Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...