Homeಮುಖಪುಟಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಮೋದಿ ಲ್ಯಾಂಡ್‌‌ ಆಗಲು ಬಿಡುವುದಿಲ್ಲ; ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ: ಪುರೋಹಿತರ ಬೆದರಿಕೆ

ಪ್ರಧಾನಿ ಮೋದಿಯವರು ನವೆಂಬರ್‌ 5ರಂದು ಉತ್ತರಖಾಂಡ್‌ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕೇದಾರನಾಥ ದೇವಾಲಯ ಪುರೋಹಿತರ ಪ್ರತಿಭಟನೆಯ ಬಿಸಿಯನ್ನು ಎದುರಿಸಬೇಕಾಗಿದೆ.

- Advertisement -
- Advertisement -

ನವೆಂಬರ್‌ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥಕ್ಕೆ ಭೇಟಿ ನೀಡಲಿದ್ದು, ಪ್ರಧಾನಿಯವರನ್ನು ಭೇಟಿ ಮಾಡಲು ಅವಕಾಶ ನೀಡದಿದ್ದರೆ ವೇದಿಕೆ ಪ್ರತಿಭಟನೆ ಮಾಡಲಾಗುವುದು ಎಂದು ತೀರ್ಥ ಪುರೋಹಿತರು (ಯಾತ್ರಾ ಪುರೋಹಿತರು) ಎಚ್ಚರಿಸಿದ್ದಾರೆ.

ಉತ್ತರಖಾಂಡ್‌ ಚಾರ್ ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ಬೋರ್ಡ್‌ ರಚಿಸಿ ಅದರ ಅಡಿಯಲ್ಲಿ ದೇವಾಲಯಗಳನ್ನು ಹಿಡಿತಕ್ಕೆ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿ, ಪ್ರಧಾನಿಯವರ ಭೇಟಿಯನ್ನು ಬಹಿಷ್ಕರಿಸಲು ಪುರೋಹಿತರು ಸಜ್ಜಾಗಿದ್ದಾರೆ.

ಪ್ರಧಾನಿ ಮೋದಿಯವರು ಅಂದು ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪ್ರತಿಭೆ ಅನಾವರಣ ಮಾಡಲಿದ್ದಾರೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಗಳಿಗೆ ಚಾಲನೆ ನೀಡಲಿದ್ದಾರೆ.

“ಚಾರ್‌ಧಾಮ್‌ ದೇವಸ್ಥಾನಮ್‌ ಮ್ಯಾನೇಜ್‌ಮೆಂಟ್‌ ರದ್ದುಗೊಳಿಸಲು ಆಗ್ರಹಿಸಿ ಪ್ರಧಾನಿ ಮೋದಿ ಅವರೊಂದಿಗೆ ಸಭೆ ನಡೆಸಲು ಪದೇ ಪದೇ ಕೋರಲಾಗುತ್ತಿದೆ. ಆದರೆ ಅದಕ್ಕೆ ಮೋದಿಯವರು ಅವಕಾಶ ನೀಡುತ್ತಿಲ್ಲ” ಎಂದು ಪುರೋಹಿತರು ಬೇಸರ ವ್ಯಕ್ತಪಡಿಸಿದ್ದಾರೆ.

ಚಾರ್‌ಧಾಮ್‌ ಕಾಯಿದೆಯು ನಮ್ಮ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ, ಮಂಡಳಿಯ ವ್ಯಾಪ್ತಿಯಲ್ಲಿರುವ ದೇವಾಲಯದ ಆವರಣಗಳಲ್ಲಿನ ನಮ್ಮ ಆಸ್ತಿಗಳ ಮಾಲೀಕತ್ವವನ್ನು ಕಸಿದುಕೊಂಡಿದೆ. ಹೀಗಾಗಿ ಮೋದಿ ವಿರುದ್ಧ ನಮ್ಮ ದನಿಯನ್ನು ಎತ್ತಿದ್ದೇವೆ ಎಂದು ಬದ್ರಿನಾಥದ ಪುರೋಹಿತ ಹಾಗೂ ಚಾರ್‌ಧಾಮ್‌ ತೀರ್ಥ ಪುರೋಹಿತ್‌ ಹಕ್‌ಹುತುಕ್‌ ಮಹಾ ಪಂಚಾಯತ್‌‌ ಅಧ್ಯಕ್ಷ ಕೆ.ಕೆ.ಕೋಟಿಯಾಲ್‌‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

“ಪ್ರಧಾನಿ ಭೇಟಿಗೆ ಮುನ್ನ ರಾಜ್ಯ ಸರ್ಕಾರವು ಬೋರ್ಡ್ ಅನ್ನು ರದ್ದುಪಡಿಸುತ್ತದೆ ಎಂದು ಚಾರ್ ಧಾಮ್ ತೀರ್ಥ ಪುರೋಹಿತರು ನಂಬಿದ್ದೇವೆ. ಇಲ್ಲದಿದ್ದರೆ ನಾವು ಕೇದಾರನಾಥದಲ್ಲಿ ಪ್ರತಿಭಟನೆಗೆ ಸಿದ್ಧರಿದ್ದೇವೆ” ಎಂದು ಕೋಟಿಯಾಲ್‌ ಎಚ್ಚರಿಕೆ ನೀಡಿದ್ದಾರೆ.

