Homeಕರ್ನಾಟಕಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

- Advertisement -
- Advertisement -

“ಅವರೊಂದಿಗೆ ನಾನು ಎರಡು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ಗುಣವನ್ನು ಹೊಂದಿರಬಲ್ಲ ಎಂಬುದನ್ನು ನೋಡಿದ್ದೇನೆ” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತು ಹೇಳಿದ್ದಾರೆ.

ಮಿಲನ ಹಾಗೂ ಪೃಥ್ವಿ ಸಿನಿಮಾಗಳಲ್ಲಿ ಅಪ್ಪು ಅವರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಮಲಯಾಳಂ ಚಿತ್ರರಂಗದ ಪ್ರಖ್ಯಾತ ನಟಿ ಪಾರ್ವತಿ ಅವರು ಅಪ್ಪು ಅವರೊಂದಿಗಿನ ಒಡನಾಟವನ್ನು ‘ದಿ ನ್ಯೂಸ್‌ ಮಿನಿಟ್‌’ನೊಂದಿಗೆ ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ಜನಸಾಮಾನ್ಯರ ನಡುವೆ ವಿನಯವಂತರಾಗಿ ಬದುಕಿದ ಪುನೀತ್ ರಾಜ್‌ಕುಮಾರ್‌ ಅವರ ನೆನಪುಗಳು ಅಜರಾಮರವಾಗಿವೆ. ಅವರು ನಿಧನರಾದಾಗಿನಿಂದಲೂ ಅಭಿಮಾನಿಗಳು, ಕನ್ನಡ ಚಿತ್ರರಂಗ, ಬಹುಭಾಷೆಗಳ ನಟರು ದುಃಖ ತಪ್ತರಾಗಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಮಲಯಾಳಂ ಚಿತ್ರರಂಗದ ಬಹುತೇಕ ನಟ, ನಟಿಯರು ತೀವ್ರ ಸಂತಾಪ ಸೂಚಿಸಿದ್ದು, ‘ದಿ ನ್ಯೂಸ್ ಮಿನಿಟ್‌’ ಜೊತೆ ಮಾತನಾಡಿರುವ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪಾರ್ವತಿ ತಿರುವೊತು ಅವರು, ಪುನೀತ್‌ ರಾಜ್‌ಕುಮಾರ್‌ ಅವರನ್ನು ಮೊದಲ ಬಾರಿಗೆ ಭೇಟಿಯಾದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಸುಮಾರು 18 ವರ್ಷದವರಾಗಿದ್ದಾಗ ಮಿಲನ ಸಿನಿಮಾದ ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳಲು ಹೋಗಿದ್ದಾಗ ಮೊದಲ ಬಾರಿಗೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ಭೇಟಿಯಾದೆ ಎಂದಿದ್ದಾರೆ.

“ಸುಮಾರು 18-19 ವರ್ಷದವಳಾಗಿದ್ದಾಗ ಅವರನ್ನು ಮೊದಲ ಬಾರಿಗೆ ಭೇಟಿಯಾದೆ. ಮಿಲನ ಸಿನಿಮಾದ ಫೋಟೋ ಶೂಟ್‌ಗಾಗಿ ತೆರಳಿದ್ದಾಗ ಅವರು ಪರಿಚಯವಾದರು. ದಿಢೀರನೇ ಅವರು ಬಂದಾಗ, ‘ಅಪ್ಪು ಬಂದರು’, ‘ಅಪ್ಪು ಅಣ್ಣ ಬಂದರು’ ಎಂದರು. ಫೋಟೋಶೂಟ್‌ಗಾಗಿ ನನ್ನನ್ನು ಅವರು ಎಷ್ಟೊಂದು ಆರಾಮವಾಗಿಸಿದ್ದರು, ಸಿದ್ಧವಾಗಿಸಿದ್ದರು ಎಂಬುದನ್ನು ಈಗಲೂ ನೆನಪಿಸಿಕೊಳ್ಳಬಲ್ಲೆ” ಎಂದು ತಿಳಿಸಿದ್ದಾರೆ.

