಂಡಳಿಯ ಸ್ವಾಧೀನದಲ್ಲಿಡಲು ಉದ್ದೇಶಿಸಲಾಗಿದೆ” ಎಂದು ಗಂಗೋತ್ರಿ ದೇವಸ್ಥಾನ ಸಮಿತಿಯ ವಕ್ತಾರ ರಜನಿಕಾಂತ್ ಸೆಮ್ವಾಲ್ ಹೇಳಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...