“ಪ್ರತಿಭಟನೆ ಕೇವಲ ಘೋಷಣೆಗಳಿಗೆ ಸೀಮಿತವಾಗುವುದಿಲ್ಲ, ಪ್ರಧಾನಿ ಲ್ಯಾಡ್‌ ಆಗಲು ಬಿಡುವುದಿಲ್ಲ. ನಾವು ಹೆಲಿಪ್ಯಾಡ್‌ನಲ್ಲೇ ಮಲಗುತ್ತೇವೆ. ಅವರ ಭೇಟಿಯನ್ನು ವಿರೋಧಿಸಿ ಕಪ್ಪು ಬಾವುಟ ತೋರಿಸಿ ಬಂದ್‌ಗೆ ಕರೆ ನೀಡುತ್ತೇವೆ” ಎಂದು ಸ್ಥಳೀಯ ಪುರೋಹಿತರ ಸಂಘವಾಗಿರುವ ಕೇದಾರನಾಥ ಸಭಾದ ಅಧ್ಯಕ್ಷ ವಿನೋದ್ ಶುಕ್ಲಾ ಹೇಳಿದ್ದಾರೆ.

ಅಕ್ಟೋಬರ್ 11ರ ಸಭೆಯ ನಂತರ ಬೋರ್ಡ್ ಅನ್ನು ರದ್ದುಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೀಡಿದ್ದರು. ಅಕ್ಟೋಬರ್ 30ರವರೆಗೆ ಪ್ರತಿಭಟನೆಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ನವೆಂಬರ್ 1ರಿಂದ ನಾವು ನಮ್ಮ ಪ್ರತಿಭಟನೆಯನ್ನು ಪುನಾರಂಭಿಸುತ್ತಿದ್ದೇವೆ” ಎಂದಿದ್ದಾರೆ ಶುಕ್ಲಾ.

ಮತ್ತೊಬ್ಬ ಅರ್ಚಕ, ಚಾರ್ ಧಾಮ್ ಮಹಾ ಪಂಚಾಯತ್‌ನ ಸಂಚಾಲಕ ಮತ್ತು ಗಂಗೋತ್ರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುರೇಶ್ ಸೆಂವಾಲ್ ಪ್ರತಿಕ್ರಿಯಿಸಿ, “ಚಾರ್ ಧಾಮ್ ದೇವಾಸ್ಥಾನಂ ಆಡಳಿತ ಮಂಡಳಿ ಕಾಯಿದೆಯು ಒಂದು ಕರಾಳ ಕಾನೂನು” ಎಂದಿದ್ದಾರೆ.

ಇದನ್ನೂ ಓದಿರಿ: ಸತತ ನಾಲ್ಕನೇ ದಿನವೂ ಪೆಟ್ರೊಲ್‌, ಡೀಸೆಲ್‌ ಬೆಲೆ ಏರಿಕೆ

“ಚಾರ್ ಧಾಮ್ ದೇವಾಲಯಗಳ ಪುರೋಹಿತರು ಕೇದಾರನಾಥದಲ್ಲಿ ಪ್ರಧಾನಿ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇತರ ಧರ್ಮಗಳಿಗೆ ಕಾನೂನು ಇಲ್ಲದಿರುವಾಗ ಕೇವಲ ಹಿಂದೂ ದೇವಾಲಯಗಳ ಮೇಲೆ ಸರ್ಕಾರ ಏಕೆ ಹೀಗೆ ಮಾಡುತ್ತಿದೆ? ಅವರು ತಮ್ಮ ವ್ಯಾಪ್ತಿಯಲ್ಲಿರುವ ಯಾವುದೇ ಮಸೀದಿ ಅಥವಾ ಚರ್ಚ್‌ಗಳನ್ನು ತೆಗೆದುಕೊಂಡಿಲ್ಲ” ಎಂದು ಸುರೇಶ್ ಸೆಂವಾಲ್‌ ಹೇಳಿದ್ದಾರೆ.

ಏನಿದು ವಿವಾದ?

2019ರ ಡಿಸೆಂಬರ್‌ನಲ್ಲಿ ಉತ್ತರಖಾಂಡ್‌ ಸರ್ಕಾರವು ಉತ್ತರ ಖಾಂಡ್‌ ಚಾರ್‌ ಧಮ್‌ ಶ್ರೈನ್‌ ಮ್ಯಾನೇಜ್‌ಮೆಂಟ್ ಮಸೂದೆಯನ್ನು ಮಂಡಿಸಿತು. ಈ ಮಸೂದೆಯು ಶಾಸನ ಸಭೆಯಲ್ಲಿ ಅಂಗೀಕಾರವಾಗಿ ಉತ್ತರಖಾಂಡ್‌ ಚಾರ್‌ ಧಮ್‌ ದೇವಸ್ಥಾನಮ್‌‌ ಮ್ಯಾನೇಜ್‌ಮೆಂಟ್‌ ಆಕ್ಟ್‌- 2019 ಜಾರಿಗೊಳಿಸಿ, 2020 ಜನವರಿ 15ರಂದು ಗೆಜೆಟ್‌ ನೋಟಿಫಿಕೇಷನ್‌ ಕೂಡ ಮಾಡಲಾಯಿತು.