ಮಿಲನ ಸಿನಿಮಾದಲ್ಲಿ ಅಭಿನಯಿಸುವಾಗಿನ ಮತ್ತೊಂದು ಅನುಭವವನ್ನು ಹಂಚಿಕೊಂಡಿರುವ ಪಾರ್ವತಿ ಅವರು, “ಅವರು ತುಂಬಾ ನಗುತ್ತಿದ್ದರು. ಸಂಗತಿಗಳನ್ನು ಹಗುರಗೊಳಿಸಲು ಹೊಸ ದಾರಿಗಳನ್ನು ಹುಡುಕುತ್ತಿದ್ದರು. ಕಡಲು ಮತ್ತು ಶೀತಮಯ ಪ್ರದೇಶವಾದ ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆದಿತ್ತು. ಮತ್ತೊಂದು ಸಿನಿಮಾ ಪೃಥ್ವಿಯಲ್ಲಿ ನಾವು ಅಭಿನಯಿಸಿದೆವು” ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಸಿನಿಮಾ ಹಾಗೂ ನಿಜ ಜೀವನದ ಆತ್ಮೀಯನ್ನು ಸ್ಮರಿಸಿರುವ ಪಾರ್ವತಿ ಅವರು, “ಕನ್ನಡದೊಂದಿಗೆ ಅವರು ನನಗೆ ಅನೇಕ ಸಲ ಸಹಾಯ ಮಾಡುತ್ತಿದ್ದರು. ಆದರೆ ನಾವು ಬಹುತೇಕ ಸಮಯ ಸಿನಿಮಾ ಹಾಗೂ ನಿಜ ಜೀವನದ ಕುರಿತು ಮಾತುನಾಡುತ್ತಿದ್ದೆವು. ಸೆಟ್‌‌ನಲ್ಲಿ ಎಲ್ಲರಿಗೂ ಅವಕಾಶ ನೀಡಲು ಅವರು ಎಚ್ಚರಿಕೆ ವಹಿಸುತ್ತಿದ್ದರು. ಅವರು ಸಮಯಪ್ರಜ್ಞೆಗೆ ಆದ್ಯತೆ ನೀಡುತ್ತಿದ್ದರು.  ಇತರರನ್ನು ಪ್ರಾಮಾಣಿಕವಾಗಿ ಪರಿಶೀಲಿಸುತ್ತಿದ್ದರು. ಹಾಸ್ಯ ಚಟಾಕಿಗಳನ್ನು ಸಿಡಿಸುತ್ತಿದ್ದರು. ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲು ನನಗೆ ತುಂಬಾ ಸಹಾಯ ಮಾಡಿದರು” ಎಂದಿದ್ದಾರೆ.

“ಅತ್ಯುತ್ತಮ ಮನುಷ್ಯ ಇಷ್ಟೊಂದು ಕ್ರಿಯಾಶೀಲವಾಗಿರಲು, ಪ್ರೀತಿಯಿಂದ ಕೂಡಿರಲು, ಸರಳವಾಗಿರಲು ಸಾಧ್ಯವೆಂದು ನನಗೆ ತಿಳಿಯದು. ಕೆಲವು ಕಾರಣಗಳಿಂದಾಗಿ ನಮ್ಮ ಚಿತ್ರಗಳ ಕೆಲವು ಹಾಡುಗಳನ್ನು Instagram ನಲ್ಲಿ ಹಂಚಿಕೊಳ್ಳಬೇಕು ಅನಿಸಿತು. ಅವರ ಜೊತೆ ಮತ್ತೆ ಕೆಲಸ ಮಾಡುವುದು ಎಷ್ಟು ಅದ್ಭುತ ಎಂದು ನಾಲ್ಕು ದಿನಗಳ ಹಿಂದೆ ಅನಿಸಿತು” ಎಂದು ಅವರು ಹೇಳಿದ್ದಾರೆ.

“ರಾಜ್‌ಕುಮಾರ್‌ ಅವರ ಕುಟುಂಬ ಪ್ರೇಕ್ಷಕರಿಂದ ಸಂಪಾದಿಸಿದ ಪ್ರೀತಿ ಇದೆಯಲ್ಲ- ಪ್ರೀತಿ, ಗೌರವ, ಅಭಿಮಾನ ಮತ್ತು ಎಲ್ಲರೂ ನಮ್ಮವರೆಂಬ ಭಾವನೆ- ನಾನು ಅದನ್ನು ಅರ್ಥಮಾಡಿಕೊಂಡೆ. ಪುನೀತ್‌ ಅವರೊಂದಿಗೆ ಎರಡು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಒಬ್ಬ ಮನುಷ್ಯ ಎಷ್ಟೊಂದು ಆಕರ್ಷಕ ವ್ಯಕ್ತಿಯಾಗಿರಬಲ್ಲ ಎಂದು ತಿಳಿದುಕೊಂಡೆ” ಎಂದಿದ್ದಾರೆ.

“ಕಲೆ, ಪ್ರಸಿದ್ಧಿ ಎಲ್ಲವನ್ನು ಸಹಜವಾಗಿ ಸ್ವೀಕರಿಸಿ ಪುನೀತ್ ರಾಜ್‌ಕುಮಾರ್‌ ನಡೆದರು” ಎಂದು ಪಾರ್ವತಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...