ಈ ಬೋರ್ಡ್‌‌ನಲ್ಲಿ ಮುಖ್ಯಮಂತ್ರಿ ಅಧ್ಯಕ್ಷರಾಗಿರುತ್ತಾರೆ. ರಾಜ್ಯದ ಸಂಸ್ಕೃತಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಇತರ ಪದಾಧಿಕಾರಿಗಳೊಂದಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಈ ಮಂಡಲಿ ರಚನೆಯಾದಾಗಿನಿಂದಲೂ ಪುರೋಹಿತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬದ್ರಿ ಕೇದಾರನಾಥ ದೇವಾಲಯ ಸಮಿತಿ ಮುಖ್ಯಸ್ಥ ಮನೋಹರ್ ಕಾಂತ್ ಧ್ಯಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಳೆದ ಜುಲೈನಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಅಕ್ಟೋಬರ್ 25ರಂದು ಧ್ಯಾನಿ ಸಮಿತಿಯು ಮಧ್ಯಂತರ ವರದಿಯನ್ನು ಸಿಎಂಗೆ ಸಲ್ಲಿಸಿತು.

ಪ್ರಸ್ತುತ, ಉತ್ತರಾಖಂಡ್ ಚಾರ್ ಧಾಮ್ ದೇವಸ್ತಾನಂ ಮಂಡಳಿಯು ರಾಜ್ಯದ 51 ದೇವಾಲಯಗಳ ವ್ಯವಹಾರಗಳನ್ನು ನಿರ್ವಹಿಸುವ ನಿಯಂತ್ರಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇವುಗಳಲ್ಲಿ ಗಂಗೋತ್ರಿ, ಯಮುನೋತ್ರಿ, ಬದರಿನಾಥ, ಕೇದಾರನಾಥ ಮತ್ತು 47 ಇತರ ದೇವಾಲಯಗಳು ಸೇರಿವೆ.

ಎಲ್ಲಾ ಚಾರ್ ಧಾಮ್ ದೇಗುಲಗಳು ಮತ್ತು ಅವುಗಳ ಸಂಯೋಜಿತ ದೇವಾಲಯಗಳ ಅರ್ಚಕರು, ಪುರೋಹಿತರು ಅತಿದೊಡ್ಡ ಮಧ್ಯಸ್ಥಗಾರರಾಗಿದ್ದಾರೆ. ಆದರೆ ದೇವಸ್ಥಾನಂ ಬೋರ್ಡ್ ಕಾನೂನನ್ನು ರೂಪಿಸುವ ಮೊದಲು ಉತ್ತರಾಖಂಡ ಸರ್ಕಾರವು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಪುರೋಹಿತರು ಆರೋಪಿಸಿದ್ದಾರೆ.

“ಎಲ್ಲಾ ನಾಲ್ಕು ಚಾರ್ ಧಾಮ್ ದೇಗುಲಗಳಲ್ಲಿ ಮತ್ತು ಅವರಿಗೆ ಸಂಯೋಜಿತವಾಗಿರುವ ದೇವಾಲಯಗಳಲ್ಲಿ ತೀರ್ಥಯಾತ್ರೆ ಪುರೋಹಿತರು ಮಾತ್ರ ತಮ್ಮ ಹಕ್ಕನ್ನು ಹೊಂದಿದ್ದಾರೆ. ಸರ್ಕಾರ ಕಾನೂನು ರೂಪಿಸುವ ಮುನ್ನ ಅವರ ಸಲಹೆ ಕೇಳಬೇಕಿತ್ತು. ಆದರೆ ಕೇಳಲಿಲ್ಲ. ಚಾರ್ ಧಾಮ್ ಅರ್ಚಕರ ಭೂಮಿ ಹಕ್ಕನ್ನು ಕಸಿದುಕೊಂಡು ಅವರ ಆಸ್ತಿಯನ್ನು ದೇವಸ್ಥಾನಂ. ಮಂಡಳಿಯ ಸ್ವಾಧೀನದಲ್ಲಿಡಲು ಉದ್ದೇಶಿಸಲಾಗಿದೆ” ಎಂದು ಗಂಗೋತ್ರಿ ದೇವಸ್ಥಾನ ಸಮಿತಿಯ ವಕ್ತಾರ ರಜನಿಕಾಂತ್ ಸೆಮ್ವಾಲ್ ಹೇಳಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...